Homeಕರ್ನಾಟಕಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

- Advertisement -
- Advertisement -

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದವನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಗಾಂಧಿ ಭವನದಲ್ಲಿ ಗದಗದ ಲಡಾಯಿ ಪ್ರಕಾಶನ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನವೀನ್‌ ಸೂರಿಂಜೆ ಅವರು ಬರೆದಿರುವ ‘ಮಹೇಂದ್ರ ಕುಮಾರ್, ನಡು ಬಗ್ಗಿಸದ ಎದೆಯ ದನಿ. ಹಿಂದುತ್ವವಾದಿಯ ಅನುಭವ ಕಥನ’ ಕೃತಿ ಬಿಡುಗಡೆ ಮಾಡಿದ ಸಚಿವ ಸಂತೋಷ್‌ ಲಾಡ್‌, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹಿಂದುತ್ವದ ಆಧಾರದಲ್ಲೇ ರಾಜಕೀಯ ಮಾಡುತ್ತಿವೆ. ಯುವಜನರನ್ನು ದುರುಪಯೋಗ ಮಾಡುತ್ತಿದೆ. ಇಂತಹ ಸಮಯದಲ್ಲಿ ಸಂವಿಧಾನದ ಮೂಲಕ ದೇಶದ ಎಲ್ಲ ಜನರಿಗೂ ಸ್ವಾಭಿಮಾನದ ಬದುಕುಕೊಟ್ಟ ಅಂಬೇಡ್ಕರ್‌ ವಾದವನ್ನು ಪರ್ಯಾಯ ಅಸ್ತ್ರವಾಗಿ ಬಳಸಬೇಕಿದೆ, ಹಾಗೆಯೇ ಅಂಬೇಡ್ಕರ್‌ ಅವರ ಆಶಯದ ‘ಹಿಂದೂ ಕೋಡ್‌ ಬಿಲ್ಸ್’ ಕುರಿತು ವ್ಯಾಪಕ ಚರ್ಚೆಗಳು ನಡೆಯಬೇಕು. ಬಿಜೆಪಿ, ಆರೆಸ್ಸೆಸ್‌ನ್ನು ಬೈಯುತ್ತಾ ಕೂರುವುದು ಒಂದು ಹಂತದವರಿಗೆ ಸರಿ. ಆದರೆ ನಮ್ಮಲ್ಲಿ ಒಂದು ನರೇಷನ್ ಬೇಕು ಆ ನರೇಷನ್‍ಗೆ ಒಬ್ಬ ಹೀರೋ ಬೇಕು. ನನ್ನ ಅಭಿಪ್ರಾಯದಲ್ಲಿ ಈ ನರೇಷನ್‍ಗೆ, ಹಿಂದುತ್ವವಾದಕ್ಕೆ ಪರ್ಯಾಯವಾಗಿ ಯಾವುದಾದರೂ ವಾದ ಇದ್ದರೆ ಅದು ಅಂಬೇಡ್ಕರ್ ವಾದ  ಎಂದು ಹೇಳಿದ್ದಾರೆ.

ನಟ ಪ್ರಕಾಶ್‌ ರಾಜ್‌ ಮಾತನಾಡಿ, ‘ರೈತರು, ಬಡವರ ವಿರೋಧಿ ಮನೋಸ್ಥಿತಿಯ ಅಧಿಕಾರಸ್ಥರನ್ನು ಏಕವಚನದಲ್ಲಿ ಟೀಕಿಸಿದ್ದಕ್ಕೆ ಕೆಲವರು ಬೇಸರ ಮಾಡಿಕೊಂಡಿದ್ದಾರೆ. ಹಾಗಾಗಿ, ಇನ್ನು ಮುಂದೆ ಅವರನ್ನು ‘ಮಹಾಪ್ರಭುಗಳು’ ಎಂದೇ ಸಂಬೋಧಿಸುವೆ, ಜನರ ಪರವಾಗಿರುವ ನಾನು ಎಂದಿಗೂ ಪ್ರತಿಪಕ್ಷದ ಸ್ಥಾನದಲ್ಲಿರುತ್ತೇನೆ. ಜನರ ಧ್ವನಿಯಾಗಿ ಆಡಳಿತ ನಡೆಸುವವರನ್ನು ಟೀಕಿಸುತ್ತೇನೆ. ಅದು ಯಾವ ಪಕ್ಷವೇ ಆಗಿರಲಿ. ಕರ್ನಾಟಕದಲ್ಲಿ ಬಿಜೆಪಿ ತನ್ನ ಕಪಟತನದಿಂದ ಸೋಲು ಕಂಡಿತು. ಈಗ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸೋಲದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ಹೇಳಿದ್ದಾರೆ.

ಮಹಾಪ್ರಭುಗಳ ಅಂತಪುರದಲ್ಲಿ ವಿಡಿಯೊ ಗ್ರಾಫರ್, ಫೋಟೊ ಗ್ರಾಫರ್, ವಸ್ತ್ರವಿನ್ಯಾಸಕರೇ ತುಂಬಿದ್ದಾರೆ. ಅವರ ಸಂಘ ಪರಿವಾರದಲ್ಲಿ ಬಡವರು, ರೈತರು, ಮಣಿಪುರಿಗಳಿಗೆ ಸ್ಥಾನವಿಲ್ಲ, ಅವರ ರಾಮನೂ ಕುಟುಂಬದ ರಾಮನಲ್ಲ, ಕೊಲ್ಲುವ ರಾಮ, ಕುಟುಂಬ ದ್ವೇಷಿ ಮನೋಭಾವದ ಮಹಾನುಭಾವರು ಅದಕ್ಕಾಗಿಯೇ ಸೀತೆ ಹೊರತಾದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಪೂರ್ಣಗೊಳ್ಳದ ದೇವಸ್ಥಾನ, ಆಸ್ಪತ್ರೆ ಉದ್ಘಾಟಿಸಿ ವಾಸ್ತವ ಮರೆಮಾಚುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ವಕೀಲ ಎಸ್‌.ಬಾಲನ್‌, ಕಾಂಗ್ರೆಸ್‌ ಮುಖಂಡರಾದ ಸುಧೀರ್ ಮುರೋಳ್ಳಿ, ನಿಕೇತ್‌ ರಾಜ್‌ ಮೌರ್ಯ, ಶಾಸಕಿ ನಯನಾ ಮೋಟಮ್ಮ, ಡಿವೈಎಫ್‌ಐ ರಾಜ್ಯ ಉಪಾಧ್ಯಕ್ಷ ಮುನೀರ್‌ ಕಾಟಿಪಳ್ಳ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...