Homeಕರ್ನಾಟಕಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದ ಪ್ರಚಾರ ಮಾಡಬೇಕು: ಸಚಿವ ಸಂತೋಷ್‌ ಲಾಡ್‌

- Advertisement -
- Advertisement -

ಹಿಂದುತ್ವಕ್ಕೆ ಪರ್ಯಾಯವಾಗಿ ಅಂಬೇಡ್ಕರ್ ವಾದವನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಗಾಂಧಿ ಭವನದಲ್ಲಿ ಗದಗದ ಲಡಾಯಿ ಪ್ರಕಾಶನ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನವೀನ್‌ ಸೂರಿಂಜೆ ಅವರು ಬರೆದಿರುವ ‘ಮಹೇಂದ್ರ ಕುಮಾರ್, ನಡು ಬಗ್ಗಿಸದ ಎದೆಯ ದನಿ. ಹಿಂದುತ್ವವಾದಿಯ ಅನುಭವ ಕಥನ’ ಕೃತಿ ಬಿಡುಗಡೆ ಮಾಡಿದ ಸಚಿವ ಸಂತೋಷ್‌ ಲಾಡ್‌, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹಿಂದುತ್ವದ ಆಧಾರದಲ್ಲೇ ರಾಜಕೀಯ ಮಾಡುತ್ತಿವೆ. ಯುವಜನರನ್ನು ದುರುಪಯೋಗ ಮಾಡುತ್ತಿದೆ. ಇಂತಹ ಸಮಯದಲ್ಲಿ ಸಂವಿಧಾನದ ಮೂಲಕ ದೇಶದ ಎಲ್ಲ ಜನರಿಗೂ ಸ್ವಾಭಿಮಾನದ ಬದುಕುಕೊಟ್ಟ ಅಂಬೇಡ್ಕರ್‌ ವಾದವನ್ನು ಪರ್ಯಾಯ ಅಸ್ತ್ರವಾಗಿ ಬಳಸಬೇಕಿದೆ, ಹಾಗೆಯೇ ಅಂಬೇಡ್ಕರ್‌ ಅವರ ಆಶಯದ ‘ಹಿಂದೂ ಕೋಡ್‌ ಬಿಲ್ಸ್’ ಕುರಿತು ವ್ಯಾಪಕ ಚರ್ಚೆಗಳು ನಡೆಯಬೇಕು. ಬಿಜೆಪಿ, ಆರೆಸ್ಸೆಸ್‌ನ್ನು ಬೈಯುತ್ತಾ ಕೂರುವುದು ಒಂದು ಹಂತದವರಿಗೆ ಸರಿ. ಆದರೆ ನಮ್ಮಲ್ಲಿ ಒಂದು ನರೇಷನ್ ಬೇಕು ಆ ನರೇಷನ್‍ಗೆ ಒಬ್ಬ ಹೀರೋ ಬೇಕು. ನನ್ನ ಅಭಿಪ್ರಾಯದಲ್ಲಿ ಈ ನರೇಷನ್‍ಗೆ, ಹಿಂದುತ್ವವಾದಕ್ಕೆ ಪರ್ಯಾಯವಾಗಿ ಯಾವುದಾದರೂ ವಾದ ಇದ್ದರೆ ಅದು ಅಂಬೇಡ್ಕರ್ ವಾದ  ಎಂದು ಹೇಳಿದ್ದಾರೆ.

ನಟ ಪ್ರಕಾಶ್‌ ರಾಜ್‌ ಮಾತನಾಡಿ, ‘ರೈತರು, ಬಡವರ ವಿರೋಧಿ ಮನೋಸ್ಥಿತಿಯ ಅಧಿಕಾರಸ್ಥರನ್ನು ಏಕವಚನದಲ್ಲಿ ಟೀಕಿಸಿದ್ದಕ್ಕೆ ಕೆಲವರು ಬೇಸರ ಮಾಡಿಕೊಂಡಿದ್ದಾರೆ. ಹಾಗಾಗಿ, ಇನ್ನು ಮುಂದೆ ಅವರನ್ನು ‘ಮಹಾಪ್ರಭುಗಳು’ ಎಂದೇ ಸಂಬೋಧಿಸುವೆ, ಜನರ ಪರವಾಗಿರುವ ನಾನು ಎಂದಿಗೂ ಪ್ರತಿಪಕ್ಷದ ಸ್ಥಾನದಲ್ಲಿರುತ್ತೇನೆ. ಜನರ ಧ್ವನಿಯಾಗಿ ಆಡಳಿತ ನಡೆಸುವವರನ್ನು ಟೀಕಿಸುತ್ತೇನೆ. ಅದು ಯಾವ ಪಕ್ಷವೇ ಆಗಿರಲಿ. ಕರ್ನಾಟಕದಲ್ಲಿ ಬಿಜೆಪಿ ತನ್ನ ಕಪಟತನದಿಂದ ಸೋಲು ಕಂಡಿತು. ಈಗ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸೋಲದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ಹೇಳಿದ್ದಾರೆ.

ಮಹಾಪ್ರಭುಗಳ ಅಂತಪುರದಲ್ಲಿ ವಿಡಿಯೊ ಗ್ರಾಫರ್, ಫೋಟೊ ಗ್ರಾಫರ್, ವಸ್ತ್ರವಿನ್ಯಾಸಕರೇ ತುಂಬಿದ್ದಾರೆ. ಅವರ ಸಂಘ ಪರಿವಾರದಲ್ಲಿ ಬಡವರು, ರೈತರು, ಮಣಿಪುರಿಗಳಿಗೆ ಸ್ಥಾನವಿಲ್ಲ, ಅವರ ರಾಮನೂ ಕುಟುಂಬದ ರಾಮನಲ್ಲ, ಕೊಲ್ಲುವ ರಾಮ, ಕುಟುಂಬ ದ್ವೇಷಿ ಮನೋಭಾವದ ಮಹಾನುಭಾವರು ಅದಕ್ಕಾಗಿಯೇ ಸೀತೆ ಹೊರತಾದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಪೂರ್ಣಗೊಳ್ಳದ ದೇವಸ್ಥಾನ, ಆಸ್ಪತ್ರೆ ಉದ್ಘಾಟಿಸಿ ವಾಸ್ತವ ಮರೆಮಾಚುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ವಕೀಲ ಎಸ್‌.ಬಾಲನ್‌, ಕಾಂಗ್ರೆಸ್‌ ಮುಖಂಡರಾದ ಸುಧೀರ್ ಮುರೋಳ್ಳಿ, ನಿಕೇತ್‌ ರಾಜ್‌ ಮೌರ್ಯ, ಶಾಸಕಿ ನಯನಾ ಮೋಟಮ್ಮ, ಡಿವೈಎಫ್‌ಐ ರಾಜ್ಯ ಉಪಾಧ್ಯಕ್ಷ ಮುನೀರ್‌ ಕಾಟಿಪಳ್ಳ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...