Homeಅಂಕಣಗಳುಶುರುವಾದ ಮಹೇಶ ಜೋಶಿ ಮಂತ್ರಗಳು!

ಶುರುವಾದ ಮಹೇಶ ಜೋಶಿ ಮಂತ್ರಗಳು!

- Advertisement -
- Advertisement -

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು. ಶುದ್ಧ ಕನ್ನಡ ಎಂದರೆ ಯಾವುದು? ಈ ನಾಡಿನ ಮೂವತ್ತು ಜಿಲ್ಲೆಗಳಲ್ಲೂ ಮೂವ್ವತ್ತು ವರಸೆಯಲ್ಲಿ ಕನ್ನಡ ಮಾತನಾಡುತ್ತಾರೆ ಎಂದಾಗ ಈತನ ಪ್ರೌಢಿಮೆ ಬಾಯಿ ಮುಚ್ಚಿಕೊಂಡಿತು. ತುಂಬ ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು ಬರುತ್ತಿದ್ದ ಸಾಹಿತ್ಯ ಪರಿಷತ್‌ನ ಆಡಳಿತವನ್ನು ಕೇಂದ್ರಿಕರಿಸಲು ಹೊರಟಿರುವ ಈತ ಸಾಹಿತ್ಯ ಪರಿಷತ್ ಸದಸ್ಯರಿಗೆ ಎಸೆಸೆಲ್ಸಿ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ಶಾಲೆಗೆ ಹೋಗದೆ ಸಾವಿರಾರು ಜಾನಪದ ಹಾಡು ಹೇಳುವ, ಕತೆ ಹೇಳುವ, ಜಾನಪದ ಕುಣಿತಗಳನ್ನು ಪ್ರದರ್ಶಿಸುವ ಮತ್ತು ಡೊಳ್ಳುಬಡಿಯುವವರು ಜೋಶಿಗೆ ಭೂತ ಬಿಡಿಸಬೇಕಷ್ಟೇ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೆ ಸಾಹಿತ್ಯ ಪರಿಷತ್ ಕಾರ್ಯಾಲಯವು ಪೂರ್ಣವಾಗಿ ಕೇಶವಕೃಪವಾಗುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಪ್ರಖರ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ಡಿ.ಎಸ್ ನಾಗಭೂಷಣ ತರುತ್ತಿದ್ದ ಹೊಸ ಮನುಷ್ಯ ಎಂಬ ಮಾಸಪತ್ರಿಕೆ ನಿಲ್ಲಿಸುವುದಾಗಿ ಹೇಳಿದ್ದಾರಲ್ಲಾ! ಸದ್ಯ ಗರಹೊಡೆದ ಸ್ಥಿತಿಯಲ್ಲಿ ಪ್ರಜ್ಞಾವಂತರನ್ನು ಎಚ್ಚರಿಸುತ್ತಿದ್ದ ಹೊಸ ಮನುಷ್ಯ ಒಂದು ದಶಕವಾದರೂ ಹಳೆ ಮನುಷ್ಯನಾಗಿ ಉಳಿದಿದ್ದು ಹಳೆ ವಿಷಯ. ಆದರೆ ಹೊಸ ಮನುಷ್ಯನ ಒಗರು ದನಿ ಇರಬೇಕಿತ್ತು. ಅವನ್ನ ಹೊರತರಲು ಹಣಕಾಸಿನ ಸಮಸ್ಯೆಯಿಲ್ಲವಂತೆ, ಆದರೆ ಸಂಪಾದಕರ ಆರೋಗ್ಯ ಸಹಕರಿಸುತ್ತಿಲ್ಲವಂತೆ. ಸಮಾಜವಾದಿಗಳ ಅನಾರೋಗ್ಯದಿಂದ ಈ ಸಮಾಜಕ್ಕೆ ನಷ್ಟ. ಆಳುವ ಸರಕಾರಕ್ಕೆ ಅನಧಿಕೃತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದ ಹೊಸ ಮನುಷ್ಯ ಪ್ರತಿ ತಿಂಗಳೂ ಸಿದ್ದರಾಮಯ್ಯನ ಸರಕಾರಕ್ಕೆ ಭೂತ ಬಿಡಿಸುತ್ತಿದ್ದು ಒಂದು ವಿಶೇಷ. ಆದರೆ ಕುಮಾರಣ್ಣ ಮತ್ತು ಎಡೂರಪ್ಪನ ಸರಕಾರಕ್ಕೆ ಛಾಟಿ ಬೀಸುವ ಬದಲು ಸಪ್ಪಗಾದದ್ದೂ ಒಂದು ವಿಶೇಷ. ಪ್ರಖರ ಚಿಂತನೆಯ ನಿಷ್ಠುರ ವಿಮರ್ಶೆಯ ಮತ್ತು ನಾಡಿನ ಸಂಸ್ಕೃತಿ ಚಿಂತಕರಿಗೆ, ಬೌದ್ಧಿಕವಾಗಿ ಕೆಲಸ ಕೊಡುತ್ತಿದ್ದ ಹೊಸ ಮನುಷ್ಯ ನಿಲ್ಲಬಾರದಿತ್ತು, ಯಾರಾದರೂ ನಡೆಸಿಕೊಂಡು ಹೋಗಲು ಅನುವುಮಾಡಿಕೊಡಬೇಕಿತ್ತು. ಆದರೆ ಅಂತ ತೀರ್ಮಾನ ಇಂತವರಿಂದ ಸಾಧ್ಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಜನಪ್ರಿಯ ಪ್ರಧಾನಿ ಯಾಕೋ ಈಶ್ವರಪ್ಪನಂತೆ ಮಾತನಾಡತೊಡಗಿದ್ದಾರಲ್ಲಾ ಕುಮಾರಣ್ಣ ಮತ್ತು ದೇವೇಗೌಡರ ಕೃಪಾಕಟಾಕ್ಷದಿಂದ ಮಂತ್ರಿಯಾದ ಅಮಲಿನಲ್ಲಿ ಈಶ್ವರಪ್ಪ ಇನ್ನೂ ಹದಿನೈದು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದುಬಿಟ್ಟರು. ಈ ಬಗ್ಗೆ ಯಾರೂ ಅವರನ್ನ ವಿವರ ಕೇಳಲಿಲ್ಲ. ಆದರೇನು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುದಲ್ಲದೆ ಅವರ ಬಂಧುಬಾಂಧವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇದೀಗ ಮೋದಿಯವರು ಕಾಂಗ್ರೆಸ್ ಇನ್ನ ನೂರು ವರ್ಷಗಳವರೆಗೆ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಈ ಕಾಲಜ್ಞಾನಿಯ ಮಾತನ್ನು ನೆನೆಸಿಕೊಂಡು ಸ್ಮರಿಸಲು ಯಾರಿರುತ್ತಾರೆ? ಅದಿರಲಿ, ಜಗತ್ತಿನ ತಾಪಮಾನ ಕುರಿತು ನಮ್ಮ ವಿಜ್ಞಾನಿಗಳು ಎಚ್ಚರಿಸುವ ಮಾತಿನ ಪ್ರಕಾರ, ಇನ್ನ ಹದಿನೈದು ವರ್ಷದಲ್ಲಿ ಏನಾಗುತ್ತದೊ ಏನೋ! ಅಂಥಾದ್ದರಲ್ಲಿ ನೂರುವರ್ಷದ ಭವಿಷ್ಯ ಹೇಳಿರುವ ಕಾಲಜ್ಞಾನಿ ಪ್ರಧಾನಿ ಈವರೆಗೆ ಬೀದಿಯಲ್ಲಾಡುತ್ತಿದ್ದ ಮಾತನ್ನ ಲೋಕಸಭೆಯಲ್ಲಾಡುತ್ತಾರೆ, ಲೋಕಸಭೆಯ ಮಾತನ್ನು ಅಮೆರಿಕದಲ್ಲಿ ಬಿತ್ತರಿಸುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ನಮ್ಮ ಈಶ್ವರಪ್ಪನ ಜೊತೆ ಸ್ಪರ್ಧೆಗಿಳಿದಂತಿದ್ದಾರಲ್ಲಾ ಥೂತ್ತೆರಿ.

****

ಮತೀಯವಾಗಿ ಜೋರುಗಂಟಲಿನಿಂದ ಕೂಗಿದವರ ಕಡೆ ಬಿಜೆಪಿ ಪಕ್ಷದ ದೃಷ್ಟಿ ಬೇಗ ಬೀಳುತ್ತದೆ ಮತ್ತು ಅಂಥವರು ಮಾತ್ರ ನಮ್ಮ ಪಾರ್ಟಿ ಉಳಿಸಿ ಬೆಳೆಸಬಲ್ಲ ಎಂಬ ಮೂಢನಂಬಿಕೆಗೆ ತುತ್ತಾದ ಹಲವರು ಗಂಟಲು ಹರಿದುಕೊಳ್ಳುವ ಕೂಗುಮಾರಿಗಳಾಗಿದ್ದಾರಂತಲ್ಲಾ. ಈ ಪೈಕಿ ಬಸನಗೌಡ ಪಾಟೀಲ ಯತ್ನಾಳ, ಮೈಸೂರಿನ ಪ್ರತಾಪಸಿಮ್ಮ ಹಾಗೂ ಶಿವಮೊಗ್ಗದ ಈಶ್ವರಪ್ಪ ಹಳೆಯಗಂಟಲು. ಅವರದ್ದು ನೈನ್‌ಟೀನ್ ಫಾರ್ಟಿ ಸೆವೆನ್ ಮಾಡೆಲಿನ ಗಾಡಿಯ ಸೈಲೆನ್ಸರ್ ಪೈಪು. ಅದು ಶಬ್ದ ಮಾಡಿದರೆ ಉಳಿದ ಯಾವುದೇ ಶಬ್ದ ಕೇಳುವುದಿಲ್ಲ. ಅಂತಹ ಗಂಟಲಿನಲ್ಲಿ ದೇಶದ ಬಾವುಟ ಹಾರಾಡುವ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜವನ್ನ ಹಾರಿಸುತ್ತೇವೆ, ಜೊತೆಗೆ ಕೆಂಪುಕೋಟೆಯ ಮೇಲೂ ಹಾರಿಸುತ್ತೇವೆ ಎಂದು ಅಬ್ಬರಿಸಿದ್ದಾರಲ್ಲಾ. ಈ ಅಬ್ಬರವು ಅಭದ್ರತೆಯ ಮೂಲದ್ದು. ಎಡೂರಪ್ಪನ ನಂತರ ಈಶ್ವರಪ್ಪ ನಿವೃತ್ತಿಯ ಸಾಲಿನಲ್ಲಿ ನಿಂತಿರುವಾಗ ನನ್ನಂತವನು ನಿವೃತ್ತಿಗೆ ಯೋಗ್ಯನಲ್ಲ ಪಾರ್ಟಿಗೆ ಅನಿವಾರ್ಯ ಎಂಬುದು ಭಗವಾಧ್ವಜದ ದನಿಯಲ್ಲಿದೆಯಂತಲ್ಲಾ. ಅದೇನಾದರಾಗಲಿ ಎಡೂರಪ್ಪನವರ ನಿರ್ಗಮನದ ನಂತರ ಈಶ್ವರಪ್ಪ ಅನಿವಾರ್ಯವಾಗಿ ಆಕಡೆ ಸರಿದು ನಿಲ್ಲಬೇಕಿದೆ. ಏಕೆಂದರೆ ಎಡೂರಪ್ಪನ ಮುಖ ನೋಡಿ ಈಶ್ವರಪ್ಪನಿಗೆ ಓಟು ಮಾಡುತ್ತಿದ್ದ ಶಿವಮೊಗ್ಗದ ಲಿಂಗಾಯಿತರಿಗೆ ಪುನಹ ಈಶ್ವರಪ್ಪನಿಗೆ ಓಟು ಮಾಡುವ ಅಗತ್ಯ ಕಾಣುತ್ತಿಲ್ಲವಂತಲ್ಲಾ

ಥೂತ್ತೆರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...