Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...