Homeಕರ್ನಾಟಕಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಧ್ಯಕ್ಷ ಮಹೇಶ್ ಜೋಶಿ ಅವರ ಈ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಈ ಬಗ್ಗೆ ಕಸಾಪ ಸದಸ್ಯರಾದ ಪುರುಷೋತ್ತಮ ಬಿಳಿಮಲೆಯವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಹೀಗೇಕೆ ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ. “ದೂರದರ್ಶನದ ಹಿರಿಯ ಅಧಿಕಾರಿ ನಿರ್ಮಲಾ ಎಲಿಗಾರ್ ಅವರು ಹಾವೇರಿ ಸಮ್ಮೇಳನದಲ್ಲಿ ತಮಗಾದ ತೊಂದರೆಗಳನ್ನು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟಿಸಿರುವುದನ್ನು ನಾನು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದು ಪ್ರಜಾಪ್ರಭುತ್ವ ನಮಗೆ ಕೊಟ್ಟಿರುವ ಹಕ್ಕು. ಇದನ್ನು ಉಪಯೋಗಿಸಿಕೊಂಡು ನಾವು ಹಲವರು ನಮ್ಮದೇ ರೀತಿಯಲ್ಲಿ ಪ್ರತಿಭಟಿಸಿದ್ದೇವೆ” ಎಂದಿದ್ದಾರೆ.

“ಸುಮಾರು 15 ವರ್ಷಗಳಿಂದ ವೈಯಕ್ತಿಕವಾಗಿ ಗೊತ್ತಿರುವ ನನ್ನನ್ನು ಜೋಶಿ ಅವರು ʼಪೆಂಡಾಲ್‌ ಹಾಕಿಸುವʼ ಮಟ್ಟಕ್ಕೆ ಇಳಿಸಿದ್ದಾರೆ. ಬೌದ್ದಿಕ ಚರ್ಚೆಗಳಲ್ಲಿ ವಿಶ್ವಾಸ ಇರುವ ನಾನು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಲಿಲ್ಲ. ಅಧಿಕಾರ ಗೆಳೆತನವನ್ನು ಮರೆಸಿಬಿಡುವುದು ನನಗೇನೂ ಹೊಸತಲ್ಲ. ಆದರೆ ಈಗ ಕಸಾಪವು ನಿರ್ಮಲಾ ಎಲಿಗಾರ್ ಅವರ ಮೇಲೆ ಕ್ರಮ ಕೈಗೊಂಡಿದೆ. ಅವರ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಅವರಿಗೆ ನೀಡಲಾದ ಪ್ರಶಸ್ತಿಯನ್ನು ಹಿಂದೆಗೆದುಕೊಳ್ಳಲಾಗಿದೆ. ಇವು ಸರಿಯಾದ ಕ್ರಮಗಳಲ್ಲ. ಕಾರಣ ಕೂಡಲೇ ಅಮಾನತು ಕ್ರಮವನ್ನು ಹಿಂತೆಗೆದುಕೊಳ್ಳಬೇಕಾಗಿ ನಾನು ನನ್ನ ಗೆಳೆಯರಾದ ಕಸಾಪ ಅಧ್ಯಕ್ಷರನ್ನು ಕೋರಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

“ನಮ್ಮನ್ನೆಲ್ಲ ಬೆಳೆಸಿದ ಸಂಸ್ಥೆಯೊಂದು ಈಗ ಹಿಡಿಯುತ್ತಿರುವ ಹಾದಿಯನ್ನು ನೋಡಿ ಸಿಟ್ಟು ಬರುತ್ತಿಲ್ಲ, ಬದಲು ವಿಷಾದವಾಗುತ್ತಿದೆ. ಕನ್ನಡದ ದೊಡ್ಡ ದೊಡ್ಡ ಸಾಹಿತಿಗಳೇ ಮೌನವಾಗಿರುವಾಗ ನನ್ನಂಥ ಹೊರನಾಡಿನವನಿಗೇಕೆ ಈ ಕೆಲಸ! ಬಹುಶ: ನಾವೇ ಮರ್ಯಾದೆಯಿಂದ ಹೊರಬರುವುದು ಸರಿಯೆಂದು ತೋರುತ್ತದೆ” ಎಂದು ಬಿಳಿಮಲೆ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮತ್ತೋರ್ವ ಕ.ಸಾ.ಪ. ಆಜೀವ ಸದಸ್ಯ ಹಾಗೂ ಹಿರಿಯ ಪತ್ರಕರ್ತರಾದ ಸಂಗಮೇಶ ಮೆಣಸಿನಕಾಯಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಪ್ರಜಾಪ್ರಭುತ್ವದ ವಿರುದ್ಧ ಕ.ಸಾ.ಪ.?” ಎಂದು ಪ್ರಶ್ನೆ ಮಾಡಿದ್ದಾರೆ. “‘ಡಾ. ನಿರ್ಮಲಾ ಎಲಿಗಾರ್‌ ಅವರಿಗೆ ಹಾವೇರಿ ಸಾಹಿತ್ಯ ಸಮ್ಮೇಳನದ ಘಟನೆಯಿಂದ ಎದುರಿಸಬೇಕಾಗಬಹುದಾದ ಪ್ರತೀಕಾರದ ಬಗ್ಗೆ ಎಚ್ಚರಿಸಿದ್ದೆ. ನಾವಂದುಕೊಂಡಂತೆ ಪರೋಕ್ಷ ಸೇಡು ತೀರಿಸಿಕೊಳ್ಳುತ್ತಿಲ್ಲ, ಬದಲಿಗೆ ಪ್ರತ್ಯಕ್ಷ ಸೇಡಿಗೇ ಮುಂದಾಗಿದ್ದಾರೆ ನಾಡೋಜರು!” ಎಂದು ಟೀಕಿಸಿದ್ದಾರೆ.

“ಅಷ್ಟಕ್ಕೂ ಆಜೀವ ಸದಸ್ಯತ್ವದಿಂದ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಡುವಂಥ ತಪ್ಪು ನೀವೇನು (ನಿರ್ಮಲಾ ಎಲಿಗಾರ) ಮಾಡಿದ್ದೀರೋ ನಾನರಿಯೆ. ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಘಟನೆ ವೇಳೆ ಹಾಜರಿದ್ದ ನನ್ನ ಆತ್ಮೀಯರು ಹೇಳುವ ಪ್ರಕಾರ ನೀವು ನಿಮಗಾಗಿಯೇ, ಅಂದರೆ ದೂರದರ್ಶನದ ಸಿಬ್ಬಂದಿಗಾಗಿ ಮೀಸಲಾಗಿದ್ದ ಸೌಲಭ್ಯವನ್ನು ಕೇಳಿದ್ದೀರಿ. ಸೂಕ್ತ ಸ್ಪಂದನೆ ಸಿಗದಿದ್ದಾಗ ಏರಿದ ದನಿಯಲ್ಲಿ ಪ್ರಶ್ನಿಸಿದ್ದೀರಿ. ವಿಡಿಯೊ ನೋಡಿದಾಗ ಅವರೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗೋಚರಿಸುತ್ತದೆ. ‘ಹಲೋ ಹೌ ಆರ್ ಯೂ…’ ಅಂತ ಬೇರೆ ಯಾರಿಗೋ ವಿಶ್ ಮಾಡುತ್ತ ಪಲಾಯನಗೈದಿದ್ದಾರೆ.”

”ಒಂದಂತೂ ಖುಷಿ-ನೇರವಾಗಿ ಅದೇ ಘಟನೆಯನ್ನು ಉಲ್ಲೇಖಿಸಿ, ‘ಶಿಸ್ತುಕ್ರಮ’ ಕೈಗೊಂಡು, ತಮ್ಮ ‘ಬುದ್ಧಿಮತ್ತೆ’ ಪ್ರದರ್ಶಿಸಿದ್ದಾರೆ! ಇಲ್ಲಿ ಸಮ್ಮೇಳನದ ವರದಿಗೆ ತೆರಳುವ ಪತ್ರಕರ್ತರು, ಕ.ಸಾ.ಪ. ಬೆಂಗಳೂರಿನ ಎಲ್ಲ ಆಜೀವ ಸದಸ್ಯರು, ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲ ಕನ್ನಡಾಭಿಮಾನಿಗಳು ಎಚ್ಚೆತ್ತುಕೊಳ್ಳಬೇಕಾದ ಕೆಲವು ಅಂಶಗಳಿವೆ” ಎಂದು ಉಲ್ಲೇಖಿಸಿದ್ದಾರೆ.

* ನೀವು (ನಿರ್ಮಲಾ) ಸೂಕ್ತ ಸೌಲಭ್ಯ ಪ್ರಶ್ನಿಸಿ, ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದಿದ್ದು ದೂರದರ್ಶನದ ಅಧಿಕಾರಿಯಾಗಿ! ಒಂದು ವೇಳೆ ನೀವು ಕ.ಸಾ.ಪ. ಆಜೀವ ಸದಸ್ಯರಲ್ಲದೇ ಇದ್ದಿದ್ದರೆ, ಕ.ಸಾ.ಪ. ಯಾವ ಕ್ರಮ ಜರುಗಿಸುತ್ತಿತ್ತೋ ಏನೋ?

* ನಿಮಗೆ ಪ್ರಶಸ್ತಿ ಘೋಷಣೆ ಆಗಿದ್ದು ಸಾಹಿತಿ ನಿರ್ಮಲಾ ಅವರಿಗೆ. ನೀವು ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದದ್ದು ದೂರದರ್ಶನದ ಅಧಿಕಾರಿಯಾಗಿ! ಹಾಗಾಗಿ ಪರಿಷತ್ತಿನ ಯಾವ ನಿಯಮಾವಳಿ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ? ಕ.ಸಾ.ಪ.ದ ಪ್ರತಿಯೊಬ್ಬ ಪದಾಧಿಕಾರಿ ಈ ಬಗ್ಗೆ ಸ್ಪಷ್ಟನೆ ಕೊಡಬೇಕು.

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಎಲ್ಲ ಪತ್ರಕರ್ತರು ಕ.ಸಾ.ಪ.ದ ಆಜೀವ ಸದಸ್ಯತ್ವ ಹೊಂದಿರಲೇಬೇಕೆಂಬ ನಿಯಮ ಬರಬಹುದು. ಸಮ್ಮೇಳನದಲ್ಲಿ ಕಂಡುಬರುವ ನ್ಯೂನತೆಗಳನ್ನು ಪ್ರಶ್ನಿಸಿದರೆ, ವರದಿ ಮಾಡಿದರೆ ಕ್ರಮ ಕೈಗೊಳ್ಳಲು ಬೇಕಲ್ಲ?

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಪತ್ರಕರ್ತರೆಲ್ಲ ನಿರ್ಮಲಾ ಅವರಂತೆ ಕ.ಸಾ.ಪ.ದ ಯಾವುದಾದರೊಂದು ಪ್ರಶಸ್ತಿ ಪಡೆದಿರಲೇಬೇಕೆಂಬ ನಿಯಮ ಜಾರಿಯಾಗಬಹುದು. ಪ್ರಶ್ನಿಸಿದರೆ ವಾಪಸ್ ಪಡೆಯಲು ಬೇಕಲ್ಲ?

* ಸಮ್ಮೇಳನಕ್ಕೆ ಬರುವ ಎಲ್ಲ ಕನ್ನಡಾಭಿಮಾನಿಗಳಿಗೂ ಇಂಥದೇ ನಿಯಮಗಳು ಪ್ರತ್ಯಕ್ಷ/ಪರೋಕ್ಷವಾಗಿ ಜಾರಿಯಾಗಬಹುದು. ಶಿಸ್ತು ಕ್ರಮ ಜರುಗಿಸಲು ಬೇಕಲ್ಲ?

ಈ ಮೇಲಿನ ತಕರಾರುಗಳನ್ನು ಸಂಗಮೇಶ ಅವರು ಎತ್ತಿದ್ದಾರೆ.

“ಒಟ್ಟಿನಲ್ಲಿ ಕ.ಸಾ.ಪ. ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧ ದಿಕ್ಕಿನಲ್ಲಿ ಹೊರಟಿರುವ ದಿಟ್ಟ ಸಂಕೇತವಿದು.
ಏನೇ ಇರಲಿ ಮೇಡಂ, ನೀವು ಕ.ಸಾ.ಪ. ಅಧ್ಯಕ್ಷರ ಅಹಂ ಅಷ್ಟೇ ಅಲ್ಲ, ನಿಮ್ಮ ಮಾಜಿ ಮೇಲಧಿಕಾರಿಯ ಅಹಂ ಅನ್ನೂ ಕೆಣಕಿದ್ದೀರಿ. ಇನ್ನೂ ಹುಷಾರಾಗಿ ಇರಬೇಕು. ನಿಮ್ಮೊಂದಿಗೆ ನಮ್ಮಂಥವರು ನೈತಿಕವಾಗಿ ಮಾತ್ರ ಜೊತೆಗಿರಲು ಸಾಧ್ಯ” ಎಂದು ಸಂಗಮೇಶ ಮೆಣಸಿನಕಾಯಿ ಅವರು ನಿರ್ಮಲಾ ಎಲಿಗಾರ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಮುಂದುವರೆದು ಕಸಾಪವನ್ನು ತರಾಟೆಗೆ ತಗೆದುಕೊಂಡಿರುವ ಸಂಗಮೇಶ್ ಅವರು, “ನಿರ್ಮಲಾ ಅವರ ಯಾವ ತಪ್ಪಿಗೆ ಯಾವ ಶಿಕ್ಷೆ ಕೊಡಬೇಕು ಎಂಬ ಪ್ರಾಥಮಿಕ ಜ್ಞಾನವೂ ಕ.ಸಾ.ಪ.ದಲ್ಲಿ ಇದ್ದಂತಿಲ್ಲ. ಅಂತೆಯೇ ಎರಡು ತಿಂಗಳು ತಲೆ ಕೆರೆದುಕೊಂಡು ಆಜೀವ ಸದಸ್ಯತ್ವ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಟ್ಟು ಸೇಡು ತೀರಿಸಿಕೊಳ್ಳಲಾಗಿದೆ. ಇದು ಪಕ್ಕಾ ಪುರುಷ ಅಹಂ, ಯಜಮಾನಿಕೆಯ ಬುದ್ಧಿಯೇ ಸರಿ. ಈ ಶಿಕ್ಷೆ ವಿಧಿಸಿರುವ ಕ.ಸಾ.ಪ. ಪದಾಧಿಕಾರಿಗಳಿಗೆ ಒಂದು ಪ್ರಶ್ನೆ. ಸಮ್ಮೇಳನದ ಪೆಂಡಾಲ್ ಹಾಕಲು ಬರುವ ಹುಡುಗ, ‘ಪೆಂಡಾಲ್ ಹಾಕಲು ಸ್ಥಳವೇ ಇಲ್ಲ, ಎಲ್ಲಿ ಹಾಕಲಿ?’ ಅಂತ ಕೇಳಿದರೆ ಅವನ ಆಜೀವ ಸದಸ್ಯತ್ವ ರದ್ದು ಮಾಡ್ತೀರಾ? ಈಗ ಅಂಥದೇ ಕೆಲಸ ಮಾಡಿದ್ದೀರಿ. ಕೂಡಲೇ ಸರಿಯಾಗಿ ಓದಿಕೊಂಡಿರುವ ಒಬ್ಬ ಕಾನೂನು ಸಲಹೆಗಾರನನ್ನು ನೇಮಿಸಿಕೊಳ್ಳಿ” ಎಂದು ಅವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...