Homeಸಿನಿಮಾಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ...

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ಪಟ್ಟಿಯಿಂದ ಧೋನಿ ಹೊರಕ್ಕೆ..

- Advertisement -
- Advertisement -

ಭಾರತದ ಮಾಜಿ ಕ್ಯಾಪ್ಟನ್‌, ಮೊದಲ ಟಿ20 ಪ್ರಶಸ್ತಿ ಗೆದ್ದುಕೊಟ್ಟ, ಎರಡನೇ ವಿಶ್ವಕಪ್‌ ಗೆದ್ದುಕೊಟ್ಟ, ಲಕ್ಷಾಂತರ ಅಭಿಮಾನಿಗಳ ಪಾಲಿನ ಹೆಲಿಕ್ಯಾಪ್ಟರ್‌ ಶೂಟರ್‌ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನ ಮುಗಿಯಿತೆ ಎಂಬ ಪ್ರಶ್ನೆಗಳು ಇಂದು ಜೋರಾಗಿ ಕೇಳಿಬಂದಿವೆ. ಇದಕ್ಕೆ ಕಾರಣ ಅವರನ್ನು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಋತುವಿಗೆ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದ್ದು ಮಹತ್ವದ ಹೆಜ್ಜೆಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಟ್ಟಿದೆ. ಅವರು ಕಳೆದ ಋತುವಿನಲ್ಲಿ ’ಎ’ ಗ್ರೇಡ್‌ನಲ್ಲಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಮೂವರು ಉನ್ನತ ವಿಭಾಗದಲ್ಲಿ (ಎ +) 7 ಕೋಟಿಗಳಿಂದ ವೇತನವನ್ನು ಪಡೆಯುತ್ತಾರೆ.

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಧೋನಿ ಫಾರ್ಮ್‌ ಚೆನ್ನಾಗಿಲ್ಲ. ಇದರಿಮದ ಭಾರತೀಯ ತಂಡದಲ್ಲಿ ಧೋನಿಯ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಕಂಡುಬಂದಿವೆ.

ಎಂಎಸ್ ಧೋನಿ 50 ಓವರ್ ಮತ್ತು 20 ಓವರ್‌ಗಳ ವಿಶ್ವಕಪ್ ಗೆದ್ದ ಏಕೈಕ ಅಂತರರಾಷ್ಟ್ರೀಯ ನಾಯಕ. ಅವರು 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಪ್ರಶಸ್ತಿಗೆ ದಕ್ಕಿಸಿಕೊಟ್ಟಿದ್ದರು. ಭಾರತಕ್ಕಾಗಿ 90 ಟೆಸ್ಟ್ ಪಂದ್ಯಗಳಲ್ಲಿ ಧೋನಿ 4876 ರನ್ ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 50.57 ರ ಸರಾಸರಿಯಲ್ಲಿ ಅವರ 10,773 ರನ್ ಗಳಿಸುವಿಕೆಯು ಭಾರತದ ಅತ್ಯುತ್ತಮ 50 ಓವರ್‌ಗಳ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. 98 ಟಿ20 ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ.

“ಈ ಐತಿಹಾಸಿಕ ನಾಯಕ ಶೀಘ್ರದಲ್ಲೇ ತನ್ನ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಬಹುದು ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಏಕೆಂದರೆ ಅವರು ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌‌ನಲ್ಲಿದ್ದಾರೆ” ಎಂದು ಮುಖ್ಯ ತರಬೇತುದಾರ ರವಿಶಾಸ್ತ್ರಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದಲ್ಲಿ ದೈತ್ಯ ದಾಪುಗಾಲಿಟ್ಟಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ವೇಗದ ಬೌಲರ್‌ ಆಗಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರು ಕೊಹ್ಲಿ ಮತ್ತು ರೋಹಿತ್ ಅವರ ಸಮನಾದ ಉನ್ನತ ಶ್ರೇಣಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರೂ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರನ್ನು ಗ್ರೇಡ್ ಬಿ ಯಿಂದ ಗ್ರೇಡ್ ಎ ಆಗಿ ಬಡ್ತಿ ನೀಡಲಾಗಿದೆ.

ನಾಲ್ಕು ವಿಭಾಗಗಳಾಗಿ 27 ಆಟಗಾರರನ್ನು ವಿಂಗಡಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಅವರು ಎ + ವಿಭಾಗದಲ್ಲಿರುವ ಮೂವರಾಗಿದ್ದಾರೆ.

ಧೋನಿಯೊಂದಿಗೆ ಅಂಬಾಟಿ ರಾಯುಡು, ಖಲೀಲ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಒಪ್ಪಂದದಿಂದ ಕೈಬಿಡಲಾಗಿದೆ. ಟೆಸ್ಟ್ ಓಪನರ್ ಮಾಯಾಂಕ್ ಅಗರ್ವಾಲ್ ಅವರು ವರ್ಗ ಬಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನವದೀಪ್ ಸೈನಿ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸಿ ವರ್ಗದಲ್ಲಿ ಸೇರಿಸಲಾಗಿದೆ.

ಮುಂಬರುವ ‌ಋತುವಿನಲ್ಲಿ ಬಿಸಿಸಿಐ ಒಪ್ಪಂದವು ಹೀಗಿದೆ:

ವರ್ಗ ಎ: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್

ವರ್ಗ ಬಿ: ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್.

ವರ್ಗ ಸಿ: ಕೇದಾರ ಜಾಧವ್, ನವದೀಪ್ ಸೈನಿ, ದೀಪಕ್ ಚಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...