Homeಚಳವಳಿಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಮಹೇಶ್ ರಾವುತ್ ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲಿಲ್ಲ. ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…


ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

ಬಿಹಾರದಲ್ಲಿ ಕೆಲಸ ಮಾಡುತ್ತಿರುವ ಅವರ ಗೆಳತಿ ಮತ್ತು ಸಹ ಕಾರ್ಯಕರ್ತೆ ಸೋಹಿನಿ ಶೊಯೆಬ್ ಅವರು ಮಹೇಶ್ ಕುರಿತು ಹೀಗೆ ಬರೆಯುತ್ತಾರೆ: “ಮಹೇಶ್ ಈ ಎಲ್ಲಾ ಹಳ್ಳಿಗಳಲ್ಲಿ ಅತ್ಯಂತ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು ಮತ್ತು ನಾನು ಭೇಟಿ ಮಾಡಿದ ಜನರೊಂದಿಗೆ ಒಂದಾಗಿದ್ದರು. ಜನರು ತಮ್ಮ ಸ್ವಂತ ಮನೆಮಗನೋ ಎಂಬಂತೆ ಅವರನ್ನು ನಡೆಸಿಕೊಳ್ಳುತ್ತಿದ್ದರು! ಮದುವೆಯಾಗುವಂತೆ ಅವರ ಮನವೊಲಿಸಬೇಕು ಎಂದೂ ಕೆಲವರು ನನ್ನನ್ನು ಒತ್ತಾಯಿಸಿದರು. ಜೀವನ ಸಂಗಾತಿ ಬಂದರೆ ಅವರ ಒಂಟಿತನ ಕಡಿಮೆಯಾಗಿ, ಜೀವನದ ಇತರ ವಿಷಯಗಳ ಬಗ್ಗೆ ಸಮತೋಲನ ಕಾಪಾಡಲು ನೆರವಾಗುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು!”

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ಕೃಪೆ: ಮಹಾರಾಷ್ಟ್ರ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

Also Read: When the moon slips into Darkness: K Satyanrayana on Varavara Rao

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...