Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...