Homeಕರ್ನಾಟಕಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಧ್ಯಕ್ಷ ಮಹೇಶ್ ಜೋಶಿ ಅವರ ಈ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಈ ಬಗ್ಗೆ ಕಸಾಪ ಸದಸ್ಯರಾದ ಪುರುಷೋತ್ತಮ ಬಿಳಿಮಲೆಯವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಹೀಗೇಕೆ ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ. “ದೂರದರ್ಶನದ ಹಿರಿಯ ಅಧಿಕಾರಿ ನಿರ್ಮಲಾ ಎಲಿಗಾರ್ ಅವರು ಹಾವೇರಿ ಸಮ್ಮೇಳನದಲ್ಲಿ ತಮಗಾದ ತೊಂದರೆಗಳನ್ನು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟಿಸಿರುವುದನ್ನು ನಾನು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದು ಪ್ರಜಾಪ್ರಭುತ್ವ ನಮಗೆ ಕೊಟ್ಟಿರುವ ಹಕ್ಕು. ಇದನ್ನು ಉಪಯೋಗಿಸಿಕೊಂಡು ನಾವು ಹಲವರು ನಮ್ಮದೇ ರೀತಿಯಲ್ಲಿ ಪ್ರತಿಭಟಿಸಿದ್ದೇವೆ” ಎಂದಿದ್ದಾರೆ.

“ಸುಮಾರು 15 ವರ್ಷಗಳಿಂದ ವೈಯಕ್ತಿಕವಾಗಿ ಗೊತ್ತಿರುವ ನನ್ನನ್ನು ಜೋಶಿ ಅವರು ʼಪೆಂಡಾಲ್‌ ಹಾಕಿಸುವʼ ಮಟ್ಟಕ್ಕೆ ಇಳಿಸಿದ್ದಾರೆ. ಬೌದ್ದಿಕ ಚರ್ಚೆಗಳಲ್ಲಿ ವಿಶ್ವಾಸ ಇರುವ ನಾನು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಲಿಲ್ಲ. ಅಧಿಕಾರ ಗೆಳೆತನವನ್ನು ಮರೆಸಿಬಿಡುವುದು ನನಗೇನೂ ಹೊಸತಲ್ಲ. ಆದರೆ ಈಗ ಕಸಾಪವು ನಿರ್ಮಲಾ ಎಲಿಗಾರ್ ಅವರ ಮೇಲೆ ಕ್ರಮ ಕೈಗೊಂಡಿದೆ. ಅವರ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಅವರಿಗೆ ನೀಡಲಾದ ಪ್ರಶಸ್ತಿಯನ್ನು ಹಿಂದೆಗೆದುಕೊಳ್ಳಲಾಗಿದೆ. ಇವು ಸರಿಯಾದ ಕ್ರಮಗಳಲ್ಲ. ಕಾರಣ ಕೂಡಲೇ ಅಮಾನತು ಕ್ರಮವನ್ನು ಹಿಂತೆಗೆದುಕೊಳ್ಳಬೇಕಾಗಿ ನಾನು ನನ್ನ ಗೆಳೆಯರಾದ ಕಸಾಪ ಅಧ್ಯಕ್ಷರನ್ನು ಕೋರಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

“ನಮ್ಮನ್ನೆಲ್ಲ ಬೆಳೆಸಿದ ಸಂಸ್ಥೆಯೊಂದು ಈಗ ಹಿಡಿಯುತ್ತಿರುವ ಹಾದಿಯನ್ನು ನೋಡಿ ಸಿಟ್ಟು ಬರುತ್ತಿಲ್ಲ, ಬದಲು ವಿಷಾದವಾಗುತ್ತಿದೆ. ಕನ್ನಡದ ದೊಡ್ಡ ದೊಡ್ಡ ಸಾಹಿತಿಗಳೇ ಮೌನವಾಗಿರುವಾಗ ನನ್ನಂಥ ಹೊರನಾಡಿನವನಿಗೇಕೆ ಈ ಕೆಲಸ! ಬಹುಶ: ನಾವೇ ಮರ್ಯಾದೆಯಿಂದ ಹೊರಬರುವುದು ಸರಿಯೆಂದು ತೋರುತ್ತದೆ” ಎಂದು ಬಿಳಿಮಲೆ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮತ್ತೋರ್ವ ಕ.ಸಾ.ಪ. ಆಜೀವ ಸದಸ್ಯ ಹಾಗೂ ಹಿರಿಯ ಪತ್ರಕರ್ತರಾದ ಸಂಗಮೇಶ ಮೆಣಸಿನಕಾಯಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಪ್ರಜಾಪ್ರಭುತ್ವದ ವಿರುದ್ಧ ಕ.ಸಾ.ಪ.?” ಎಂದು ಪ್ರಶ್ನೆ ಮಾಡಿದ್ದಾರೆ. “‘ಡಾ. ನಿರ್ಮಲಾ ಎಲಿಗಾರ್‌ ಅವರಿಗೆ ಹಾವೇರಿ ಸಾಹಿತ್ಯ ಸಮ್ಮೇಳನದ ಘಟನೆಯಿಂದ ಎದುರಿಸಬೇಕಾಗಬಹುದಾದ ಪ್ರತೀಕಾರದ ಬಗ್ಗೆ ಎಚ್ಚರಿಸಿದ್ದೆ. ನಾವಂದುಕೊಂಡಂತೆ ಪರೋಕ್ಷ ಸೇಡು ತೀರಿಸಿಕೊಳ್ಳುತ್ತಿಲ್ಲ, ಬದಲಿಗೆ ಪ್ರತ್ಯಕ್ಷ ಸೇಡಿಗೇ ಮುಂದಾಗಿದ್ದಾರೆ ನಾಡೋಜರು!” ಎಂದು ಟೀಕಿಸಿದ್ದಾರೆ.

“ಅಷ್ಟಕ್ಕೂ ಆಜೀವ ಸದಸ್ಯತ್ವದಿಂದ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಡುವಂಥ ತಪ್ಪು ನೀವೇನು (ನಿರ್ಮಲಾ ಎಲಿಗಾರ) ಮಾಡಿದ್ದೀರೋ ನಾನರಿಯೆ. ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಘಟನೆ ವೇಳೆ ಹಾಜರಿದ್ದ ನನ್ನ ಆತ್ಮೀಯರು ಹೇಳುವ ಪ್ರಕಾರ ನೀವು ನಿಮಗಾಗಿಯೇ, ಅಂದರೆ ದೂರದರ್ಶನದ ಸಿಬ್ಬಂದಿಗಾಗಿ ಮೀಸಲಾಗಿದ್ದ ಸೌಲಭ್ಯವನ್ನು ಕೇಳಿದ್ದೀರಿ. ಸೂಕ್ತ ಸ್ಪಂದನೆ ಸಿಗದಿದ್ದಾಗ ಏರಿದ ದನಿಯಲ್ಲಿ ಪ್ರಶ್ನಿಸಿದ್ದೀರಿ. ವಿಡಿಯೊ ನೋಡಿದಾಗ ಅವರೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗೋಚರಿಸುತ್ತದೆ. ‘ಹಲೋ ಹೌ ಆರ್ ಯೂ…’ ಅಂತ ಬೇರೆ ಯಾರಿಗೋ ವಿಶ್ ಮಾಡುತ್ತ ಪಲಾಯನಗೈದಿದ್ದಾರೆ.”

”ಒಂದಂತೂ ಖುಷಿ-ನೇರವಾಗಿ ಅದೇ ಘಟನೆಯನ್ನು ಉಲ್ಲೇಖಿಸಿ, ‘ಶಿಸ್ತುಕ್ರಮ’ ಕೈಗೊಂಡು, ತಮ್ಮ ‘ಬುದ್ಧಿಮತ್ತೆ’ ಪ್ರದರ್ಶಿಸಿದ್ದಾರೆ! ಇಲ್ಲಿ ಸಮ್ಮೇಳನದ ವರದಿಗೆ ತೆರಳುವ ಪತ್ರಕರ್ತರು, ಕ.ಸಾ.ಪ. ಬೆಂಗಳೂರಿನ ಎಲ್ಲ ಆಜೀವ ಸದಸ್ಯರು, ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲ ಕನ್ನಡಾಭಿಮಾನಿಗಳು ಎಚ್ಚೆತ್ತುಕೊಳ್ಳಬೇಕಾದ ಕೆಲವು ಅಂಶಗಳಿವೆ” ಎಂದು ಉಲ್ಲೇಖಿಸಿದ್ದಾರೆ.

* ನೀವು (ನಿರ್ಮಲಾ) ಸೂಕ್ತ ಸೌಲಭ್ಯ ಪ್ರಶ್ನಿಸಿ, ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದಿದ್ದು ದೂರದರ್ಶನದ ಅಧಿಕಾರಿಯಾಗಿ! ಒಂದು ವೇಳೆ ನೀವು ಕ.ಸಾ.ಪ. ಆಜೀವ ಸದಸ್ಯರಲ್ಲದೇ ಇದ್ದಿದ್ದರೆ, ಕ.ಸಾ.ಪ. ಯಾವ ಕ್ರಮ ಜರುಗಿಸುತ್ತಿತ್ತೋ ಏನೋ?

* ನಿಮಗೆ ಪ್ರಶಸ್ತಿ ಘೋಷಣೆ ಆಗಿದ್ದು ಸಾಹಿತಿ ನಿರ್ಮಲಾ ಅವರಿಗೆ. ನೀವು ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದದ್ದು ದೂರದರ್ಶನದ ಅಧಿಕಾರಿಯಾಗಿ! ಹಾಗಾಗಿ ಪರಿಷತ್ತಿನ ಯಾವ ನಿಯಮಾವಳಿ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ? ಕ.ಸಾ.ಪ.ದ ಪ್ರತಿಯೊಬ್ಬ ಪದಾಧಿಕಾರಿ ಈ ಬಗ್ಗೆ ಸ್ಪಷ್ಟನೆ ಕೊಡಬೇಕು.

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಎಲ್ಲ ಪತ್ರಕರ್ತರು ಕ.ಸಾ.ಪ.ದ ಆಜೀವ ಸದಸ್ಯತ್ವ ಹೊಂದಿರಲೇಬೇಕೆಂಬ ನಿಯಮ ಬರಬಹುದು. ಸಮ್ಮೇಳನದಲ್ಲಿ ಕಂಡುಬರುವ ನ್ಯೂನತೆಗಳನ್ನು ಪ್ರಶ್ನಿಸಿದರೆ, ವರದಿ ಮಾಡಿದರೆ ಕ್ರಮ ಕೈಗೊಳ್ಳಲು ಬೇಕಲ್ಲ?

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಪತ್ರಕರ್ತರೆಲ್ಲ ನಿರ್ಮಲಾ ಅವರಂತೆ ಕ.ಸಾ.ಪ.ದ ಯಾವುದಾದರೊಂದು ಪ್ರಶಸ್ತಿ ಪಡೆದಿರಲೇಬೇಕೆಂಬ ನಿಯಮ ಜಾರಿಯಾಗಬಹುದು. ಪ್ರಶ್ನಿಸಿದರೆ ವಾಪಸ್ ಪಡೆಯಲು ಬೇಕಲ್ಲ?

* ಸಮ್ಮೇಳನಕ್ಕೆ ಬರುವ ಎಲ್ಲ ಕನ್ನಡಾಭಿಮಾನಿಗಳಿಗೂ ಇಂಥದೇ ನಿಯಮಗಳು ಪ್ರತ್ಯಕ್ಷ/ಪರೋಕ್ಷವಾಗಿ ಜಾರಿಯಾಗಬಹುದು. ಶಿಸ್ತು ಕ್ರಮ ಜರುಗಿಸಲು ಬೇಕಲ್ಲ?

ಈ ಮೇಲಿನ ತಕರಾರುಗಳನ್ನು ಸಂಗಮೇಶ ಅವರು ಎತ್ತಿದ್ದಾರೆ.

“ಒಟ್ಟಿನಲ್ಲಿ ಕ.ಸಾ.ಪ. ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧ ದಿಕ್ಕಿನಲ್ಲಿ ಹೊರಟಿರುವ ದಿಟ್ಟ ಸಂಕೇತವಿದು.
ಏನೇ ಇರಲಿ ಮೇಡಂ, ನೀವು ಕ.ಸಾ.ಪ. ಅಧ್ಯಕ್ಷರ ಅಹಂ ಅಷ್ಟೇ ಅಲ್ಲ, ನಿಮ್ಮ ಮಾಜಿ ಮೇಲಧಿಕಾರಿಯ ಅಹಂ ಅನ್ನೂ ಕೆಣಕಿದ್ದೀರಿ. ಇನ್ನೂ ಹುಷಾರಾಗಿ ಇರಬೇಕು. ನಿಮ್ಮೊಂದಿಗೆ ನಮ್ಮಂಥವರು ನೈತಿಕವಾಗಿ ಮಾತ್ರ ಜೊತೆಗಿರಲು ಸಾಧ್ಯ” ಎಂದು ಸಂಗಮೇಶ ಮೆಣಸಿನಕಾಯಿ ಅವರು ನಿರ್ಮಲಾ ಎಲಿಗಾರ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಮುಂದುವರೆದು ಕಸಾಪವನ್ನು ತರಾಟೆಗೆ ತಗೆದುಕೊಂಡಿರುವ ಸಂಗಮೇಶ್ ಅವರು, “ನಿರ್ಮಲಾ ಅವರ ಯಾವ ತಪ್ಪಿಗೆ ಯಾವ ಶಿಕ್ಷೆ ಕೊಡಬೇಕು ಎಂಬ ಪ್ರಾಥಮಿಕ ಜ್ಞಾನವೂ ಕ.ಸಾ.ಪ.ದಲ್ಲಿ ಇದ್ದಂತಿಲ್ಲ. ಅಂತೆಯೇ ಎರಡು ತಿಂಗಳು ತಲೆ ಕೆರೆದುಕೊಂಡು ಆಜೀವ ಸದಸ್ಯತ್ವ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಟ್ಟು ಸೇಡು ತೀರಿಸಿಕೊಳ್ಳಲಾಗಿದೆ. ಇದು ಪಕ್ಕಾ ಪುರುಷ ಅಹಂ, ಯಜಮಾನಿಕೆಯ ಬುದ್ಧಿಯೇ ಸರಿ. ಈ ಶಿಕ್ಷೆ ವಿಧಿಸಿರುವ ಕ.ಸಾ.ಪ. ಪದಾಧಿಕಾರಿಗಳಿಗೆ ಒಂದು ಪ್ರಶ್ನೆ. ಸಮ್ಮೇಳನದ ಪೆಂಡಾಲ್ ಹಾಕಲು ಬರುವ ಹುಡುಗ, ‘ಪೆಂಡಾಲ್ ಹಾಕಲು ಸ್ಥಳವೇ ಇಲ್ಲ, ಎಲ್ಲಿ ಹಾಕಲಿ?’ ಅಂತ ಕೇಳಿದರೆ ಅವನ ಆಜೀವ ಸದಸ್ಯತ್ವ ರದ್ದು ಮಾಡ್ತೀರಾ? ಈಗ ಅಂಥದೇ ಕೆಲಸ ಮಾಡಿದ್ದೀರಿ. ಕೂಡಲೇ ಸರಿಯಾಗಿ ಓದಿಕೊಂಡಿರುವ ಒಬ್ಬ ಕಾನೂನು ಸಲಹೆಗಾರನನ್ನು ನೇಮಿಸಿಕೊಳ್ಳಿ” ಎಂದು ಅವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...