Homeಮುಖಪುಟಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮತ್ತು ಕಳೆದ ಎಂಟು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿರುವ ಮಹಿಷ ದಸರ ಕುರಿತು ಮನುವಾದಿಗಳಿಗಿಂತ ಬಹುಜನರೇ ಹೆಚ್ಚು ಆತಂಕಕ್ಕೊಳಗಾಗಿರುವಂತೆ ಕಂಡುಬಂದಿದೆ. ನಮ್ಮ ಅನೇಕ ಹೋರಾಟಗಾರ ಸ್ನೇಹಿತರು ಮತ್ತು ಬುದ್ದಿಜೀವಿ ಬಳಗ ಇದೊಂದು ಪುರಾಣದ ಕತೆ, ನಮ್ಮ ಜನರನ್ನು ದಿಕ್ಕುತಪ್ಪಿಸಲು ಕೆಲವರು ಮಹಿಷನನ್ನು ಐತಿಹಾಸಿಕ ಪುರುಷ ಎಂದು ನಂಬಿಸುತ್ತಿದ್ದಾರೆ. ನಾವು ಬೌದ್ದರಾದರೆ ಸಾಕು. ಅದು ಬಿಟ್ಟು ಈ ಮಹಿಷನ ಕತೆ ಕಟ್ಟಿಕೊಂಡು ಏನಾಗಬೇಕಿದೆ? ಎಂದು ಜಾಲತಾಣದಲ್ಲಿ ವಾದಿಸುತ್ತಿದ್ದಾರೆ. ದಯಮಾಡಿ ಯಾರೂ ಗೊಂದಲಕ್ಕೊಳಗಾಗಬೇಡಿ. ಮಹಿಷಾಸುರ ಖಂಡಿತವಾಗಿ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ.

ಮಹಿಷನಾಡು, ಮಹಿಷೂರು ನಂತರ ಮೈಸೂರು ಆಗಿದೆ. ಮೈಸೂರಲ್ಲಿ ಮಹಿಷಾಸುರನ ಹಲವು ಪ್ರತಿಮೆಗಳಿವೆ. ಈಗಿನ ಚಾಮುಂಡಿ ಬೆಟ್ಟ ಹಿಂದೆ ಮಹಿಷಗಿರಿ ಎಂದು ಪ್ರಚಲಿತದಲ್ಲಿತ್ತು ಅದನ್ನು ಮಹಾಬಲ ಬೆಟ್ಟ ಎಂತಲೂ ಕರೆದಿದ್ದಾರೆ.

ಮಹಿಷ ಎಂದರೆ ಎಮ್ಮೆ. ಮೈಸೂರು ಪ್ರಾಂತ್ಯದಲ್ಲಿ ಎಲ್ಲಾ ತರದ ಕೃಷಿ ಚಟುವಟಿಕೆಗಳಿಗೂ ಎಮ್ಮೆಯನ್ನೇ ಬಳಸುತ್ತಿದ್ದರು… ಎಮ್ಮೆ ಈ ಜನರ ಹೆಮ್ಮೆ. ದನಗಳು ಆರ್ಯರ ಜಾನುವಾರುಗಳು.
ಆರ್ಯರು ಎಮ್ಮೆಗಳನ್ನು ಕೀಳು ಮಾಡಿ ತಮ್ಮ ದನಗಳನ್ನು ಶ್ರೇಷ್ಟಗೊಳಿಸಿದರು.

ಮಹಿಷ ಮಂಡಲ ಕೇರಳದ ವೈನಾಡು, ತಮಿಳುನಾಡಿನ ನೀಲಗಿರಿ ಪ್ರಾಂತ್ಯವನ್ನು ಒಳಗೊಂಡಿತ್ತು. ನೀಲಗಿರಿಯಲ್ಲಿ ಇಂದಿಗೂ ವಾಸವಾಗಿರುವ ತೋಡ ಎಂಬ ಗಿರಿಜನ ಮಹಿಷನ ವಂಶಸಂಸ್ಥರು ಎನ್ನಲಾಗಿದೆ. ಅವರು ಈಗಲೂ ಮಹಿಷನನ್ನು ಆರಾಧಿಸುತ್ತಾರೆ.
ನೀಲಗಿರಿ, ವೈನಾಡ್ ಜಿಲ್ಲೆಗಳಲ್ಲಿ ಇಂದಿಗೂ ಎಮ್ಮೆಗಳಿಂದಲೇ ಉಳುಮೆ ಮಾಡುತ್ತಾರೆ.

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

ಮಹಿಷ ಮಂಡಲವು ಮೈಸೂರು, ನೀಲಗಿರಿ, ವೈನಾಡು ಇಷ್ಟು ಭೂಪ್ರದೇಶವನ್ನು ಹೊಂದಿತ್ತು. ಇದನ್ನು “ಎರುಮೈನಾಡು” ಎಂದು ಕರೆದಿರುವುದು ಅನೇಕ ಇತಿಹಾಸದ ಸಂಶೋಧನೆಗಳಿಂದ ದೃಢಪಟ್ಟಿದೆ ಮತ್ತು ದಾಖಲಾಗಿದೆ. “ಎರುಮೈ” ಎಂದರೆ ಎಮ್ಮೆ ಎಂದರ್ಥ.

ಆದ್ದರಿಂದ ಮಹಿಷನ ಕುರಿತು ಯಾವುದೇ ಕೀಳರಿಮೆ, ಗೊಂದಲಗಳನ್ನು ನಮ್ಮ ಜನರು ಇಟ್ಟುಕೊಳ್ಳುವ ಅಗತ್ಯವಿಲ್ಲ. ಮಹಿಷ ನಿಶ್ಚಿತವಾಗಿ ದ್ರಾವಿಡ ದೊರೆ, ನಾಗವಂಶದ ರಾಜ ಮತ್ತು ಬೌದ್ದಾನುಯಾಯಿಯಾಗಿದ್ದ ಎಂಬುದಕ್ಕೆ ಅನೇಕ ದಾಖಲೆಗಳು ಲಭ್ಯವಿವೆ.

ಇತ್ತೀಚಗೆ ಗುಲ್ಬರ್ಗದ ಬಳಿ ನಡೆಸಿದ ಐತಿಹಾಸಿಕ ಉತ್ಖನನದಲ್ಲಿ ಮಹಿಷ ನಾಡಿನ ತೋಡರು ಬೌದ್ದವಿಹಾರಗಳಿಗೆ ಹಲವು ಕೊಡುಗೆಗಳನ್ನು ಕೊಟ್ಟಿರುವ ಬೌದ್ಧಶಾಸನಗಳು ದೊರೆತಿವೆ. ಈ ಕುರಿತು ಕಳೆದ ಭಾನುವಾರದ (೩.೧೦.೨೧) ಪ್ರಜಾವಾಣಿಯ ವಾರದ ಪುರವಣಿಯಲ್ಲಿ ಇತಿಹಾಸ ಸಂಶೋಧಕ ಷ.ಶಟರ್ ಅವರು ಬರೆದಿರುವ ಲೇಖನ ಹೆಚ್ಚು ಬೆಳಕು ಚಲ್ಲಿದೆ.

ಹಿಂದೆ ನಮ್ಮ ಸಮಾಜ ಪರಿವರ್ತನ ಪತ್ರಿಕೆಯಲ್ಲಿ ಸಹ ಈ ಕುರಿತು ಅನೇಕ ಲೇಖಕರು ಸರಣಿ ಬರಹಗಳನ್ನು ಬರೆದಿದ್ದಾರೆ. ಮೈಸೂರಿನ ನಮ್ಮ ಲೇಖಕ ಸ್ನೇಹಿತರಾದ ಸಿದ್ದಸ್ವಾಮಿಯವರು “ಮಹಿಷ ಮಂಡಲ” ಎಂಬ ತಮ್ಮ ಸಂಶೋಧಿತ ಕೃತಿಯಲ್ಲಿ ಐತಿಹಾಸಿಕ ವಿಚಾರಗಳೊಡನೆ ವರ್ತಮಾನದ ದಾಖಲೆಗಳನ್ನಿಟ್ಟು ಚರ್ಚಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿಯೇ ನಾವಿಂದು ಎಲ್ಲರೂ ಸೇರಿ ಮಹಿಷ ದಸರ ಆಚರಿಸಿಕೊಂಡು ಚಾರಿತ್ರಿಕ ಅನ್ಯಾಯವನ್ನು ಎತ್ತಿ ಹಿಡಿತುತ್ತಾ ನಮ್ಮ ಅಸ್ಮಿತೆಯನ್ನು ಉಳಿಸಲು ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದ್ದೇವೆ. ಇದರ ಸತ್ಯವು ಗೊತ್ತಿದ್ದೇ ಮನುವಾದಿಗಳು ಬೆಚ್ಚಿದ್ದಾರೆ. ಅವರು ಬೆಚ್ಚಿದ್ದಾರೆ ಎಂದರೆ ವಿಷಯವು ಸ್ಪಷ್ಟವಿದೆ ಎಂದರ್ಥ. ಅವರು ಅದನ್ನು ತಮ್ಮ ಅಧಿಕಾರ ಬಳಸಿ ತಡೆಯಲು ಯತ್ನಿಸುತ್ತಲೇ ಇದ್ದಾರೆ ಎಂದರೆ ಅದು ಸ್ಪಷ್ಟವಾಗಿ ನಮ್ಮ ಸ್ವಾಭೀಮಾನದ ಇತಿಹಾಸ ಎಂಬುದು ಖಚಿತವಾಗುತ್ತದೆ.

ಆದ್ದರಿಂದ ನಮ್ಮೊಳಗೆ ಅವರು ಗೊಂದಲ ಸೃಷ್ಟಿಸಲು ಆರಂಭಿಸಿದ್ದಾರೆ. ನಮ್ಮ ಜನರು ಗೊಂದಲಕ್ಕೊಳಗಾಗಬೇಡಿ. ಸತ್ಯವನ್ನು ಅರಿಯೋಣ. ಸತ್ಯವನ್ನು ಸಾರೋಣ. ಸತ್ಯವನ್ನು ಉಳಿಸೋಣ.

ಬಾಬಾಸಾಹೇಬರ ಬರಹಗಳಲ್ಲೂ ಅಸುರರು, ದಾಸರು, ದಸ್ಯುಗಳ ಕುರಿತ ದಾಖಲೆಗಳಿವೆ. ಮನುವಾದಿಗಳ ಕುತಂತ್ರಕ್ಕೆ ಬಲಿಯಾದ ನಮ್ಮ ವೀರರು ಮತ್ತು ಶೂರರು ಇತಿಹಾಸದಲ್ಲಿ ಅಸುರರೆಂದು, ರಾಕ್ಷಸರೆಂದು ಬಿಂಬಿಸಲ್ಪಟ್ಟಿದ್ದಾರೆ.

ಈ ರೀತಿ ಮಾಡುವ ಮೂಲಕ ನಮ್ಮಿಂದ ನಮ್ಮ ಪೂರ್ವಿಕರನ್ನು ದೂರಮಾಡುವ ಹುನ್ನಾರವೇ ಮನುವಾದಿಗಳದ್ದಾಗಿದೆ. ಆದ್ದರಿಂದಲೇ ನಮ್ಮ ಜನರು ನಮ್ಮ ಪೂರ್ವಿಕರ ಶೌರ್ಯದ ಇತಿಹಾಸ ಮರೆತು ಇದೇ ಮನುವಾದಿಗಳು ಸೃಷ್ಟಿಸಿರುವ ಕಾಲ್ಪನಿಕ ದೇವರುಗಳನ್ನು ನಂಬಿ ಆರಾಧಿಸುತ್ತಾ ಮನುವಾದಿಗಳಿಗೆ ಲಾಭ ಮಾಡುತ್ತಾ ತಮ್ಮ ನೈಜ ಸಂಸ್ಕೃತಿಯನ್ನು ಮರೆತು ಮನುವಾದಿಗಳ ಗುಲಾಮರಾಗಿದ್ದಾರೆ.

ಬಲಿ ಚಕ್ರವರ್ತಿ ಮತ್ತು ನರಕಾಸುರ ಎಂಬ ನಮ್ಮ ಪೂರ್ವಿಕರನ್ನು ಮನುವಾದಿಗಳು ಮೋಸದಿಂದ ಕೊಂದು ರಾಜ್ಯ ಕಬಳಿಸಿ ಅವರನ್ನು ದುಷ್ಟರೆಂದು ಚಿತ್ರಿಸಿ ಪಟಾಕಿ ಸಿಡಿಸಿ ನಮ್ಮಿಂದಲೇ ನಮ್ಮವರ ಸಾವನ್ನು ಸಂಭ್ರಮಿಸುವಂತೆ ಮಾಡಿದ್ದಾರೆ. ಹೀಗೆ ಇತಿಹಾಸದ ಉದ್ದಕ್ಕೂ ನಮ್ಮ ಪರಂಪರೆಯನ್ನು ನಾಶಗೊಳಿಸಿ ನಮ್ಮನ್ನು ದಿಕ್ಕುತಪ್ಪಿಸಿರುವ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನಾವು ಮಾನಸಿಕವಾಗಿ ಬಿಡುಗಡೆ ಹೊಂದಿದಾಗ ಮಾತ್ರವೇ ಕಳೆದುಕೊಂಡಿರು ಅಧಿಕಾರವನ್ನು ಮರಳಿ ಪಡೆಯಬೇಕಿದೆ. ಇದೇ ನಮ್ಮ ಪರಂಪರೆಯಾಗಿದೆ. ಒಂದು ಸಮುದಾಯವನ್ನು ನಾಶ ಪಡಿಸಬೇಕಿದ್ದರೆ ಅದರ ಪರಂಪರೆಯನ್ನು ನಾಶ ಪಡಿಸಬೇಕು ಎಂಬುದು ಮನುವಾದಿಗಳ ಕುತಂತ್ರವಾಗಿದೆ ಎಂದು ಬಾಬಾಸಾಹೇಬರು ಹೇಳುತ್ತಾರೆ. ನಮ್ಮ ಪರಂಪರೆಯನ್ನು ಹುಡುಕಿ ಮರಳಿ ಪಡೆದರೆ ಮಾತ್ರ ಮನುವಾದಿಗಳ ಪರಂಪರೆಯಿಂದ ಹೊರಬಂದರೆ ಮಾತ್ರ ನಮಗೆ ಅಧಿಕಾರವು ದಕ್ಕಲಿದೆ. ಅಧಿಕಾರದಿಂದ ಮಾತ್ರ ನಮ್ಮ ಹಕ್ಕುಗಳು ದೊರೆಯಲಿವೆ. ಇದೆಲ್ಲವೂ ಬೌದ್ದೀಯತೆಯೇ ಆಗಿದೆ ಎಂಬುದನ್ನು ನೆನಪಿಡಿ.

  • ಡಾ.ಕೃಷ್ಣಮೂರ್ತಿ ಚಮರಂ

(ಡಾ.ಕೃಷ್ಣಮೂರ್ತಿ ಚಮರಂರವರು ಸಾಮಾಜಿಕ ಕಾರ್ಯಕರ್ತರು ಮತ್ತು ಬರಹಗಾರರು. ಲೇಖನದಲ್ಲಿನ ಅಭಿಪ್ರಾಯಗಳು ವೈಯಕ್ತಿಕವಾದವು. ಈ ಕುರಿತು ಚರ್ಚೆಗೆ ಆಹ್ವಾನವಿದೆ. ಮಹಿಷಾಸುರ ಸಂಬಂಧಿತ ಲೇಖನಗಳನ್ನು [email protected] ಗೆ ಕಳಿಸಬಹುದು)


ಇದನ್ನೂ ಓದಿ: ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...