Homeಅಂಕಣಗಳುಶುರುವಾದ ಮಹೇಶ ಜೋಶಿ ಮಂತ್ರಗಳು!

ಶುರುವಾದ ಮಹೇಶ ಜೋಶಿ ಮಂತ್ರಗಳು!

- Advertisement -
- Advertisement -

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು. ಶುದ್ಧ ಕನ್ನಡ ಎಂದರೆ ಯಾವುದು? ಈ ನಾಡಿನ ಮೂವತ್ತು ಜಿಲ್ಲೆಗಳಲ್ಲೂ ಮೂವ್ವತ್ತು ವರಸೆಯಲ್ಲಿ ಕನ್ನಡ ಮಾತನಾಡುತ್ತಾರೆ ಎಂದಾಗ ಈತನ ಪ್ರೌಢಿಮೆ ಬಾಯಿ ಮುಚ್ಚಿಕೊಂಡಿತು. ತುಂಬ ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು ಬರುತ್ತಿದ್ದ ಸಾಹಿತ್ಯ ಪರಿಷತ್‌ನ ಆಡಳಿತವನ್ನು ಕೇಂದ್ರಿಕರಿಸಲು ಹೊರಟಿರುವ ಈತ ಸಾಹಿತ್ಯ ಪರಿಷತ್ ಸದಸ್ಯರಿಗೆ ಎಸೆಸೆಲ್ಸಿ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ಶಾಲೆಗೆ ಹೋಗದೆ ಸಾವಿರಾರು ಜಾನಪದ ಹಾಡು ಹೇಳುವ, ಕತೆ ಹೇಳುವ, ಜಾನಪದ ಕುಣಿತಗಳನ್ನು ಪ್ರದರ್ಶಿಸುವ ಮತ್ತು ಡೊಳ್ಳುಬಡಿಯುವವರು ಜೋಶಿಗೆ ಭೂತ ಬಿಡಿಸಬೇಕಷ್ಟೇ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೆ ಸಾಹಿತ್ಯ ಪರಿಷತ್ ಕಾರ್ಯಾಲಯವು ಪೂರ್ಣವಾಗಿ ಕೇಶವಕೃಪವಾಗುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಪ್ರಖರ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ಡಿ.ಎಸ್ ನಾಗಭೂಷಣ ತರುತ್ತಿದ್ದ ಹೊಸ ಮನುಷ್ಯ ಎಂಬ ಮಾಸಪತ್ರಿಕೆ ನಿಲ್ಲಿಸುವುದಾಗಿ ಹೇಳಿದ್ದಾರಲ್ಲಾ! ಸದ್ಯ ಗರಹೊಡೆದ ಸ್ಥಿತಿಯಲ್ಲಿ ಪ್ರಜ್ಞಾವಂತರನ್ನು ಎಚ್ಚರಿಸುತ್ತಿದ್ದ ಹೊಸ ಮನುಷ್ಯ ಒಂದು ದಶಕವಾದರೂ ಹಳೆ ಮನುಷ್ಯನಾಗಿ ಉಳಿದಿದ್ದು ಹಳೆ ವಿಷಯ. ಆದರೆ ಹೊಸ ಮನುಷ್ಯನ ಒಗರು ದನಿ ಇರಬೇಕಿತ್ತು. ಅವನ್ನ ಹೊರತರಲು ಹಣಕಾಸಿನ ಸಮಸ್ಯೆಯಿಲ್ಲವಂತೆ, ಆದರೆ ಸಂಪಾದಕರ ಆರೋಗ್ಯ ಸಹಕರಿಸುತ್ತಿಲ್ಲವಂತೆ. ಸಮಾಜವಾದಿಗಳ ಅನಾರೋಗ್ಯದಿಂದ ಈ ಸಮಾಜಕ್ಕೆ ನಷ್ಟ. ಆಳುವ ಸರಕಾರಕ್ಕೆ ಅನಧಿಕೃತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದ ಹೊಸ ಮನುಷ್ಯ ಪ್ರತಿ ತಿಂಗಳೂ ಸಿದ್ದರಾಮಯ್ಯನ ಸರಕಾರಕ್ಕೆ ಭೂತ ಬಿಡಿಸುತ್ತಿದ್ದು ಒಂದು ವಿಶೇಷ. ಆದರೆ ಕುಮಾರಣ್ಣ ಮತ್ತು ಎಡೂರಪ್ಪನ ಸರಕಾರಕ್ಕೆ ಛಾಟಿ ಬೀಸುವ ಬದಲು ಸಪ್ಪಗಾದದ್ದೂ ಒಂದು ವಿಶೇಷ. ಪ್ರಖರ ಚಿಂತನೆಯ ನಿಷ್ಠುರ ವಿಮರ್ಶೆಯ ಮತ್ತು ನಾಡಿನ ಸಂಸ್ಕೃತಿ ಚಿಂತಕರಿಗೆ, ಬೌದ್ಧಿಕವಾಗಿ ಕೆಲಸ ಕೊಡುತ್ತಿದ್ದ ಹೊಸ ಮನುಷ್ಯ ನಿಲ್ಲಬಾರದಿತ್ತು, ಯಾರಾದರೂ ನಡೆಸಿಕೊಂಡು ಹೋಗಲು ಅನುವುಮಾಡಿಕೊಡಬೇಕಿತ್ತು. ಆದರೆ ಅಂತ ತೀರ್ಮಾನ ಇಂತವರಿಂದ ಸಾಧ್ಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಜನಪ್ರಿಯ ಪ್ರಧಾನಿ ಯಾಕೋ ಈಶ್ವರಪ್ಪನಂತೆ ಮಾತನಾಡತೊಡಗಿದ್ದಾರಲ್ಲಾ ಕುಮಾರಣ್ಣ ಮತ್ತು ದೇವೇಗೌಡರ ಕೃಪಾಕಟಾಕ್ಷದಿಂದ ಮಂತ್ರಿಯಾದ ಅಮಲಿನಲ್ಲಿ ಈಶ್ವರಪ್ಪ ಇನ್ನೂ ಹದಿನೈದು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದುಬಿಟ್ಟರು. ಈ ಬಗ್ಗೆ ಯಾರೂ ಅವರನ್ನ ವಿವರ ಕೇಳಲಿಲ್ಲ. ಆದರೇನು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುದಲ್ಲದೆ ಅವರ ಬಂಧುಬಾಂಧವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇದೀಗ ಮೋದಿಯವರು ಕಾಂಗ್ರೆಸ್ ಇನ್ನ ನೂರು ವರ್ಷಗಳವರೆಗೆ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಈ ಕಾಲಜ್ಞಾನಿಯ ಮಾತನ್ನು ನೆನೆಸಿಕೊಂಡು ಸ್ಮರಿಸಲು ಯಾರಿರುತ್ತಾರೆ? ಅದಿರಲಿ, ಜಗತ್ತಿನ ತಾಪಮಾನ ಕುರಿತು ನಮ್ಮ ವಿಜ್ಞಾನಿಗಳು ಎಚ್ಚರಿಸುವ ಮಾತಿನ ಪ್ರಕಾರ, ಇನ್ನ ಹದಿನೈದು ವರ್ಷದಲ್ಲಿ ಏನಾಗುತ್ತದೊ ಏನೋ! ಅಂಥಾದ್ದರಲ್ಲಿ ನೂರುವರ್ಷದ ಭವಿಷ್ಯ ಹೇಳಿರುವ ಕಾಲಜ್ಞಾನಿ ಪ್ರಧಾನಿ ಈವರೆಗೆ ಬೀದಿಯಲ್ಲಾಡುತ್ತಿದ್ದ ಮಾತನ್ನ ಲೋಕಸಭೆಯಲ್ಲಾಡುತ್ತಾರೆ, ಲೋಕಸಭೆಯ ಮಾತನ್ನು ಅಮೆರಿಕದಲ್ಲಿ ಬಿತ್ತರಿಸುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ನಮ್ಮ ಈಶ್ವರಪ್ಪನ ಜೊತೆ ಸ್ಪರ್ಧೆಗಿಳಿದಂತಿದ್ದಾರಲ್ಲಾ ಥೂತ್ತೆರಿ.

****

ಮತೀಯವಾಗಿ ಜೋರುಗಂಟಲಿನಿಂದ ಕೂಗಿದವರ ಕಡೆ ಬಿಜೆಪಿ ಪಕ್ಷದ ದೃಷ್ಟಿ ಬೇಗ ಬೀಳುತ್ತದೆ ಮತ್ತು ಅಂಥವರು ಮಾತ್ರ ನಮ್ಮ ಪಾರ್ಟಿ ಉಳಿಸಿ ಬೆಳೆಸಬಲ್ಲ ಎಂಬ ಮೂಢನಂಬಿಕೆಗೆ ತುತ್ತಾದ ಹಲವರು ಗಂಟಲು ಹರಿದುಕೊಳ್ಳುವ ಕೂಗುಮಾರಿಗಳಾಗಿದ್ದಾರಂತಲ್ಲಾ. ಈ ಪೈಕಿ ಬಸನಗೌಡ ಪಾಟೀಲ ಯತ್ನಾಳ, ಮೈಸೂರಿನ ಪ್ರತಾಪಸಿಮ್ಮ ಹಾಗೂ ಶಿವಮೊಗ್ಗದ ಈಶ್ವರಪ್ಪ ಹಳೆಯಗಂಟಲು. ಅವರದ್ದು ನೈನ್‌ಟೀನ್ ಫಾರ್ಟಿ ಸೆವೆನ್ ಮಾಡೆಲಿನ ಗಾಡಿಯ ಸೈಲೆನ್ಸರ್ ಪೈಪು. ಅದು ಶಬ್ದ ಮಾಡಿದರೆ ಉಳಿದ ಯಾವುದೇ ಶಬ್ದ ಕೇಳುವುದಿಲ್ಲ. ಅಂತಹ ಗಂಟಲಿನಲ್ಲಿ ದೇಶದ ಬಾವುಟ ಹಾರಾಡುವ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜವನ್ನ ಹಾರಿಸುತ್ತೇವೆ, ಜೊತೆಗೆ ಕೆಂಪುಕೋಟೆಯ ಮೇಲೂ ಹಾರಿಸುತ್ತೇವೆ ಎಂದು ಅಬ್ಬರಿಸಿದ್ದಾರಲ್ಲಾ. ಈ ಅಬ್ಬರವು ಅಭದ್ರತೆಯ ಮೂಲದ್ದು. ಎಡೂರಪ್ಪನ ನಂತರ ಈಶ್ವರಪ್ಪ ನಿವೃತ್ತಿಯ ಸಾಲಿನಲ್ಲಿ ನಿಂತಿರುವಾಗ ನನ್ನಂತವನು ನಿವೃತ್ತಿಗೆ ಯೋಗ್ಯನಲ್ಲ ಪಾರ್ಟಿಗೆ ಅನಿವಾರ್ಯ ಎಂಬುದು ಭಗವಾಧ್ವಜದ ದನಿಯಲ್ಲಿದೆಯಂತಲ್ಲಾ. ಅದೇನಾದರಾಗಲಿ ಎಡೂರಪ್ಪನವರ ನಿರ್ಗಮನದ ನಂತರ ಈಶ್ವರಪ್ಪ ಅನಿವಾರ್ಯವಾಗಿ ಆಕಡೆ ಸರಿದು ನಿಲ್ಲಬೇಕಿದೆ. ಏಕೆಂದರೆ ಎಡೂರಪ್ಪನ ಮುಖ ನೋಡಿ ಈಶ್ವರಪ್ಪನಿಗೆ ಓಟು ಮಾಡುತ್ತಿದ್ದ ಶಿವಮೊಗ್ಗದ ಲಿಂಗಾಯಿತರಿಗೆ ಪುನಹ ಈಶ್ವರಪ್ಪನಿಗೆ ಓಟು ಮಾಡುವ ಅಗತ್ಯ ಕಾಣುತ್ತಿಲ್ಲವಂತಲ್ಲಾ

ಥೂತ್ತೆರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...