Homeಅಂಕಣಗಳುಶುರುವಾದ ಮಹೇಶ ಜೋಶಿ ಮಂತ್ರಗಳು!

ಶುರುವಾದ ಮಹೇಶ ಜೋಶಿ ಮಂತ್ರಗಳು!

- Advertisement -
- Advertisement -

ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು. ಶುದ್ಧ ಕನ್ನಡ ಎಂದರೆ ಯಾವುದು? ಈ ನಾಡಿನ ಮೂವತ್ತು ಜಿಲ್ಲೆಗಳಲ್ಲೂ ಮೂವ್ವತ್ತು ವರಸೆಯಲ್ಲಿ ಕನ್ನಡ ಮಾತನಾಡುತ್ತಾರೆ ಎಂದಾಗ ಈತನ ಪ್ರೌಢಿಮೆ ಬಾಯಿ ಮುಚ್ಚಿಕೊಂಡಿತು. ತುಂಬ ಪ್ರಜಾಸತ್ತಾತ್ಮಕವಾಗಿ ನಡೆದುಕೊಂಡು ಬರುತ್ತಿದ್ದ ಸಾಹಿತ್ಯ ಪರಿಷತ್‌ನ ಆಡಳಿತವನ್ನು ಕೇಂದ್ರಿಕರಿಸಲು ಹೊರಟಿರುವ ಈತ ಸಾಹಿತ್ಯ ಪರಿಷತ್ ಸದಸ್ಯರಿಗೆ ಎಸೆಸೆಲ್ಸಿ ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ಶಾಲೆಗೆ ಹೋಗದೆ ಸಾವಿರಾರು ಜಾನಪದ ಹಾಡು ಹೇಳುವ, ಕತೆ ಹೇಳುವ, ಜಾನಪದ ಕುಣಿತಗಳನ್ನು ಪ್ರದರ್ಶಿಸುವ ಮತ್ತು ಡೊಳ್ಳುಬಡಿಯುವವರು ಜೋಶಿಗೆ ಭೂತ ಬಿಡಿಸಬೇಕಷ್ಟೇ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೆ ಸಾಹಿತ್ಯ ಪರಿಷತ್ ಕಾರ್ಯಾಲಯವು ಪೂರ್ಣವಾಗಿ ಕೇಶವಕೃಪವಾಗುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಪ್ರಖರ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ಡಿ.ಎಸ್ ನಾಗಭೂಷಣ ತರುತ್ತಿದ್ದ ಹೊಸ ಮನುಷ್ಯ ಎಂಬ ಮಾಸಪತ್ರಿಕೆ ನಿಲ್ಲಿಸುವುದಾಗಿ ಹೇಳಿದ್ದಾರಲ್ಲಾ! ಸದ್ಯ ಗರಹೊಡೆದ ಸ್ಥಿತಿಯಲ್ಲಿ ಪ್ರಜ್ಞಾವಂತರನ್ನು ಎಚ್ಚರಿಸುತ್ತಿದ್ದ ಹೊಸ ಮನುಷ್ಯ ಒಂದು ದಶಕವಾದರೂ ಹಳೆ ಮನುಷ್ಯನಾಗಿ ಉಳಿದಿದ್ದು ಹಳೆ ವಿಷಯ. ಆದರೆ ಹೊಸ ಮನುಷ್ಯನ ಒಗರು ದನಿ ಇರಬೇಕಿತ್ತು. ಅವನ್ನ ಹೊರತರಲು ಹಣಕಾಸಿನ ಸಮಸ್ಯೆಯಿಲ್ಲವಂತೆ, ಆದರೆ ಸಂಪಾದಕರ ಆರೋಗ್ಯ ಸಹಕರಿಸುತ್ತಿಲ್ಲವಂತೆ. ಸಮಾಜವಾದಿಗಳ ಅನಾರೋಗ್ಯದಿಂದ ಈ ಸಮಾಜಕ್ಕೆ ನಷ್ಟ. ಆಳುವ ಸರಕಾರಕ್ಕೆ ಅನಧಿಕೃತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದ ಹೊಸ ಮನುಷ್ಯ ಪ್ರತಿ ತಿಂಗಳೂ ಸಿದ್ದರಾಮಯ್ಯನ ಸರಕಾರಕ್ಕೆ ಭೂತ ಬಿಡಿಸುತ್ತಿದ್ದು ಒಂದು ವಿಶೇಷ. ಆದರೆ ಕುಮಾರಣ್ಣ ಮತ್ತು ಎಡೂರಪ್ಪನ ಸರಕಾರಕ್ಕೆ ಛಾಟಿ ಬೀಸುವ ಬದಲು ಸಪ್ಪಗಾದದ್ದೂ ಒಂದು ವಿಶೇಷ. ಪ್ರಖರ ಚಿಂತನೆಯ ನಿಷ್ಠುರ ವಿಮರ್ಶೆಯ ಮತ್ತು ನಾಡಿನ ಸಂಸ್ಕೃತಿ ಚಿಂತಕರಿಗೆ, ಬೌದ್ಧಿಕವಾಗಿ ಕೆಲಸ ಕೊಡುತ್ತಿದ್ದ ಹೊಸ ಮನುಷ್ಯ ನಿಲ್ಲಬಾರದಿತ್ತು, ಯಾರಾದರೂ ನಡೆಸಿಕೊಂಡು ಹೋಗಲು ಅನುವುಮಾಡಿಕೊಡಬೇಕಿತ್ತು. ಆದರೆ ಅಂತ ತೀರ್ಮಾನ ಇಂತವರಿಂದ ಸಾಧ್ಯವಿಲ್ಲವಂತಲ್ಲಾ ಥೂತ್ತೆರಿ.

****

ನಮ್ಮ ಜನಪ್ರಿಯ ಪ್ರಧಾನಿ ಯಾಕೋ ಈಶ್ವರಪ್ಪನಂತೆ ಮಾತನಾಡತೊಡಗಿದ್ದಾರಲ್ಲಾ ಕುಮಾರಣ್ಣ ಮತ್ತು ದೇವೇಗೌಡರ ಕೃಪಾಕಟಾಕ್ಷದಿಂದ ಮಂತ್ರಿಯಾದ ಅಮಲಿನಲ್ಲಿ ಈಶ್ವರಪ್ಪ ಇನ್ನೂ ಹದಿನೈದು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದುಬಿಟ್ಟರು. ಈ ಬಗ್ಗೆ ಯಾರೂ ಅವರನ್ನ ವಿವರ ಕೇಳಲಿಲ್ಲ. ಆದರೇನು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುದಲ್ಲದೆ ಅವರ ಬಂಧುಬಾಂಧವರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಇದೀಗ ಮೋದಿಯವರು ಕಾಂಗ್ರೆಸ್ ಇನ್ನ ನೂರು ವರ್ಷಗಳವರೆಗೆ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ. ಈ ಕಾಲಜ್ಞಾನಿಯ ಮಾತನ್ನು ನೆನೆಸಿಕೊಂಡು ಸ್ಮರಿಸಲು ಯಾರಿರುತ್ತಾರೆ? ಅದಿರಲಿ, ಜಗತ್ತಿನ ತಾಪಮಾನ ಕುರಿತು ನಮ್ಮ ವಿಜ್ಞಾನಿಗಳು ಎಚ್ಚರಿಸುವ ಮಾತಿನ ಪ್ರಕಾರ, ಇನ್ನ ಹದಿನೈದು ವರ್ಷದಲ್ಲಿ ಏನಾಗುತ್ತದೊ ಏನೋ! ಅಂಥಾದ್ದರಲ್ಲಿ ನೂರುವರ್ಷದ ಭವಿಷ್ಯ ಹೇಳಿರುವ ಕಾಲಜ್ಞಾನಿ ಪ್ರಧಾನಿ ಈವರೆಗೆ ಬೀದಿಯಲ್ಲಾಡುತ್ತಿದ್ದ ಮಾತನ್ನ ಲೋಕಸಭೆಯಲ್ಲಾಡುತ್ತಾರೆ, ಲೋಕಸಭೆಯ ಮಾತನ್ನು ಅಮೆರಿಕದಲ್ಲಿ ಬಿತ್ತರಿಸುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ನಮ್ಮ ಈಶ್ವರಪ್ಪನ ಜೊತೆ ಸ್ಪರ್ಧೆಗಿಳಿದಂತಿದ್ದಾರಲ್ಲಾ ಥೂತ್ತೆರಿ.

****

ಮತೀಯವಾಗಿ ಜೋರುಗಂಟಲಿನಿಂದ ಕೂಗಿದವರ ಕಡೆ ಬಿಜೆಪಿ ಪಕ್ಷದ ದೃಷ್ಟಿ ಬೇಗ ಬೀಳುತ್ತದೆ ಮತ್ತು ಅಂಥವರು ಮಾತ್ರ ನಮ್ಮ ಪಾರ್ಟಿ ಉಳಿಸಿ ಬೆಳೆಸಬಲ್ಲ ಎಂಬ ಮೂಢನಂಬಿಕೆಗೆ ತುತ್ತಾದ ಹಲವರು ಗಂಟಲು ಹರಿದುಕೊಳ್ಳುವ ಕೂಗುಮಾರಿಗಳಾಗಿದ್ದಾರಂತಲ್ಲಾ. ಈ ಪೈಕಿ ಬಸನಗೌಡ ಪಾಟೀಲ ಯತ್ನಾಳ, ಮೈಸೂರಿನ ಪ್ರತಾಪಸಿಮ್ಮ ಹಾಗೂ ಶಿವಮೊಗ್ಗದ ಈಶ್ವರಪ್ಪ ಹಳೆಯಗಂಟಲು. ಅವರದ್ದು ನೈನ್‌ಟೀನ್ ಫಾರ್ಟಿ ಸೆವೆನ್ ಮಾಡೆಲಿನ ಗಾಡಿಯ ಸೈಲೆನ್ಸರ್ ಪೈಪು. ಅದು ಶಬ್ದ ಮಾಡಿದರೆ ಉಳಿದ ಯಾವುದೇ ಶಬ್ದ ಕೇಳುವುದಿಲ್ಲ. ಅಂತಹ ಗಂಟಲಿನಲ್ಲಿ ದೇಶದ ಬಾವುಟ ಹಾರಾಡುವ ಧ್ವಜಸ್ತಂಭದಿಂದ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜವನ್ನ ಹಾರಿಸುತ್ತೇವೆ, ಜೊತೆಗೆ ಕೆಂಪುಕೋಟೆಯ ಮೇಲೂ ಹಾರಿಸುತ್ತೇವೆ ಎಂದು ಅಬ್ಬರಿಸಿದ್ದಾರಲ್ಲಾ. ಈ ಅಬ್ಬರವು ಅಭದ್ರತೆಯ ಮೂಲದ್ದು. ಎಡೂರಪ್ಪನ ನಂತರ ಈಶ್ವರಪ್ಪ ನಿವೃತ್ತಿಯ ಸಾಲಿನಲ್ಲಿ ನಿಂತಿರುವಾಗ ನನ್ನಂತವನು ನಿವೃತ್ತಿಗೆ ಯೋಗ್ಯನಲ್ಲ ಪಾರ್ಟಿಗೆ ಅನಿವಾರ್ಯ ಎಂಬುದು ಭಗವಾಧ್ವಜದ ದನಿಯಲ್ಲಿದೆಯಂತಲ್ಲಾ. ಅದೇನಾದರಾಗಲಿ ಎಡೂರಪ್ಪನವರ ನಿರ್ಗಮನದ ನಂತರ ಈಶ್ವರಪ್ಪ ಅನಿವಾರ್ಯವಾಗಿ ಆಕಡೆ ಸರಿದು ನಿಲ್ಲಬೇಕಿದೆ. ಏಕೆಂದರೆ ಎಡೂರಪ್ಪನ ಮುಖ ನೋಡಿ ಈಶ್ವರಪ್ಪನಿಗೆ ಓಟು ಮಾಡುತ್ತಿದ್ದ ಶಿವಮೊಗ್ಗದ ಲಿಂಗಾಯಿತರಿಗೆ ಪುನಹ ಈಶ್ವರಪ್ಪನಿಗೆ ಓಟು ಮಾಡುವ ಅಗತ್ಯ ಕಾಣುತ್ತಿಲ್ಲವಂತಲ್ಲಾ

ಥೂತ್ತೆರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...