Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...