Homeಸಿನಿಮಾಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ...

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ಪಟ್ಟಿಯಿಂದ ಧೋನಿ ಹೊರಕ್ಕೆ..

- Advertisement -
- Advertisement -

ಭಾರತದ ಮಾಜಿ ಕ್ಯಾಪ್ಟನ್‌, ಮೊದಲ ಟಿ20 ಪ್ರಶಸ್ತಿ ಗೆದ್ದುಕೊಟ್ಟ, ಎರಡನೇ ವಿಶ್ವಕಪ್‌ ಗೆದ್ದುಕೊಟ್ಟ, ಲಕ್ಷಾಂತರ ಅಭಿಮಾನಿಗಳ ಪಾಲಿನ ಹೆಲಿಕ್ಯಾಪ್ಟರ್‌ ಶೂಟರ್‌ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನ ಮುಗಿಯಿತೆ ಎಂಬ ಪ್ರಶ್ನೆಗಳು ಇಂದು ಜೋರಾಗಿ ಕೇಳಿಬಂದಿವೆ. ಇದಕ್ಕೆ ಕಾರಣ ಅವರನ್ನು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಋತುವಿಗೆ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದ್ದು ಮಹತ್ವದ ಹೆಜ್ಜೆಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಟ್ಟಿದೆ. ಅವರು ಕಳೆದ ಋತುವಿನಲ್ಲಿ ’ಎ’ ಗ್ರೇಡ್‌ನಲ್ಲಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಮೂವರು ಉನ್ನತ ವಿಭಾಗದಲ್ಲಿ (ಎ +) 7 ಕೋಟಿಗಳಿಂದ ವೇತನವನ್ನು ಪಡೆಯುತ್ತಾರೆ.

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಧೋನಿ ಫಾರ್ಮ್‌ ಚೆನ್ನಾಗಿಲ್ಲ. ಇದರಿಮದ ಭಾರತೀಯ ತಂಡದಲ್ಲಿ ಧೋನಿಯ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಕಂಡುಬಂದಿವೆ.

ಎಂಎಸ್ ಧೋನಿ 50 ಓವರ್ ಮತ್ತು 20 ಓವರ್‌ಗಳ ವಿಶ್ವಕಪ್ ಗೆದ್ದ ಏಕೈಕ ಅಂತರರಾಷ್ಟ್ರೀಯ ನಾಯಕ. ಅವರು 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಪ್ರಶಸ್ತಿಗೆ ದಕ್ಕಿಸಿಕೊಟ್ಟಿದ್ದರು. ಭಾರತಕ್ಕಾಗಿ 90 ಟೆಸ್ಟ್ ಪಂದ್ಯಗಳಲ್ಲಿ ಧೋನಿ 4876 ರನ್ ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 50.57 ರ ಸರಾಸರಿಯಲ್ಲಿ ಅವರ 10,773 ರನ್ ಗಳಿಸುವಿಕೆಯು ಭಾರತದ ಅತ್ಯುತ್ತಮ 50 ಓವರ್‌ಗಳ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. 98 ಟಿ20 ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ.

“ಈ ಐತಿಹಾಸಿಕ ನಾಯಕ ಶೀಘ್ರದಲ್ಲೇ ತನ್ನ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಬಹುದು ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಏಕೆಂದರೆ ಅವರು ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌‌ನಲ್ಲಿದ್ದಾರೆ” ಎಂದು ಮುಖ್ಯ ತರಬೇತುದಾರ ರವಿಶಾಸ್ತ್ರಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದಲ್ಲಿ ದೈತ್ಯ ದಾಪುಗಾಲಿಟ್ಟಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ವೇಗದ ಬೌಲರ್‌ ಆಗಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರು ಕೊಹ್ಲಿ ಮತ್ತು ರೋಹಿತ್ ಅವರ ಸಮನಾದ ಉನ್ನತ ಶ್ರೇಣಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರೂ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರನ್ನು ಗ್ರೇಡ್ ಬಿ ಯಿಂದ ಗ್ರೇಡ್ ಎ ಆಗಿ ಬಡ್ತಿ ನೀಡಲಾಗಿದೆ.

ನಾಲ್ಕು ವಿಭಾಗಗಳಾಗಿ 27 ಆಟಗಾರರನ್ನು ವಿಂಗಡಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಅವರು ಎ + ವಿಭಾಗದಲ್ಲಿರುವ ಮೂವರಾಗಿದ್ದಾರೆ.

ಧೋನಿಯೊಂದಿಗೆ ಅಂಬಾಟಿ ರಾಯುಡು, ಖಲೀಲ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಒಪ್ಪಂದದಿಂದ ಕೈಬಿಡಲಾಗಿದೆ. ಟೆಸ್ಟ್ ಓಪನರ್ ಮಾಯಾಂಕ್ ಅಗರ್ವಾಲ್ ಅವರು ವರ್ಗ ಬಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನವದೀಪ್ ಸೈನಿ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸಿ ವರ್ಗದಲ್ಲಿ ಸೇರಿಸಲಾಗಿದೆ.

ಮುಂಬರುವ ‌ಋತುವಿನಲ್ಲಿ ಬಿಸಿಸಿಐ ಒಪ್ಪಂದವು ಹೀಗಿದೆ:

ವರ್ಗ ಎ: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್

ವರ್ಗ ಬಿ: ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್.

ವರ್ಗ ಸಿ: ಕೇದಾರ ಜಾಧವ್, ನವದೀಪ್ ಸೈನಿ, ದೀಪಕ್ ಚಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....