Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...