Homeಮುಖಪುಟಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮತ್ತು ಕಳೆದ ಎಂಟು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿರುವ ಮಹಿಷ ದಸರ ಕುರಿತು ಮನುವಾದಿಗಳಿಗಿಂತ ಬಹುಜನರೇ ಹೆಚ್ಚು ಆತಂಕಕ್ಕೊಳಗಾಗಿರುವಂತೆ ಕಂಡುಬಂದಿದೆ. ನಮ್ಮ ಅನೇಕ ಹೋರಾಟಗಾರ ಸ್ನೇಹಿತರು ಮತ್ತು ಬುದ್ದಿಜೀವಿ ಬಳಗ ಇದೊಂದು ಪುರಾಣದ ಕತೆ, ನಮ್ಮ ಜನರನ್ನು ದಿಕ್ಕುತಪ್ಪಿಸಲು ಕೆಲವರು ಮಹಿಷನನ್ನು ಐತಿಹಾಸಿಕ ಪುರುಷ ಎಂದು ನಂಬಿಸುತ್ತಿದ್ದಾರೆ. ನಾವು ಬೌದ್ದರಾದರೆ ಸಾಕು. ಅದು ಬಿಟ್ಟು ಈ ಮಹಿಷನ ಕತೆ ಕಟ್ಟಿಕೊಂಡು ಏನಾಗಬೇಕಿದೆ? ಎಂದು ಜಾಲತಾಣದಲ್ಲಿ ವಾದಿಸುತ್ತಿದ್ದಾರೆ. ದಯಮಾಡಿ ಯಾರೂ ಗೊಂದಲಕ್ಕೊಳಗಾಗಬೇಡಿ. ಮಹಿಷಾಸುರ ಖಂಡಿತವಾಗಿ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ.

ಮಹಿಷನಾಡು, ಮಹಿಷೂರು ನಂತರ ಮೈಸೂರು ಆಗಿದೆ. ಮೈಸೂರಲ್ಲಿ ಮಹಿಷಾಸುರನ ಹಲವು ಪ್ರತಿಮೆಗಳಿವೆ. ಈಗಿನ ಚಾಮುಂಡಿ ಬೆಟ್ಟ ಹಿಂದೆ ಮಹಿಷಗಿರಿ ಎಂದು ಪ್ರಚಲಿತದಲ್ಲಿತ್ತು ಅದನ್ನು ಮಹಾಬಲ ಬೆಟ್ಟ ಎಂತಲೂ ಕರೆದಿದ್ದಾರೆ.

ಮಹಿಷ ಎಂದರೆ ಎಮ್ಮೆ. ಮೈಸೂರು ಪ್ರಾಂತ್ಯದಲ್ಲಿ ಎಲ್ಲಾ ತರದ ಕೃಷಿ ಚಟುವಟಿಕೆಗಳಿಗೂ ಎಮ್ಮೆಯನ್ನೇ ಬಳಸುತ್ತಿದ್ದರು… ಎಮ್ಮೆ ಈ ಜನರ ಹೆಮ್ಮೆ. ದನಗಳು ಆರ್ಯರ ಜಾನುವಾರುಗಳು.
ಆರ್ಯರು ಎಮ್ಮೆಗಳನ್ನು ಕೀಳು ಮಾಡಿ ತಮ್ಮ ದನಗಳನ್ನು ಶ್ರೇಷ್ಟಗೊಳಿಸಿದರು.

ಮಹಿಷ ಮಂಡಲ ಕೇರಳದ ವೈನಾಡು, ತಮಿಳುನಾಡಿನ ನೀಲಗಿರಿ ಪ್ರಾಂತ್ಯವನ್ನು ಒಳಗೊಂಡಿತ್ತು. ನೀಲಗಿರಿಯಲ್ಲಿ ಇಂದಿಗೂ ವಾಸವಾಗಿರುವ ತೋಡ ಎಂಬ ಗಿರಿಜನ ಮಹಿಷನ ವಂಶಸಂಸ್ಥರು ಎನ್ನಲಾಗಿದೆ. ಅವರು ಈಗಲೂ ಮಹಿಷನನ್ನು ಆರಾಧಿಸುತ್ತಾರೆ.
ನೀಲಗಿರಿ, ವೈನಾಡ್ ಜಿಲ್ಲೆಗಳಲ್ಲಿ ಇಂದಿಗೂ ಎಮ್ಮೆಗಳಿಂದಲೇ ಉಳುಮೆ ಮಾಡುತ್ತಾರೆ.

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

ಮಹಿಷ ಮಂಡಲವು ಮೈಸೂರು, ನೀಲಗಿರಿ, ವೈನಾಡು ಇಷ್ಟು ಭೂಪ್ರದೇಶವನ್ನು ಹೊಂದಿತ್ತು. ಇದನ್ನು “ಎರುಮೈನಾಡು” ಎಂದು ಕರೆದಿರುವುದು ಅನೇಕ ಇತಿಹಾಸದ ಸಂಶೋಧನೆಗಳಿಂದ ದೃಢಪಟ್ಟಿದೆ ಮತ್ತು ದಾಖಲಾಗಿದೆ. “ಎರುಮೈ” ಎಂದರೆ ಎಮ್ಮೆ ಎಂದರ್ಥ.

ಆದ್ದರಿಂದ ಮಹಿಷನ ಕುರಿತು ಯಾವುದೇ ಕೀಳರಿಮೆ, ಗೊಂದಲಗಳನ್ನು ನಮ್ಮ ಜನರು ಇಟ್ಟುಕೊಳ್ಳುವ ಅಗತ್ಯವಿಲ್ಲ. ಮಹಿಷ ನಿಶ್ಚಿತವಾಗಿ ದ್ರಾವಿಡ ದೊರೆ, ನಾಗವಂಶದ ರಾಜ ಮತ್ತು ಬೌದ್ದಾನುಯಾಯಿಯಾಗಿದ್ದ ಎಂಬುದಕ್ಕೆ ಅನೇಕ ದಾಖಲೆಗಳು ಲಭ್ಯವಿವೆ.

ಇತ್ತೀಚಗೆ ಗುಲ್ಬರ್ಗದ ಬಳಿ ನಡೆಸಿದ ಐತಿಹಾಸಿಕ ಉತ್ಖನನದಲ್ಲಿ ಮಹಿಷ ನಾಡಿನ ತೋಡರು ಬೌದ್ದವಿಹಾರಗಳಿಗೆ ಹಲವು ಕೊಡುಗೆಗಳನ್ನು ಕೊಟ್ಟಿರುವ ಬೌದ್ಧಶಾಸನಗಳು ದೊರೆತಿವೆ. ಈ ಕುರಿತು ಕಳೆದ ಭಾನುವಾರದ (೩.೧೦.೨೧) ಪ್ರಜಾವಾಣಿಯ ವಾರದ ಪುರವಣಿಯಲ್ಲಿ ಇತಿಹಾಸ ಸಂಶೋಧಕ ಷ.ಶಟರ್ ಅವರು ಬರೆದಿರುವ ಲೇಖನ ಹೆಚ್ಚು ಬೆಳಕು ಚಲ್ಲಿದೆ.

ಹಿಂದೆ ನಮ್ಮ ಸಮಾಜ ಪರಿವರ್ತನ ಪತ್ರಿಕೆಯಲ್ಲಿ ಸಹ ಈ ಕುರಿತು ಅನೇಕ ಲೇಖಕರು ಸರಣಿ ಬರಹಗಳನ್ನು ಬರೆದಿದ್ದಾರೆ. ಮೈಸೂರಿನ ನಮ್ಮ ಲೇಖಕ ಸ್ನೇಹಿತರಾದ ಸಿದ್ದಸ್ವಾಮಿಯವರು “ಮಹಿಷ ಮಂಡಲ” ಎಂಬ ತಮ್ಮ ಸಂಶೋಧಿತ ಕೃತಿಯಲ್ಲಿ ಐತಿಹಾಸಿಕ ವಿಚಾರಗಳೊಡನೆ ವರ್ತಮಾನದ ದಾಖಲೆಗಳನ್ನಿಟ್ಟು ಚರ್ಚಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿಯೇ ನಾವಿಂದು ಎಲ್ಲರೂ ಸೇರಿ ಮಹಿಷ ದಸರ ಆಚರಿಸಿಕೊಂಡು ಚಾರಿತ್ರಿಕ ಅನ್ಯಾಯವನ್ನು ಎತ್ತಿ ಹಿಡಿತುತ್ತಾ ನಮ್ಮ ಅಸ್ಮಿತೆಯನ್ನು ಉಳಿಸಲು ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದ್ದೇವೆ. ಇದರ ಸತ್ಯವು ಗೊತ್ತಿದ್ದೇ ಮನುವಾದಿಗಳು ಬೆಚ್ಚಿದ್ದಾರೆ. ಅವರು ಬೆಚ್ಚಿದ್ದಾರೆ ಎಂದರೆ ವಿಷಯವು ಸ್ಪಷ್ಟವಿದೆ ಎಂದರ್ಥ. ಅವರು ಅದನ್ನು ತಮ್ಮ ಅಧಿಕಾರ ಬಳಸಿ ತಡೆಯಲು ಯತ್ನಿಸುತ್ತಲೇ ಇದ್ದಾರೆ ಎಂದರೆ ಅದು ಸ್ಪಷ್ಟವಾಗಿ ನಮ್ಮ ಸ್ವಾಭೀಮಾನದ ಇತಿಹಾಸ ಎಂಬುದು ಖಚಿತವಾಗುತ್ತದೆ.

ಆದ್ದರಿಂದ ನಮ್ಮೊಳಗೆ ಅವರು ಗೊಂದಲ ಸೃಷ್ಟಿಸಲು ಆರಂಭಿಸಿದ್ದಾರೆ. ನಮ್ಮ ಜನರು ಗೊಂದಲಕ್ಕೊಳಗಾಗಬೇಡಿ. ಸತ್ಯವನ್ನು ಅರಿಯೋಣ. ಸತ್ಯವನ್ನು ಸಾರೋಣ. ಸತ್ಯವನ್ನು ಉಳಿಸೋಣ.

ಬಾಬಾಸಾಹೇಬರ ಬರಹಗಳಲ್ಲೂ ಅಸುರರು, ದಾಸರು, ದಸ್ಯುಗಳ ಕುರಿತ ದಾಖಲೆಗಳಿವೆ. ಮನುವಾದಿಗಳ ಕುತಂತ್ರಕ್ಕೆ ಬಲಿಯಾದ ನಮ್ಮ ವೀರರು ಮತ್ತು ಶೂರರು ಇತಿಹಾಸದಲ್ಲಿ ಅಸುರರೆಂದು, ರಾಕ್ಷಸರೆಂದು ಬಿಂಬಿಸಲ್ಪಟ್ಟಿದ್ದಾರೆ.

ಈ ರೀತಿ ಮಾಡುವ ಮೂಲಕ ನಮ್ಮಿಂದ ನಮ್ಮ ಪೂರ್ವಿಕರನ್ನು ದೂರಮಾಡುವ ಹುನ್ನಾರವೇ ಮನುವಾದಿಗಳದ್ದಾಗಿದೆ. ಆದ್ದರಿಂದಲೇ ನಮ್ಮ ಜನರು ನಮ್ಮ ಪೂರ್ವಿಕರ ಶೌರ್ಯದ ಇತಿಹಾಸ ಮರೆತು ಇದೇ ಮನುವಾದಿಗಳು ಸೃಷ್ಟಿಸಿರುವ ಕಾಲ್ಪನಿಕ ದೇವರುಗಳನ್ನು ನಂಬಿ ಆರಾಧಿಸುತ್ತಾ ಮನುವಾದಿಗಳಿಗೆ ಲಾಭ ಮಾಡುತ್ತಾ ತಮ್ಮ ನೈಜ ಸಂಸ್ಕೃತಿಯನ್ನು ಮರೆತು ಮನುವಾದಿಗಳ ಗುಲಾಮರಾಗಿದ್ದಾರೆ.

ಬಲಿ ಚಕ್ರವರ್ತಿ ಮತ್ತು ನರಕಾಸುರ ಎಂಬ ನಮ್ಮ ಪೂರ್ವಿಕರನ್ನು ಮನುವಾದಿಗಳು ಮೋಸದಿಂದ ಕೊಂದು ರಾಜ್ಯ ಕಬಳಿಸಿ ಅವರನ್ನು ದುಷ್ಟರೆಂದು ಚಿತ್ರಿಸಿ ಪಟಾಕಿ ಸಿಡಿಸಿ ನಮ್ಮಿಂದಲೇ ನಮ್ಮವರ ಸಾವನ್ನು ಸಂಭ್ರಮಿಸುವಂತೆ ಮಾಡಿದ್ದಾರೆ. ಹೀಗೆ ಇತಿಹಾಸದ ಉದ್ದಕ್ಕೂ ನಮ್ಮ ಪರಂಪರೆಯನ್ನು ನಾಶಗೊಳಿಸಿ ನಮ್ಮನ್ನು ದಿಕ್ಕುತಪ್ಪಿಸಿರುವ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನಾವು ಮಾನಸಿಕವಾಗಿ ಬಿಡುಗಡೆ ಹೊಂದಿದಾಗ ಮಾತ್ರವೇ ಕಳೆದುಕೊಂಡಿರು ಅಧಿಕಾರವನ್ನು ಮರಳಿ ಪಡೆಯಬೇಕಿದೆ. ಇದೇ ನಮ್ಮ ಪರಂಪರೆಯಾಗಿದೆ. ಒಂದು ಸಮುದಾಯವನ್ನು ನಾಶ ಪಡಿಸಬೇಕಿದ್ದರೆ ಅದರ ಪರಂಪರೆಯನ್ನು ನಾಶ ಪಡಿಸಬೇಕು ಎಂಬುದು ಮನುವಾದಿಗಳ ಕುತಂತ್ರವಾಗಿದೆ ಎಂದು ಬಾಬಾಸಾಹೇಬರು ಹೇಳುತ್ತಾರೆ. ನಮ್ಮ ಪರಂಪರೆಯನ್ನು ಹುಡುಕಿ ಮರಳಿ ಪಡೆದರೆ ಮಾತ್ರ ಮನುವಾದಿಗಳ ಪರಂಪರೆಯಿಂದ ಹೊರಬಂದರೆ ಮಾತ್ರ ನಮಗೆ ಅಧಿಕಾರವು ದಕ್ಕಲಿದೆ. ಅಧಿಕಾರದಿಂದ ಮಾತ್ರ ನಮ್ಮ ಹಕ್ಕುಗಳು ದೊರೆಯಲಿವೆ. ಇದೆಲ್ಲವೂ ಬೌದ್ದೀಯತೆಯೇ ಆಗಿದೆ ಎಂಬುದನ್ನು ನೆನಪಿಡಿ.

  • ಡಾ.ಕೃಷ್ಣಮೂರ್ತಿ ಚಮರಂ

(ಡಾ.ಕೃಷ್ಣಮೂರ್ತಿ ಚಮರಂರವರು ಸಾಮಾಜಿಕ ಕಾರ್ಯಕರ್ತರು ಮತ್ತು ಬರಹಗಾರರು. ಲೇಖನದಲ್ಲಿನ ಅಭಿಪ್ರಾಯಗಳು ವೈಯಕ್ತಿಕವಾದವು. ಈ ಕುರಿತು ಚರ್ಚೆಗೆ ಆಹ್ವಾನವಿದೆ. ಮಹಿಷಾಸುರ ಸಂಬಂಧಿತ ಲೇಖನಗಳನ್ನು [email protected] ಗೆ ಕಳಿಸಬಹುದು)


ಇದನ್ನೂ ಓದಿ: ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....