Homeಕರ್ನಾಟಕಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

- Advertisement -
- Advertisement -

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದವನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಗಾಂಧಿ ಭವನದಲ್ಲಿ ಗದಗದ ಲಡಾಯಿ ಪ್ರಕಾಶನ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನವೀನ್‌ ಸೂರಿಂಜೆ ಅವರು ಬರೆದಿರುವ ‘ಮಹೇಂದ್ರ ಕುಮಾರ್, ನಡು ಬಗ್ಗಿಸದ ಎದೆಯ ದನಿ. ಹಿಂದುತ್ವವಾದಿಯ ಅನುಭವ ಕಥನ’ ಕೃತಿ ಬಿಡುಗಡೆ ಮಾಡಿದ ಸಚಿವ ಸಂತೋಷ್‌ ಲಾಡ್‌, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹಿಂದುತ್ವದ ಆಧಾರದಲ್ಲೇ ರಾಜಕೀಯ ಮಾಡುತ್ತಿವೆ. ಯುವಜನರನ್ನು ದುರುಪಯೋಗ ಮಾಡುತ್ತಿದೆ. ಇಂತಹ ಸಮಯದಲ್ಲಿ ಸಂವಿಧಾನದ ಮೂಲಕ ದೇಶದ ಎಲ್ಲ ಜನರಿಗೂ ಸ್ವಾಭಿಮಾನದ ಬದುಕುಕೊಟ್ಟ ಅಂಬೇಡ್ಕರ್‌ ವಾದವನ್ನು ಪರ್ಯಾಯ ಅಸ್ತ್ರವಾಗಿ ಬಳಸಬೇಕಿದೆ, ಹಾಗೆಯೇ ಅಂಬೇಡ್ಕರ್‌ ಅವರ ಆಶಯದ ‘ಹಿಂದೂ ಕೋಡ್‌ ಬಿಲ್ಸ್’ ಕುರಿತು ವ್ಯಾಪಕ ಚರ್ಚೆಗಳು ನಡೆಯಬೇಕು. ಬಿಜೆಪಿ, ಆರೆಸ್ಸೆಸ್‌ನ್ನು ಬೈಯುತ್ತಾ ಕೂರುವುದು ಒಂದು ಹಂತದವರಿಗೆ ಸರಿ. ಆದರೆ ನಮ್ಮಲ್ಲಿ ಒಂದು ನರೇಷನ್ ಬೇಕು ಆ ನರೇಷನ್‍ಗೆ ಒಬ್ಬ ಹೀರೋ ಬೇಕು. ನನ್ನ ಅಭಿಪ್ರಾಯದಲ್ಲಿ ಈ ನರೇಷನ್‍ಗೆ, ಹಿಂದುತ್ವವಾದಕ್ಕೆ ಪರ್ಯಾಯವಾಗಿ ಯಾವುದಾದರೂ ವಾದ ಇದ್ದರೆ ಅದು ಅಂಬೇಡ್ಕರ್ ವಾದ  ಎಂದು ಹೇಳಿದ್ದಾರೆ.

ನಟ ಪ್ರಕಾಶ್‌ ರಾಜ್‌ ಮಾತನಾಡಿ, ‘ರೈತರು, ಬಡವರ ವಿರೋಧಿ ಮನೋಸ್ಥಿತಿಯ ಅಧಿಕಾರಸ್ಥರನ್ನು ಏಕವಚನದಲ್ಲಿ ಟೀಕಿಸಿದ್ದಕ್ಕೆ ಕೆಲವರು ಬೇಸರ ಮಾಡಿಕೊಂಡಿದ್ದಾರೆ. ಹಾಗಾಗಿ, ಇನ್ನು ಮುಂದೆ ಅವರನ್ನು ‘ಮಹಾಪ್ರಭುಗಳು’ ಎಂದೇ ಸಂಬೋಧಿಸುವೆ, ಜನರ ಪರವಾಗಿರುವ ನಾನು ಎಂದಿಗೂ ಪ್ರತಿಪಕ್ಷದ ಸ್ಥಾನದಲ್ಲಿರುತ್ತೇನೆ. ಜನರ ಧ್ವನಿಯಾಗಿ ಆಡಳಿತ ನಡೆಸುವವರನ್ನು ಟೀಕಿಸುತ್ತೇನೆ. ಅದು ಯಾವ ಪಕ್ಷವೇ ಆಗಿರಲಿ. ಕರ್ನಾಟಕದಲ್ಲಿ ಬಿಜೆಪಿ ತನ್ನ ಕಪಟತನದಿಂದ ಸೋಲು ಕಂಡಿತು. ಈಗ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸೋಲದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ಹೇಳಿದ್ದಾರೆ.

ಮಹಾಪ್ರಭುಗಳ ಅಂತಪುರದಲ್ಲಿ ವಿಡಿಯೊ ಗ್ರಾಫರ್, ಫೋಟೊ ಗ್ರಾಫರ್, ವಸ್ತ್ರವಿನ್ಯಾಸಕರೇ ತುಂಬಿದ್ದಾರೆ. ಅವರ ಸಂಘ ಪರಿವಾರದಲ್ಲಿ ಬಡವರು, ರೈತರು, ಮಣಿಪುರಿಗಳಿಗೆ ಸ್ಥಾನವಿಲ್ಲ, ಅವರ ರಾಮನೂ ಕುಟುಂಬದ ರಾಮನಲ್ಲ, ಕೊಲ್ಲುವ ರಾಮ, ಕುಟುಂಬ ದ್ವೇಷಿ ಮನೋಭಾವದ ಮಹಾನುಭಾವರು ಅದಕ್ಕಾಗಿಯೇ ಸೀತೆ ಹೊರತಾದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಪೂರ್ಣಗೊಳ್ಳದ ದೇವಸ್ಥಾನ, ಆಸ್ಪತ್ರೆ ಉದ್ಘಾಟಿಸಿ ವಾಸ್ತವ ಮರೆಮಾಚುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ವಕೀಲ ಎಸ್‌.ಬಾಲನ್‌, ಕಾಂಗ್ರೆಸ್‌ ಮುಖಂಡರಾದ ಸುಧೀರ್ ಮುರೋಳ್ಳಿ, ನಿಕೇತ್‌ ರಾಜ್‌ ಮೌರ್ಯ, ಶಾಸಕಿ ನಯನಾ ಮೋಟಮ್ಮ, ಡಿವೈಎಫ್‌ಐ ರಾಜ್ಯ ಉಪಾಧ್ಯಕ್ಷ ಮುನೀರ್‌ ಕಾಟಿಪಳ್ಳ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...