Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...