Homeಚಳವಳಿಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಮಹೇಶ್ ರಾವುತ್ ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲಿಲ್ಲ. ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…


ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

ಬಿಹಾರದಲ್ಲಿ ಕೆಲಸ ಮಾಡುತ್ತಿರುವ ಅವರ ಗೆಳತಿ ಮತ್ತು ಸಹ ಕಾರ್ಯಕರ್ತೆ ಸೋಹಿನಿ ಶೊಯೆಬ್ ಅವರು ಮಹೇಶ್ ಕುರಿತು ಹೀಗೆ ಬರೆಯುತ್ತಾರೆ: “ಮಹೇಶ್ ಈ ಎಲ್ಲಾ ಹಳ್ಳಿಗಳಲ್ಲಿ ಅತ್ಯಂತ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು ಮತ್ತು ನಾನು ಭೇಟಿ ಮಾಡಿದ ಜನರೊಂದಿಗೆ ಒಂದಾಗಿದ್ದರು. ಜನರು ತಮ್ಮ ಸ್ವಂತ ಮನೆಮಗನೋ ಎಂಬಂತೆ ಅವರನ್ನು ನಡೆಸಿಕೊಳ್ಳುತ್ತಿದ್ದರು! ಮದುವೆಯಾಗುವಂತೆ ಅವರ ಮನವೊಲಿಸಬೇಕು ಎಂದೂ ಕೆಲವರು ನನ್ನನ್ನು ಒತ್ತಾಯಿಸಿದರು. ಜೀವನ ಸಂಗಾತಿ ಬಂದರೆ ಅವರ ಒಂಟಿತನ ಕಡಿಮೆಯಾಗಿ, ಜೀವನದ ಇತರ ವಿಷಯಗಳ ಬಗ್ಗೆ ಸಮತೋಲನ ಕಾಪಾಡಲು ನೆರವಾಗುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು!”

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ಕೃಪೆ: ಮಹಾರಾಷ್ಟ್ರ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

Also Read: When the moon slips into Darkness: K Satyanrayana on Varavara Rao

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...