Homeಮುಖಪುಟಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮತ್ತು ಕಳೆದ ಎಂಟು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿರುವ ಮಹಿಷ ದಸರ ಕುರಿತು ಮನುವಾದಿಗಳಿಗಿಂತ ಬಹುಜನರೇ ಹೆಚ್ಚು ಆತಂಕಕ್ಕೊಳಗಾಗಿರುವಂತೆ ಕಂಡುಬಂದಿದೆ. ನಮ್ಮ ಅನೇಕ ಹೋರಾಟಗಾರ ಸ್ನೇಹಿತರು ಮತ್ತು ಬುದ್ದಿಜೀವಿ ಬಳಗ ಇದೊಂದು ಪುರಾಣದ ಕತೆ, ನಮ್ಮ ಜನರನ್ನು ದಿಕ್ಕುತಪ್ಪಿಸಲು ಕೆಲವರು ಮಹಿಷನನ್ನು ಐತಿಹಾಸಿಕ ಪುರುಷ ಎಂದು ನಂಬಿಸುತ್ತಿದ್ದಾರೆ. ನಾವು ಬೌದ್ದರಾದರೆ ಸಾಕು. ಅದು ಬಿಟ್ಟು ಈ ಮಹಿಷನ ಕತೆ ಕಟ್ಟಿಕೊಂಡು ಏನಾಗಬೇಕಿದೆ? ಎಂದು ಜಾಲತಾಣದಲ್ಲಿ ವಾದಿಸುತ್ತಿದ್ದಾರೆ. ದಯಮಾಡಿ ಯಾರೂ ಗೊಂದಲಕ್ಕೊಳಗಾಗಬೇಡಿ. ಮಹಿಷಾಸುರ ಖಂಡಿತವಾಗಿ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ.

ಮಹಿಷನಾಡು, ಮಹಿಷೂರು ನಂತರ ಮೈಸೂರು ಆಗಿದೆ. ಮೈಸೂರಲ್ಲಿ ಮಹಿಷಾಸುರನ ಹಲವು ಪ್ರತಿಮೆಗಳಿವೆ. ಈಗಿನ ಚಾಮುಂಡಿ ಬೆಟ್ಟ ಹಿಂದೆ ಮಹಿಷಗಿರಿ ಎಂದು ಪ್ರಚಲಿತದಲ್ಲಿತ್ತು ಅದನ್ನು ಮಹಾಬಲ ಬೆಟ್ಟ ಎಂತಲೂ ಕರೆದಿದ್ದಾರೆ.

ಮಹಿಷ ಎಂದರೆ ಎಮ್ಮೆ. ಮೈಸೂರು ಪ್ರಾಂತ್ಯದಲ್ಲಿ ಎಲ್ಲಾ ತರದ ಕೃಷಿ ಚಟುವಟಿಕೆಗಳಿಗೂ ಎಮ್ಮೆಯನ್ನೇ ಬಳಸುತ್ತಿದ್ದರು… ಎಮ್ಮೆ ಈ ಜನರ ಹೆಮ್ಮೆ. ದನಗಳು ಆರ್ಯರ ಜಾನುವಾರುಗಳು.
ಆರ್ಯರು ಎಮ್ಮೆಗಳನ್ನು ಕೀಳು ಮಾಡಿ ತಮ್ಮ ದನಗಳನ್ನು ಶ್ರೇಷ್ಟಗೊಳಿಸಿದರು.

ಮಹಿಷ ಮಂಡಲ ಕೇರಳದ ವೈನಾಡು, ತಮಿಳುನಾಡಿನ ನೀಲಗಿರಿ ಪ್ರಾಂತ್ಯವನ್ನು ಒಳಗೊಂಡಿತ್ತು. ನೀಲಗಿರಿಯಲ್ಲಿ ಇಂದಿಗೂ ವಾಸವಾಗಿರುವ ತೋಡ ಎಂಬ ಗಿರಿಜನ ಮಹಿಷನ ವಂಶಸಂಸ್ಥರು ಎನ್ನಲಾಗಿದೆ. ಅವರು ಈಗಲೂ ಮಹಿಷನನ್ನು ಆರಾಧಿಸುತ್ತಾರೆ.
ನೀಲಗಿರಿ, ವೈನಾಡ್ ಜಿಲ್ಲೆಗಳಲ್ಲಿ ಇಂದಿಗೂ ಎಮ್ಮೆಗಳಿಂದಲೇ ಉಳುಮೆ ಮಾಡುತ್ತಾರೆ.

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

ಮಹಿಷ ಮಂಡಲವು ಮೈಸೂರು, ನೀಲಗಿರಿ, ವೈನಾಡು ಇಷ್ಟು ಭೂಪ್ರದೇಶವನ್ನು ಹೊಂದಿತ್ತು. ಇದನ್ನು “ಎರುಮೈನಾಡು” ಎಂದು ಕರೆದಿರುವುದು ಅನೇಕ ಇತಿಹಾಸದ ಸಂಶೋಧನೆಗಳಿಂದ ದೃಢಪಟ್ಟಿದೆ ಮತ್ತು ದಾಖಲಾಗಿದೆ. “ಎರುಮೈ” ಎಂದರೆ ಎಮ್ಮೆ ಎಂದರ್ಥ.

ಆದ್ದರಿಂದ ಮಹಿಷನ ಕುರಿತು ಯಾವುದೇ ಕೀಳರಿಮೆ, ಗೊಂದಲಗಳನ್ನು ನಮ್ಮ ಜನರು ಇಟ್ಟುಕೊಳ್ಳುವ ಅಗತ್ಯವಿಲ್ಲ. ಮಹಿಷ ನಿಶ್ಚಿತವಾಗಿ ದ್ರಾವಿಡ ದೊರೆ, ನಾಗವಂಶದ ರಾಜ ಮತ್ತು ಬೌದ್ದಾನುಯಾಯಿಯಾಗಿದ್ದ ಎಂಬುದಕ್ಕೆ ಅನೇಕ ದಾಖಲೆಗಳು ಲಭ್ಯವಿವೆ.

ಇತ್ತೀಚಗೆ ಗುಲ್ಬರ್ಗದ ಬಳಿ ನಡೆಸಿದ ಐತಿಹಾಸಿಕ ಉತ್ಖನನದಲ್ಲಿ ಮಹಿಷ ನಾಡಿನ ತೋಡರು ಬೌದ್ದವಿಹಾರಗಳಿಗೆ ಹಲವು ಕೊಡುಗೆಗಳನ್ನು ಕೊಟ್ಟಿರುವ ಬೌದ್ಧಶಾಸನಗಳು ದೊರೆತಿವೆ. ಈ ಕುರಿತು ಕಳೆದ ಭಾನುವಾರದ (೩.೧೦.೨೧) ಪ್ರಜಾವಾಣಿಯ ವಾರದ ಪುರವಣಿಯಲ್ಲಿ ಇತಿಹಾಸ ಸಂಶೋಧಕ ಷ.ಶಟರ್ ಅವರು ಬರೆದಿರುವ ಲೇಖನ ಹೆಚ್ಚು ಬೆಳಕು ಚಲ್ಲಿದೆ.

ಹಿಂದೆ ನಮ್ಮ ಸಮಾಜ ಪರಿವರ್ತನ ಪತ್ರಿಕೆಯಲ್ಲಿ ಸಹ ಈ ಕುರಿತು ಅನೇಕ ಲೇಖಕರು ಸರಣಿ ಬರಹಗಳನ್ನು ಬರೆದಿದ್ದಾರೆ. ಮೈಸೂರಿನ ನಮ್ಮ ಲೇಖಕ ಸ್ನೇಹಿತರಾದ ಸಿದ್ದಸ್ವಾಮಿಯವರು “ಮಹಿಷ ಮಂಡಲ” ಎಂಬ ತಮ್ಮ ಸಂಶೋಧಿತ ಕೃತಿಯಲ್ಲಿ ಐತಿಹಾಸಿಕ ವಿಚಾರಗಳೊಡನೆ ವರ್ತಮಾನದ ದಾಖಲೆಗಳನ್ನಿಟ್ಟು ಚರ್ಚಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿಯೇ ನಾವಿಂದು ಎಲ್ಲರೂ ಸೇರಿ ಮಹಿಷ ದಸರ ಆಚರಿಸಿಕೊಂಡು ಚಾರಿತ್ರಿಕ ಅನ್ಯಾಯವನ್ನು ಎತ್ತಿ ಹಿಡಿತುತ್ತಾ ನಮ್ಮ ಅಸ್ಮಿತೆಯನ್ನು ಉಳಿಸಲು ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದ್ದೇವೆ. ಇದರ ಸತ್ಯವು ಗೊತ್ತಿದ್ದೇ ಮನುವಾದಿಗಳು ಬೆಚ್ಚಿದ್ದಾರೆ. ಅವರು ಬೆಚ್ಚಿದ್ದಾರೆ ಎಂದರೆ ವಿಷಯವು ಸ್ಪಷ್ಟವಿದೆ ಎಂದರ್ಥ. ಅವರು ಅದನ್ನು ತಮ್ಮ ಅಧಿಕಾರ ಬಳಸಿ ತಡೆಯಲು ಯತ್ನಿಸುತ್ತಲೇ ಇದ್ದಾರೆ ಎಂದರೆ ಅದು ಸ್ಪಷ್ಟವಾಗಿ ನಮ್ಮ ಸ್ವಾಭೀಮಾನದ ಇತಿಹಾಸ ಎಂಬುದು ಖಚಿತವಾಗುತ್ತದೆ.

ಆದ್ದರಿಂದ ನಮ್ಮೊಳಗೆ ಅವರು ಗೊಂದಲ ಸೃಷ್ಟಿಸಲು ಆರಂಭಿಸಿದ್ದಾರೆ. ನಮ್ಮ ಜನರು ಗೊಂದಲಕ್ಕೊಳಗಾಗಬೇಡಿ. ಸತ್ಯವನ್ನು ಅರಿಯೋಣ. ಸತ್ಯವನ್ನು ಸಾರೋಣ. ಸತ್ಯವನ್ನು ಉಳಿಸೋಣ.

ಬಾಬಾಸಾಹೇಬರ ಬರಹಗಳಲ್ಲೂ ಅಸುರರು, ದಾಸರು, ದಸ್ಯುಗಳ ಕುರಿತ ದಾಖಲೆಗಳಿವೆ. ಮನುವಾದಿಗಳ ಕುತಂತ್ರಕ್ಕೆ ಬಲಿಯಾದ ನಮ್ಮ ವೀರರು ಮತ್ತು ಶೂರರು ಇತಿಹಾಸದಲ್ಲಿ ಅಸುರರೆಂದು, ರಾಕ್ಷಸರೆಂದು ಬಿಂಬಿಸಲ್ಪಟ್ಟಿದ್ದಾರೆ.

ಈ ರೀತಿ ಮಾಡುವ ಮೂಲಕ ನಮ್ಮಿಂದ ನಮ್ಮ ಪೂರ್ವಿಕರನ್ನು ದೂರಮಾಡುವ ಹುನ್ನಾರವೇ ಮನುವಾದಿಗಳದ್ದಾಗಿದೆ. ಆದ್ದರಿಂದಲೇ ನಮ್ಮ ಜನರು ನಮ್ಮ ಪೂರ್ವಿಕರ ಶೌರ್ಯದ ಇತಿಹಾಸ ಮರೆತು ಇದೇ ಮನುವಾದಿಗಳು ಸೃಷ್ಟಿಸಿರುವ ಕಾಲ್ಪನಿಕ ದೇವರುಗಳನ್ನು ನಂಬಿ ಆರಾಧಿಸುತ್ತಾ ಮನುವಾದಿಗಳಿಗೆ ಲಾಭ ಮಾಡುತ್ತಾ ತಮ್ಮ ನೈಜ ಸಂಸ್ಕೃತಿಯನ್ನು ಮರೆತು ಮನುವಾದಿಗಳ ಗುಲಾಮರಾಗಿದ್ದಾರೆ.

ಬಲಿ ಚಕ್ರವರ್ತಿ ಮತ್ತು ನರಕಾಸುರ ಎಂಬ ನಮ್ಮ ಪೂರ್ವಿಕರನ್ನು ಮನುವಾದಿಗಳು ಮೋಸದಿಂದ ಕೊಂದು ರಾಜ್ಯ ಕಬಳಿಸಿ ಅವರನ್ನು ದುಷ್ಟರೆಂದು ಚಿತ್ರಿಸಿ ಪಟಾಕಿ ಸಿಡಿಸಿ ನಮ್ಮಿಂದಲೇ ನಮ್ಮವರ ಸಾವನ್ನು ಸಂಭ್ರಮಿಸುವಂತೆ ಮಾಡಿದ್ದಾರೆ. ಹೀಗೆ ಇತಿಹಾಸದ ಉದ್ದಕ್ಕೂ ನಮ್ಮ ಪರಂಪರೆಯನ್ನು ನಾಶಗೊಳಿಸಿ ನಮ್ಮನ್ನು ದಿಕ್ಕುತಪ್ಪಿಸಿರುವ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನಾವು ಮಾನಸಿಕವಾಗಿ ಬಿಡುಗಡೆ ಹೊಂದಿದಾಗ ಮಾತ್ರವೇ ಕಳೆದುಕೊಂಡಿರು ಅಧಿಕಾರವನ್ನು ಮರಳಿ ಪಡೆಯಬೇಕಿದೆ. ಇದೇ ನಮ್ಮ ಪರಂಪರೆಯಾಗಿದೆ. ಒಂದು ಸಮುದಾಯವನ್ನು ನಾಶ ಪಡಿಸಬೇಕಿದ್ದರೆ ಅದರ ಪರಂಪರೆಯನ್ನು ನಾಶ ಪಡಿಸಬೇಕು ಎಂಬುದು ಮನುವಾದಿಗಳ ಕುತಂತ್ರವಾಗಿದೆ ಎಂದು ಬಾಬಾಸಾಹೇಬರು ಹೇಳುತ್ತಾರೆ. ನಮ್ಮ ಪರಂಪರೆಯನ್ನು ಹುಡುಕಿ ಮರಳಿ ಪಡೆದರೆ ಮಾತ್ರ ಮನುವಾದಿಗಳ ಪರಂಪರೆಯಿಂದ ಹೊರಬಂದರೆ ಮಾತ್ರ ನಮಗೆ ಅಧಿಕಾರವು ದಕ್ಕಲಿದೆ. ಅಧಿಕಾರದಿಂದ ಮಾತ್ರ ನಮ್ಮ ಹಕ್ಕುಗಳು ದೊರೆಯಲಿವೆ. ಇದೆಲ್ಲವೂ ಬೌದ್ದೀಯತೆಯೇ ಆಗಿದೆ ಎಂಬುದನ್ನು ನೆನಪಿಡಿ.

  • ಡಾ.ಕೃಷ್ಣಮೂರ್ತಿ ಚಮರಂ

(ಡಾ.ಕೃಷ್ಣಮೂರ್ತಿ ಚಮರಂರವರು ಸಾಮಾಜಿಕ ಕಾರ್ಯಕರ್ತರು ಮತ್ತು ಬರಹಗಾರರು. ಲೇಖನದಲ್ಲಿನ ಅಭಿಪ್ರಾಯಗಳು ವೈಯಕ್ತಿಕವಾದವು. ಈ ಕುರಿತು ಚರ್ಚೆಗೆ ಆಹ್ವಾನವಿದೆ. ಮಹಿಷಾಸುರ ಸಂಬಂಧಿತ ಲೇಖನಗಳನ್ನು [email protected] ಗೆ ಕಳಿಸಬಹುದು)


ಇದನ್ನೂ ಓದಿ: ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...