Homeಅಂಕಣಗಳುಶುರುವಾದ ಮಹೇಶ ಜೋಶಿ ಮಂತ್ರಗಳು!

ಶುರುವಾದ ಮಹೇಶ ಜೋಶಿ ಮಂತ್ರಗಳು!

- Advertisement -
- Advertisement -

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು. ಶುದ್ಧ ಕನ್ನಡ ಎಂದರೆ ಯಾವುದು? ಈ ನಾಡಿನ ಮೂವತ್ತು ಜಿಲ್ಲೆಗಳಲ್ಲೂ ಮೂವ್ವತ್ತು ವರಸೆಯಲ್ಲಿ ಕನ್ನಡ ಮಾತನಾಡುತ್ತಾರೆ ಎಂದಾಗ ಈತನ ಪ್ರೌಢಿಮೆ ಬಾಯಿ ಮುಚ್ಚಿಕೊಂಡಿತು. ತುಂಬ ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು ಬರುತ್ತಿದ್ದ ಸಾಹಿತ್ಯ ಪರಿಷತ್‌ನ ಆಡಳಿತವನ್ನು ಕೇಂದ್ರಿಕರಿಸಲು ಹೊರಟಿರುವ ಈತ ಸಾಹಿತ್ಯ ಪರಿಷತ್ ಸದಸ್ಯರಿಗೆ ಎಸೆಸೆಲ್ಸಿ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ಶಾಲೆಗೆ ಹೋಗದೆ ಸಾವಿರಾರು ಜಾನಪದ ಹಾಡು ಹೇಳುವ, ಕತೆ ಹೇಳುವ, ಜಾನಪದ ಕುಣಿತಗಳನ್ನು ಪ್ರದರ್ಶಿಸುವ ಮತ್ತು ಡೊಳ್ಳುಬಡಿಯುವವರು ಜೋಶಿಗೆ ಭೂತ ಬಿಡಿಸಬೇಕಷ್ಟೇ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೆ ಸಾಹಿತ್ಯ ಪರಿಷತ್ ಕಾರ್ಯಾಲಯವು ಪೂರ್ಣವಾಗಿ ಕೇಶವಕೃಪವಾಗುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಪ್ರಖರ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ಡಿ.ಎಸ್ ನಾಗಭೂಷಣ ತರುತ್ತಿದ್ದ ಹೊಸ ಮನುಷ್ಯ ಎಂಬ ಮಾಸಪತ್ರಿಕೆ ನಿಲ್ಲಿಸುವುದಾಗಿ ಹೇಳಿದ್ದಾರಲ್ಲಾ! ಸದ್ಯ ಗರಹೊಡೆದ ಸ್ಥಿತಿಯಲ್ಲಿ ಪ್ರಜ್ಞಾವಂತರನ್ನು ಎಚ್ಚರಿಸುತ್ತಿದ್ದ ಹೊಸ ಮನುಷ್ಯ ಒಂದು ದಶಕವಾದರೂ ಹಳೆ ಮನುಷ್ಯನಾಗಿ ಉಳಿದಿದ್ದು ಹಳೆ ವಿಷಯ. ಆದರೆ ಹೊಸ ಮನುಷ್ಯನ ಒಗರು ದನಿ ಇರಬೇಕಿತ್ತು. ಅವನ್ನ ಹೊರತರಲು ಹಣಕಾಸಿನ ಸಮಸ್ಯೆಯಿಲ್ಲವಂತೆ, ಆದರೆ ಸಂಪಾದಕರ ಆರೋಗ್ಯ ಸಹಕರಿಸುತ್ತಿಲ್ಲವಂತೆ. ಸಮಾಜವಾದಿಗಳ ಅನಾರೋಗ್ಯದಿಂದ ಈ ಸಮಾಜಕ್ಕೆ ನಷ್ಟ. ಆಳುವ ಸರಕಾರಕ್ಕೆ ಅನಧಿಕೃತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದ ಹೊಸ ಮನುಷ್ಯ ಪ್ರತಿ ತಿಂಗಳೂ ಸಿದ್ದರಾಮಯ್ಯನ ಸರಕಾರಕ್ಕೆ ಭೂತ ಬಿಡಿಸುತ್ತಿದ್ದು ಒಂದು ವಿಶೇಷ. ಆದರೆ ಕುಮಾರಣ್ಣ ಮತ್ತು ಎಡೂರಪ್ಪನ ಸರಕಾರಕ್ಕೆ ಛಾಟಿ ಬೀಸುವ ಬದಲು ಸಪ್ಪಗಾದದ್ದೂ ಒಂದು ವಿಶೇಷ. ಪ್ರಖರ ಚಿಂತನೆಯ ನಿಷ್ಠುರ ವಿಮರ್ಶೆಯ ಮತ್ತು ನಾಡಿನ ಸಂಸ್ಕೃತಿ ಚಿಂತಕರಿಗೆ, ಬೌದ್ಧಿಕವಾಗಿ ಕೆಲಸ ಕೊಡುತ್ತಿದ್ದ ಹೊಸ ಮನುಷ್ಯ ನಿಲ್ಲಬಾರದಿತ್ತು, ಯಾರಾದರೂ ನಡೆಸಿಕೊಂಡು ಹೋಗಲು ಅನುವುಮಾಡಿಕೊಡಬೇಕಿತ್ತು. ಆದರೆ ಅಂತ ತೀರ್ಮಾನ ಇಂತವರಿಂದ ಸಾಧ್ಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಜನಪ್ರಿಯ ಪ್ರಧಾನಿ ಯಾಕೋ ಈಶ್ವರಪ್ಪನಂತೆ ಮಾತನಾಡತೊಡಗಿದ್ದಾರಲ್ಲಾ ಕುಮಾರಣ್ಣ ಮತ್ತು ದೇವೇಗೌಡರ ಕೃಪಾಕಟಾಕ್ಷದಿಂದ ಮಂತ್ರಿಯಾದ ಅಮಲಿನಲ್ಲಿ ಈಶ್ವರಪ್ಪ ಇನ್ನೂ ಹದಿನೈದು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದುಬಿಟ್ಟರು. ಈ ಬಗ್ಗೆ ಯಾರೂ ಅವರನ್ನ ವಿವರ ಕೇಳಲಿಲ್ಲ. ಆದರೇನು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುದಲ್ಲದೆ ಅವರ ಬಂಧುಬಾಂಧವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇದೀಗ ಮೋದಿಯವರು ಕಾಂಗ್ರೆಸ್ ಇನ್ನ ನೂರು ವರ್ಷಗಳವರೆಗೆ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಈ ಕಾಲಜ್ಞಾನಿಯ ಮಾತನ್ನು ನೆನೆಸಿಕೊಂಡು ಸ್ಮರಿಸಲು ಯಾರಿರುತ್ತಾರೆ? ಅದಿರಲಿ, ಜಗತ್ತಿನ ತಾಪಮಾನ ಕುರಿತು ನಮ್ಮ ವಿಜ್ಞಾನಿಗಳು ಎಚ್ಚರಿಸುವ ಮಾತಿನ ಪ್ರಕಾರ, ಇನ್ನ ಹದಿನೈದು ವರ್ಷದಲ್ಲಿ ಏನಾಗುತ್ತದೊ ಏನೋ! ಅಂಥಾದ್ದರಲ್ಲಿ ನೂರುವರ್ಷದ ಭವಿಷ್ಯ ಹೇಳಿರುವ ಕಾಲಜ್ಞಾನಿ ಪ್ರಧಾನಿ ಈವರೆಗೆ ಬೀದಿಯಲ್ಲಾಡುತ್ತಿದ್ದ ಮಾತನ್ನ ಲೋಕಸಭೆಯಲ್ಲಾಡುತ್ತಾರೆ, ಲೋಕಸಭೆಯ ಮಾತನ್ನು ಅಮೆರಿಕದಲ್ಲಿ ಬಿತ್ತರಿಸುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ನಮ್ಮ ಈಶ್ವರಪ್ಪನ ಜೊತೆ ಸ್ಪರ್ಧೆಗಿಳಿದಂತಿದ್ದಾರಲ್ಲಾ ಥೂತ್ತೆರಿ.

****

ಮತೀಯವಾಗಿ ಜೋರುಗಂಟಲಿನಿಂದ ಕೂಗಿದವರ ಕಡೆ ಬಿಜೆಪಿ ಪಕ್ಷದ ದೃಷ್ಟಿ ಬೇಗ ಬೀಳುತ್ತದೆ ಮತ್ತು ಅಂಥವರು ಮಾತ್ರ ನಮ್ಮ ಪಾರ್ಟಿ ಉಳಿಸಿ ಬೆಳೆಸಬಲ್ಲ ಎಂಬ ಮೂಢನಂಬಿಕೆಗೆ ತುತ್ತಾದ ಹಲವರು ಗಂಟಲು ಹರಿದುಕೊಳ್ಳುವ ಕೂಗುಮಾರಿಗಳಾಗಿದ್ದಾರಂತಲ್ಲಾ. ಈ ಪೈಕಿ ಬಸನಗೌಡ ಪಾಟೀಲ ಯತ್ನಾಳ, ಮೈಸೂರಿನ ಪ್ರತಾಪಸಿಮ್ಮ ಹಾಗೂ ಶಿವಮೊಗ್ಗದ ಈಶ್ವರಪ್ಪ ಹಳೆಯಗಂಟಲು. ಅವರದ್ದು ನೈನ್‌ಟೀನ್ ಫಾರ್ಟಿ ಸೆವೆನ್ ಮಾಡೆಲಿನ ಗಾಡಿಯ ಸೈಲೆನ್ಸರ್ ಪೈಪು. ಅದು ಶಬ್ದ ಮಾಡಿದರೆ ಉಳಿದ ಯಾವುದೇ ಶಬ್ದ ಕೇಳುವುದಿಲ್ಲ. ಅಂತಹ ಗಂಟಲಿನಲ್ಲಿ ದೇಶದ ಬಾವುಟ ಹಾರಾಡುವ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜವನ್ನ ಹಾರಿಸುತ್ತೇವೆ, ಜೊತೆಗೆ ಕೆಂಪುಕೋಟೆಯ ಮೇಲೂ ಹಾರಿಸುತ್ತೇವೆ ಎಂದು ಅಬ್ಬರಿಸಿದ್ದಾರಲ್ಲಾ. ಈ ಅಬ್ಬರವು ಅಭದ್ರತೆಯ ಮೂಲದ್ದು. ಎಡೂರಪ್ಪನ ನಂತರ ಈಶ್ವರಪ್ಪ ನಿವೃತ್ತಿಯ ಸಾಲಿನಲ್ಲಿ ನಿಂತಿರುವಾಗ ನನ್ನಂತವನು ನಿವೃತ್ತಿಗೆ ಯೋಗ್ಯನಲ್ಲ ಪಾರ್ಟಿಗೆ ಅನಿವಾರ್ಯ ಎಂಬುದು ಭಗವಾಧ್ವಜದ ದನಿಯಲ್ಲಿದೆಯಂತಲ್ಲಾ. ಅದೇನಾದರಾಗಲಿ ಎಡೂರಪ್ಪನವರ ನಿರ್ಗಮನದ ನಂತರ ಈಶ್ವರಪ್ಪ ಅನಿವಾರ್ಯವಾಗಿ ಆಕಡೆ ಸರಿದು ನಿಲ್ಲಬೇಕಿದೆ. ಏಕೆಂದರೆ ಎಡೂರಪ್ಪನ ಮುಖ ನೋಡಿ ಈಶ್ವರಪ್ಪನಿಗೆ ಓಟು ಮಾಡುತ್ತಿದ್ದ ಶಿವಮೊಗ್ಗದ ಲಿಂಗಾಯಿತರಿಗೆ ಪುನಹ ಈಶ್ವರಪ್ಪನಿಗೆ ಓಟು ಮಾಡುವ ಅಗತ್ಯ ಕಾಣುತ್ತಿಲ್ಲವಂತಲ್ಲಾ

ಥೂತ್ತೆರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...