Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...