Homeಚಳವಳಿಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಮಹೇಶ್ ರಾವುತ್ ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲಿಲ್ಲ. ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…


ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

ಬಿಹಾರದಲ್ಲಿ ಕೆಲಸ ಮಾಡುತ್ತಿರುವ ಅವರ ಗೆಳತಿ ಮತ್ತು ಸಹ ಕಾರ್ಯಕರ್ತೆ ಸೋಹಿನಿ ಶೊಯೆಬ್ ಅವರು ಮಹೇಶ್ ಕುರಿತು ಹೀಗೆ ಬರೆಯುತ್ತಾರೆ: “ಮಹೇಶ್ ಈ ಎಲ್ಲಾ ಹಳ್ಳಿಗಳಲ್ಲಿ ಅತ್ಯಂತ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು ಮತ್ತು ನಾನು ಭೇಟಿ ಮಾಡಿದ ಜನರೊಂದಿಗೆ ಒಂದಾಗಿದ್ದರು. ಜನರು ತಮ್ಮ ಸ್ವಂತ ಮನೆಮಗನೋ ಎಂಬಂತೆ ಅವರನ್ನು ನಡೆಸಿಕೊಳ್ಳುತ್ತಿದ್ದರು! ಮದುವೆಯಾಗುವಂತೆ ಅವರ ಮನವೊಲಿಸಬೇಕು ಎಂದೂ ಕೆಲವರು ನನ್ನನ್ನು ಒತ್ತಾಯಿಸಿದರು. ಜೀವನ ಸಂಗಾತಿ ಬಂದರೆ ಅವರ ಒಂಟಿತನ ಕಡಿಮೆಯಾಗಿ, ಜೀವನದ ಇತರ ವಿಷಯಗಳ ಬಗ್ಗೆ ಸಮತೋಲನ ಕಾಪಾಡಲು ನೆರವಾಗುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು!”

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ಕೃಪೆ: ಮಹಾರಾಷ್ಟ್ರ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

Also Read: When the moon slips into Darkness: K Satyanrayana on Varavara Rao

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...