Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...