Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...