Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...