Homeಕರ್ನಾಟಕಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದಾರೆ. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ್ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿದೆ.

ಜೋಶಿ ನೇತೃತ್ವದ ಕಸಾಪ ಕಾರ್ಯಕಾರಿ ಸಮಿತಿಯು, ‘ಪರಿಷತ್ತಿನ ಘನತೆ ಗೌರವ ಮತ್ತು ಧ್ಯೇಯೋದೇಶಗಳಿಗೆ ವಿರುದ್ಧವಾಗಿ ಅವರು ನಡೆದುಕೊಂಡಿದ್ದಾರೆ’ ಎಂದು ಪರಿಷತ್ತಿನ ನಿಯಮ 8) 7) ಅಡಿಯಲ್ಲಿನ ಅಧಿಕಾರ ಬಳಸಿ ನಿರ್ಮಲಾ ಸಿ. ಎಲಿಗಾರ್ ಅವರ ಕಸಾಪ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಇದೇ ವೇಳೆ 2022ನೇ ಸಾಲಿನಲ್ಲಿ ನಿರ್ಮಲಾ ಎಲಿಗಾ‌ರ್‌ ಅವರಿಗೆ ನೀಡಲಾಗಿದ್ದ ‘ಪಂಕಜಶ್ರೀ ಸಾಹಿತ್ಯ ಪ್ರಶಸ್ತಿ’ಯನ್ನೂ ಹಿಂಪಡೆದಿದ್ದಾರೆ.

ಏಕಾಏಕಿ ಸದ್ಯಸತ್ವದ ಅಮಾನತು ಮತ್ತು ಪ್ರಶಸ್ತಿ ಹಿಂಪಡೆಯುವಿಕೆಯು ಕಸಾಪ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ. ಕಳೆದ ಒಂದು ವರ್ಷದಿಂದ ಹಲವು ನಡೆಗಳಲ್ಲಿ ವಿವಾದಕ್ಕೀಡಾಗಿರುವ ಕಸಾಪ, ಹೊಸ ವಿವಾದವನ್ನು ಹುಟ್ಟುಹಾಕಿದೆ. ಇದು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಧ್ಯಕ್ಷ ಮಹೇಶ್ ಜೋಶಿ ಅವರ ಈ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಮಹಿಳಾ ದಿನಾಚರಣೆಯಂದು ನಿರ್ಮಲಾ ಎಲಿಗಾರ್ ಕಸಾಪ ಸದಸ್ಯತ್ವ ರದ್ದು: ಮಹೇಶ ಜೋಶಿಯಿಂದ ಸರ್ವಾಧಿಕಾರತ್ವ ಪ್ರದರ್ಶನ

ಈ ಬಗ್ಗೆ ಕಸಾಪ ಸದಸ್ಯರಾದ ಪುರುಷೋತ್ತಮ ಬಿಳಿಮಲೆಯವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಹೀಗೇಕೆ ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ. “ದೂರದರ್ಶನದ ಹಿರಿಯ ಅಧಿಕಾರಿ ನಿರ್ಮಲಾ ಎಲಿಗಾರ್ ಅವರು ಹಾವೇರಿ ಸಮ್ಮೇಳನದಲ್ಲಿ ತಮಗಾದ ತೊಂದರೆಗಳನ್ನು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟಿಸಿರುವುದನ್ನು ನಾನು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದು ಪ್ರಜಾಪ್ರಭುತ್ವ ನಮಗೆ ಕೊಟ್ಟಿರುವ ಹಕ್ಕು. ಇದನ್ನು ಉಪಯೋಗಿಸಿಕೊಂಡು ನಾವು ಹಲವರು ನಮ್ಮದೇ ರೀತಿಯಲ್ಲಿ ಪ್ರತಿಭಟಿಸಿದ್ದೇವೆ” ಎಂದಿದ್ದಾರೆ.

“ಸುಮಾರು 15 ವರ್ಷಗಳಿಂದ ವೈಯಕ್ತಿಕವಾಗಿ ಗೊತ್ತಿರುವ ನನ್ನನ್ನು ಜೋಶಿ ಅವರು ʼಪೆಂಡಾಲ್‌ ಹಾಕಿಸುವʼ ಮಟ್ಟಕ್ಕೆ ಇಳಿಸಿದ್ದಾರೆ. ಬೌದ್ದಿಕ ಚರ್ಚೆಗಳಲ್ಲಿ ವಿಶ್ವಾಸ ಇರುವ ನಾನು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಲಿಲ್ಲ. ಅಧಿಕಾರ ಗೆಳೆತನವನ್ನು ಮರೆಸಿಬಿಡುವುದು ನನಗೇನೂ ಹೊಸತಲ್ಲ. ಆದರೆ ಈಗ ಕಸಾಪವು ನಿರ್ಮಲಾ ಎಲಿಗಾರ್ ಅವರ ಮೇಲೆ ಕ್ರಮ ಕೈಗೊಂಡಿದೆ. ಅವರ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಅವರಿಗೆ ನೀಡಲಾದ ಪ್ರಶಸ್ತಿಯನ್ನು ಹಿಂದೆಗೆದುಕೊಳ್ಳಲಾಗಿದೆ. ಇವು ಸರಿಯಾದ ಕ್ರಮಗಳಲ್ಲ. ಕಾರಣ ಕೂಡಲೇ ಅಮಾನತು ಕ್ರಮವನ್ನು ಹಿಂತೆಗೆದುಕೊಳ್ಳಬೇಕಾಗಿ ನಾನು ನನ್ನ ಗೆಳೆಯರಾದ ಕಸಾಪ ಅಧ್ಯಕ್ಷರನ್ನು ಕೋರಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

“ನಮ್ಮನ್ನೆಲ್ಲ ಬೆಳೆಸಿದ ಸಂಸ್ಥೆಯೊಂದು ಈಗ ಹಿಡಿಯುತ್ತಿರುವ ಹಾದಿಯನ್ನು ನೋಡಿ ಸಿಟ್ಟು ಬರುತ್ತಿಲ್ಲ, ಬದಲು ವಿಷಾದವಾಗುತ್ತಿದೆ. ಕನ್ನಡದ ದೊಡ್ಡ ದೊಡ್ಡ ಸಾಹಿತಿಗಳೇ ಮೌನವಾಗಿರುವಾಗ ನನ್ನಂಥ ಹೊರನಾಡಿನವನಿಗೇಕೆ ಈ ಕೆಲಸ! ಬಹುಶ: ನಾವೇ ಮರ್ಯಾದೆಯಿಂದ ಹೊರಬರುವುದು ಸರಿಯೆಂದು ತೋರುತ್ತದೆ” ಎಂದು ಬಿಳಿಮಲೆ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮತ್ತೋರ್ವ ಕ.ಸಾ.ಪ. ಆಜೀವ ಸದಸ್ಯ ಹಾಗೂ ಹಿರಿಯ ಪತ್ರಕರ್ತರಾದ ಸಂಗಮೇಶ ಮೆಣಸಿನಕಾಯಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಪ್ರಜಾಪ್ರಭುತ್ವದ ವಿರುದ್ಧ ಕ.ಸಾ.ಪ.?” ಎಂದು ಪ್ರಶ್ನೆ ಮಾಡಿದ್ದಾರೆ. “‘ಡಾ. ನಿರ್ಮಲಾ ಎಲಿಗಾರ್‌ ಅವರಿಗೆ ಹಾವೇರಿ ಸಾಹಿತ್ಯ ಸಮ್ಮೇಳನದ ಘಟನೆಯಿಂದ ಎದುರಿಸಬೇಕಾಗಬಹುದಾದ ಪ್ರತೀಕಾರದ ಬಗ್ಗೆ ಎಚ್ಚರಿಸಿದ್ದೆ. ನಾವಂದುಕೊಂಡಂತೆ ಪರೋಕ್ಷ ಸೇಡು ತೀರಿಸಿಕೊಳ್ಳುತ್ತಿಲ್ಲ, ಬದಲಿಗೆ ಪ್ರತ್ಯಕ್ಷ ಸೇಡಿಗೇ ಮುಂದಾಗಿದ್ದಾರೆ ನಾಡೋಜರು!” ಎಂದು ಟೀಕಿಸಿದ್ದಾರೆ.

“ಅಷ್ಟಕ್ಕೂ ಆಜೀವ ಸದಸ್ಯತ್ವದಿಂದ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಡುವಂಥ ತಪ್ಪು ನೀವೇನು (ನಿರ್ಮಲಾ ಎಲಿಗಾರ) ಮಾಡಿದ್ದೀರೋ ನಾನರಿಯೆ. ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಘಟನೆ ವೇಳೆ ಹಾಜರಿದ್ದ ನನ್ನ ಆತ್ಮೀಯರು ಹೇಳುವ ಪ್ರಕಾರ ನೀವು ನಿಮಗಾಗಿಯೇ, ಅಂದರೆ ದೂರದರ್ಶನದ ಸಿಬ್ಬಂದಿಗಾಗಿ ಮೀಸಲಾಗಿದ್ದ ಸೌಲಭ್ಯವನ್ನು ಕೇಳಿದ್ದೀರಿ. ಸೂಕ್ತ ಸ್ಪಂದನೆ ಸಿಗದಿದ್ದಾಗ ಏರಿದ ದನಿಯಲ್ಲಿ ಪ್ರಶ್ನಿಸಿದ್ದೀರಿ. ವಿಡಿಯೊ ನೋಡಿದಾಗ ಅವರೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗೋಚರಿಸುತ್ತದೆ. ‘ಹಲೋ ಹೌ ಆರ್ ಯೂ…’ ಅಂತ ಬೇರೆ ಯಾರಿಗೋ ವಿಶ್ ಮಾಡುತ್ತ ಪಲಾಯನಗೈದಿದ್ದಾರೆ.”

”ಒಂದಂತೂ ಖುಷಿ-ನೇರವಾಗಿ ಅದೇ ಘಟನೆಯನ್ನು ಉಲ್ಲೇಖಿಸಿ, ‘ಶಿಸ್ತುಕ್ರಮ’ ಕೈಗೊಂಡು, ತಮ್ಮ ‘ಬುದ್ಧಿಮತ್ತೆ’ ಪ್ರದರ್ಶಿಸಿದ್ದಾರೆ! ಇಲ್ಲಿ ಸಮ್ಮೇಳನದ ವರದಿಗೆ ತೆರಳುವ ಪತ್ರಕರ್ತರು, ಕ.ಸಾ.ಪ. ಬೆಂಗಳೂರಿನ ಎಲ್ಲ ಆಜೀವ ಸದಸ್ಯರು, ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲ ಕನ್ನಡಾಭಿಮಾನಿಗಳು ಎಚ್ಚೆತ್ತುಕೊಳ್ಳಬೇಕಾದ ಕೆಲವು ಅಂಶಗಳಿವೆ” ಎಂದು ಉಲ್ಲೇಖಿಸಿದ್ದಾರೆ.

* ನೀವು (ನಿರ್ಮಲಾ) ಸೂಕ್ತ ಸೌಲಭ್ಯ ಪ್ರಶ್ನಿಸಿ, ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದಿದ್ದು ದೂರದರ್ಶನದ ಅಧಿಕಾರಿಯಾಗಿ! ಒಂದು ವೇಳೆ ನೀವು ಕ.ಸಾ.ಪ. ಆಜೀವ ಸದಸ್ಯರಲ್ಲದೇ ಇದ್ದಿದ್ದರೆ, ಕ.ಸಾ.ಪ. ಯಾವ ಕ್ರಮ ಜರುಗಿಸುತ್ತಿತ್ತೋ ಏನೋ?

* ನಿಮಗೆ ಪ್ರಶಸ್ತಿ ಘೋಷಣೆ ಆಗಿದ್ದು ಸಾಹಿತಿ ನಿರ್ಮಲಾ ಅವರಿಗೆ. ನೀವು ‘ಪರಿಷತ್ತಿನ ಗೌರವಕ್ಕೆ ಚ್ಯುತಿ’ ತಂದದ್ದು ದೂರದರ್ಶನದ ಅಧಿಕಾರಿಯಾಗಿ! ಹಾಗಾಗಿ ಪರಿಷತ್ತಿನ ಯಾವ ನಿಯಮಾವಳಿ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ? ಕ.ಸಾ.ಪ.ದ ಪ್ರತಿಯೊಬ್ಬ ಪದಾಧಿಕಾರಿ ಈ ಬಗ್ಗೆ ಸ್ಪಷ್ಟನೆ ಕೊಡಬೇಕು.

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಎಲ್ಲ ಪತ್ರಕರ್ತರು ಕ.ಸಾ.ಪ.ದ ಆಜೀವ ಸದಸ್ಯತ್ವ ಹೊಂದಿರಲೇಬೇಕೆಂಬ ನಿಯಮ ಬರಬಹುದು. ಸಮ್ಮೇಳನದಲ್ಲಿ ಕಂಡುಬರುವ ನ್ಯೂನತೆಗಳನ್ನು ಪ್ರಶ್ನಿಸಿದರೆ, ವರದಿ ಮಾಡಿದರೆ ಕ್ರಮ ಕೈಗೊಳ್ಳಲು ಬೇಕಲ್ಲ?

* ಇನ್ನು ಮುಂದೆ ಸಮ್ಮೇಳನದ ವರದಿಗೆ ಬರುವ ಪತ್ರಕರ್ತರೆಲ್ಲ ನಿರ್ಮಲಾ ಅವರಂತೆ ಕ.ಸಾ.ಪ.ದ ಯಾವುದಾದರೊಂದು ಪ್ರಶಸ್ತಿ ಪಡೆದಿರಲೇಬೇಕೆಂಬ ನಿಯಮ ಜಾರಿಯಾಗಬಹುದು. ಪ್ರಶ್ನಿಸಿದರೆ ವಾಪಸ್ ಪಡೆಯಲು ಬೇಕಲ್ಲ?

* ಸಮ್ಮೇಳನಕ್ಕೆ ಬರುವ ಎಲ್ಲ ಕನ್ನಡಾಭಿಮಾನಿಗಳಿಗೂ ಇಂಥದೇ ನಿಯಮಗಳು ಪ್ರತ್ಯಕ್ಷ/ಪರೋಕ್ಷವಾಗಿ ಜಾರಿಯಾಗಬಹುದು. ಶಿಸ್ತು ಕ್ರಮ ಜರುಗಿಸಲು ಬೇಕಲ್ಲ?

ಈ ಮೇಲಿನ ತಕರಾರುಗಳನ್ನು ಸಂಗಮೇಶ ಅವರು ಎತ್ತಿದ್ದಾರೆ.

“ಒಟ್ಟಿನಲ್ಲಿ ಕ.ಸಾ.ಪ. ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧ ದಿಕ್ಕಿನಲ್ಲಿ ಹೊರಟಿರುವ ದಿಟ್ಟ ಸಂಕೇತವಿದು.
ಏನೇ ಇರಲಿ ಮೇಡಂ, ನೀವು ಕ.ಸಾ.ಪ. ಅಧ್ಯಕ್ಷರ ಅಹಂ ಅಷ್ಟೇ ಅಲ್ಲ, ನಿಮ್ಮ ಮಾಜಿ ಮೇಲಧಿಕಾರಿಯ ಅಹಂ ಅನ್ನೂ ಕೆಣಕಿದ್ದೀರಿ. ಇನ್ನೂ ಹುಷಾರಾಗಿ ಇರಬೇಕು. ನಿಮ್ಮೊಂದಿಗೆ ನಮ್ಮಂಥವರು ನೈತಿಕವಾಗಿ ಮಾತ್ರ ಜೊತೆಗಿರಲು ಸಾಧ್ಯ” ಎಂದು ಸಂಗಮೇಶ ಮೆಣಸಿನಕಾಯಿ ಅವರು ನಿರ್ಮಲಾ ಎಲಿಗಾರ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಮುಂದುವರೆದು ಕಸಾಪವನ್ನು ತರಾಟೆಗೆ ತಗೆದುಕೊಂಡಿರುವ ಸಂಗಮೇಶ್ ಅವರು, “ನಿರ್ಮಲಾ ಅವರ ಯಾವ ತಪ್ಪಿಗೆ ಯಾವ ಶಿಕ್ಷೆ ಕೊಡಬೇಕು ಎಂಬ ಪ್ರಾಥಮಿಕ ಜ್ಞಾನವೂ ಕ.ಸಾ.ಪ.ದಲ್ಲಿ ಇದ್ದಂತಿಲ್ಲ. ಅಂತೆಯೇ ಎರಡು ತಿಂಗಳು ತಲೆ ಕೆರೆದುಕೊಂಡು ಆಜೀವ ಸದಸ್ಯತ್ವ ಮತ್ತು ಘೋಷಿತ ಪ್ರಶಸ್ತಿಯಿಂದ ಕೈಬಿಟ್ಟು ಸೇಡು ತೀರಿಸಿಕೊಳ್ಳಲಾಗಿದೆ. ಇದು ಪಕ್ಕಾ ಪುರುಷ ಅಹಂ, ಯಜಮಾನಿಕೆಯ ಬುದ್ಧಿಯೇ ಸರಿ. ಈ ಶಿಕ್ಷೆ ವಿಧಿಸಿರುವ ಕ.ಸಾ.ಪ. ಪದಾಧಿಕಾರಿಗಳಿಗೆ ಒಂದು ಪ್ರಶ್ನೆ. ಸಮ್ಮೇಳನದ ಪೆಂಡಾಲ್ ಹಾಕಲು ಬರುವ ಹುಡುಗ, ‘ಪೆಂಡಾಲ್ ಹಾಕಲು ಸ್ಥಳವೇ ಇಲ್ಲ, ಎಲ್ಲಿ ಹಾಕಲಿ?’ ಅಂತ ಕೇಳಿದರೆ ಅವನ ಆಜೀವ ಸದಸ್ಯತ್ವ ರದ್ದು ಮಾಡ್ತೀರಾ? ಈಗ ಅಂಥದೇ ಕೆಲಸ ಮಾಡಿದ್ದೀರಿ. ಕೂಡಲೇ ಸರಿಯಾಗಿ ಓದಿಕೊಂಡಿರುವ ಒಬ್ಬ ಕಾನೂನು ಸಲಹೆಗಾರನನ್ನು ನೇಮಿಸಿಕೊಳ್ಳಿ” ಎಂದು ಅವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...