Homeಮುಖಪುಟಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಮಹಿಳಾ ಒಕ್ಕೂಟಕ್ಕೆ ದಶಕದ ಸಂಭ್ರಮ: ಸಂವಿಧಾನವೇ ಉಸಿರು, ಬಹುತ್ವವೇ ಬದುಕು ಕಾರ್ಯಕ್ರಮ

ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ ಹತ್ತು ವರ್ಷ ಪೂರೈಸಿದ ನೆನಪಿನಲ್ಲಿ ಸಂವಿಧಾನವೇ ಉಸಿರು, ಬಹುತ್ವವೇ ಬದುಕು’ ಹೆಸರಿನಲ್ಲಿ ಒಗ್ಗೂಡುವ ಹಬ್ಬ ನಡೆಯಿತು. ಹಲವು ಚಿಂತಕಿಯರು, ಹೋರಾಟಗಾರ್ತಿಯರು ಭಾಗವಹಿಸಿ ಹೋರಾಟದ ಮಹತ್ವದ ಕುರಿತು ಮಾತನಾಡಿದರು.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಮಾತನಾಡಿ, “ಭಾರತದ ಮಹಿಳಾವಾದಿ ಚಳವಳಿ ಸ್ವತಂತ್ರ ಭಾರತದಲ್ಲಿ ಕಾನೂನು ಮತ್ತು ನ್ಯಾಯದ ನಡುವೆ ಇರುವ ಅಂತರವನ್ನು ಬೆಳಕಿಗೆ ತಂದಿದೆ. ಇಂದಿನ ಸಮಾಜದಲ್ಲಿ ಹಕ್ಕುಗಳ ರಕ್ಷಣೆಗೆ ಸಂಪ್ರದಾಯವೇ ಸಾಕು, ಸಂವಿಧಾನದ ಅಗತ್ಯವೇ ಇಲ್ಲವೆಂಬಂತೆ ಬಲಪಂಥೀಯ ದಾಳಿ ನಡೆಯುತ್ತಿದೆ. ಹೀಗಾಗಿ ಸಂವಿಧಾನವೇ ಬದುಕು ಮತ್ತು ಬಹುತ್ವವೇ ಉಸಿರು ಎಂಬ ಹೋರಾಟ ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಿದೆ ಎಂದು ಹೇಳಿದರು.

ಎನ್ಎಫ್‌ಡಿಡಬ್ಲ್ಯೂ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ರುತ್ ಮನೋರಮಾ ಮಾತನಾಡಿ, “ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ಯ್ರವು ಮಹಿಳಾ ಚಳವಳಿಯ ಫಲವೇ ಆಗಿದೆ. ಮಹಿಳೆಯರ ಮೇಲಿನ ಎಲ್ಲ ಬಗೆಯ ದೌರ್ಜನ್ಯಗಳು ಹೆಚ್ಚಾಗಲು ಸಾಮಾಜಿಕ-ಆರ್ಥಿಕ ಪ್ರಾಬಲ್ಯವೇ ಕಾರಣ. ಯುವ ಮಹಿಳೆಯರು ಮನೆಯಿಂದ ಹೊರಬನ್ನಿ, ಅನ್ಯಾಯ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಬೇಕು” ಎಂದು ಕರೆ ನೀಡಿದರು.

“ಕುಟುಂಬ, ಕೆಲಸದ ಸ್ಥಳ, ಸಂಘಟನೆ ಎಲ್ಲೆಡೆ ಜಾತಿ, ಜನಾಂಗೀಯ ಭೇದಗಳಿವೆ. ರಾಜಕೀಯದಲ್ಲಿಯೂ ಇಂತಹ ಭೇದಭಾವಗಳಿವೆ. ದೇಶದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ಸಮಾನತೆಯಿಂದ ಮಾತ್ರವೇ ಇದನ್ನು ಹೊಡೆದುರುಳಿಸಲು ಸಾಧ್ಯ.. ಸಮಾನತೆ ಮತ್ತು ಸಾಮಾಜಿಕ ನ್ಯಾಯ ಮಹಿಳೆಯರಿಗೆ ಹುಟ್ಟಿನಿಂದಲೇ ಇರುವ ಹಕ್ಕುಗಳು. ಪ್ರಭುತ್ವವು ಸಂವಿಧಾನ ಮತ್ತು ಮಹಿಳೆಯರ ಹಕ್ಕುಗಳನ್ನು ಗೌರವಿಸಬೇಕು” ಎಂದು ಹೇಳಿದರು.

ಮನೆಯೊಳಗೆ ಹೆಣ್ಣು, ಹೊರಗೆ ಗಂಡು ಎಂಬ ವರ್ಗೀಕರಣದ ಮಾದರಿಗಳನ್ನು ಒಡೆದು ಸಮಾಜದಲ್ಲಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಆರಂಭವಾಗಬೇಕು. ಮಹಿಳೆಯ ಜಗತ್ತು ಯಾವಾಗ ಮನೆಯಿಂದ ಆಚೆಗೆ ವಿಸ್ತರಿಸುತ್ತದೆಯೋ ಅಂದು ಮಹಿಳಾ ವಿಮೋಚನೆಯ ಹಾದಿ ತೆರೆದುಕೊಳ್ಳಲಾರಂಭಿಸುತ್ತದೆ ಎಂದು ಲೇಖಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು.

‘‘ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವುದು, ಮಹಿಳಾ ಅಜೆಂಡಾಗಳು ರಾಜಕೀಯ ಹೋರಾಟವಾಗಬೇಕು. ಸಂವಿಧಾನದಲ್ಲಿ ಸ್ತ್ರೀ-ಪುರುಷ ಸಮಾನತೆಯ ಬಗ್ಗೆ ಮಾತನಾಡುವಾಗಲು ಸಮಾಜದೊಳಗೆ ಇರುವ ಅಸಮಾನತೆ ವಿರುದ್ಧ ಹೋರಾಟ ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹೆಣ್ಣಿನ ಅಸ್ಮಿತೆಯನ್ನು ಸ್ಥಾಪಿಸಿಕೊಳ್ಳುವ ಯೋಚನೆ ಮತ್ತು ಚಿಂತನೆ ಬಂದಾಗ ಮಾತ್ರ ಚರಿತ್ರೆಯನ್ನು ದಾಖಲಿಸಬೇಕು ಎನ್ನುವ ಮನೋಭಾವ ಮೂಡಲು ಸಾಧ್ಯ” ಎಂದರು.

“ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬೇಕು-ಬೇಡ ಎನ್ನುವ ವಿಷಯ ಬಂದಾಗ ಎಲ್ಲ ಪಕ್ಷಗಳಲ್ಲಿರುವ ಮಹಿಳೆಯರು ಮಾತನಾಡುತ್ತಾರೆ. ಆದರೆ, ಅತ್ಯಾಚಾರ, ದೌರ್ಜನ್ಯದ ವಿಷಯ ಬಂದಾಗ ಆ ಮಹಿಳೆಯರು ಧ್ವನಿ ಎತ್ತದೇ ಇರುವುದು ಆಶ್ಚರ್ಯ. ಸಂಸತ್ತಿನಲ್ಲಿ ಮಹಿಳೆಯರು ಹೆಚ್ಚಿರಬೇಕು ಎಂದು ಹೇಳಲಾಗುತ್ತದೆ. ಆದರೆ, ಇರುವ ಮಹಿಳೆಯರು ಧ್ವನಿ ಎತ್ತಿ ಮಾತನಾಡಿದಾಗ ಅವರ ಚಾರಿತ್ರ್ಯವಧೆ ಮಾಡುವ, ನಿಂದಿಸಿರುವ ಹಲವು ಉದಾಹರಣೆಗಳಿವೆ. ಕರ್ನಾಟಕದ ವಿಧಾನಸಭೆಯಲ್ಲಿಯೇ ಜನಪ್ರತಿನಿಧಿಗಳು ಮಹಿಳೆಯರ ಬಗ್ಗೆ ಮಾತನಾಡಿದಾಗ, ಆ ಸಭೆಯಲ್ಲಿದ್ದ ಮಹಿಳೆಯರು ಮೌನವಹಿಸಿದ್ದನ್ನು ನೋಡಬಹುದು. ರಾಜಕೀಯದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ಇಂತಹ ದೌರ್ಜನ್ಯಗಳ ವಿರುದ್ಧ ಮಾತನಾಡಬೇಕಿದೆ” ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ, “ಜನಸಂಖ್ಯೆಯ ಅರ್ಧದಷ್ಟಿರುವ ನಾವು ಒಂದು ವರ್ಗವಾಗಿ, ಒಂದು ಶಕ್ತಿಯಾಗಲು ಸಾಧ್ಯವಾಗಿಲ್ಲ ಏಕೆ?. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹಿಳೆಯಾಗಿ ಒಗ್ಗೂಡಲು ಏಕೆ ಸೋತಿದ್ದೇವೆ?. ನಮಗಾಗುತ್ತಿರುವ ಅಡ್ಡಿಯಗಳೇನು?  ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ” ಎಂದರು.

“ಮಹಿಳೆ ಎನ್ನುವ ಏಕೈಕ ಕಾರಣಕ್ಕಾಗಿ ನಾವೆಲ್ಲರೂ ಒಂದುಗೊಡಲು ಈವರೆಗೂ ಸಾಧ್ಯವಾಗಿಲ್ಲ. ಅದಕ್ಕೆ ವಾತಾವರಣ ವಲಯ ಎಲ್ಲವೂ ಕಾರಣ. ನಾವು ಶಕ್ತಿಯಾಗಿ ರೂಪುಗೊಳ್ಳದೇ ಇರಲು ಜಾತಿ, ಧರ್ಮ, ಭಾಷೆ, ಆಹಾರ, ವೃತ್ತಿ, ಶಿಕ್ಷಣ ಹೀಗೆ ನೂರಾರು ಕಂಪಾರ್ಟ್ಮೆಂಟ್‌ಗಳ ಒಳಗೆ ಸಿಲುಕಿದ್ದೇವೆ. ಇವೆಲ್ಲದರಿಂದ ಹೊರಗೆ ಬರಲು ಸಾಧ್ಯವಾದ ದಿನ ನಾವು ಎಲ್ಲರೂ ಒಂದು ಶಕ್ತಿಯಾಗಿ ಕೆಲಸ ಮಾಡಲು ಸಾಧ್ಯ” ಎಂದು ತಿಳಿಸಿದರು.

“ಉಳಿದ ಚಳವಳಿ, ಹೋರಾಟ ವಲಯಗಳಲ್ಲಿ ಶೋಷಕ ವರ್ಗಗಳು ಸ್ಫುಟವಾಗಿ ಕಾಣುವಂತೆ ಮಹಿಳೆಯನ್ನು ಶೋಷಿರುತ್ತಿರುವವರು ಹಾಗೆ ಕಾಣುವುದಿಲ್ಲ. ಏಕೆಂದರೆ, ಇದು ನಮ್ಮ ಭಾವ ಜಗತ್ತಿನ ಒಳಗೆ ಸ್ಥಾಪಿತರಾದವರ ಜೊತೆಗೆ ನಮ್ಮ ನಿರಂತರ ಗುದ್ದಾಟ ಇದೆ. ಆದ್ದರಿಂದಲೇ ಇದು ಕಾಣುವುದಿಲ್ಲ. ನಮ್ಮನ್ನು ಈ ರೀತಿ ಕಟ್ಟಿಹಾಕಿರುವ ಎಲ್ಲ ಗೋಡೆಗಳನ್ನು ಒಡೆದು, ಅರಿವಿನ ಮೂಲಕ ಹೊರಬರಬೇಕಿದೆ” ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಎಚ್.ಎಸ್‌ ಅನುಪಮಾ, ಸುನಂದಾ ಕಡಮೆ, ಸಬಿತಾ ಬನ್ನಾಡಿ, ಮಲ್ಲಿಗೆ, ಆರ್ ಪ್ರತಿಭಾ, ರತಿರಾವ್, ಸುಮನಾ, ವಾಣಿ ಪೆರಿಯೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...