Homeಮುಖಪುಟಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮತ್ತು ಕಳೆದ ಎಂಟು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿರುವ ಮಹಿಷ ದಸರ ಕುರಿತು ಮನುವಾದಿಗಳಿಗಿಂತ ಬಹುಜನರೇ ಹೆಚ್ಚು ಆತಂಕಕ್ಕೊಳಗಾಗಿರುವಂತೆ ಕಂಡುಬಂದಿದೆ. ನಮ್ಮ ಅನೇಕ ಹೋರಾಟಗಾರ ಸ್ನೇಹಿತರು ಮತ್ತು ಬುದ್ದಿಜೀವಿ ಬಳಗ ಇದೊಂದು ಪುರಾಣದ ಕತೆ, ನಮ್ಮ ಜನರನ್ನು ದಿಕ್ಕುತಪ್ಪಿಸಲು ಕೆಲವರು ಮಹಿಷನನ್ನು ಐತಿಹಾಸಿಕ ಪುರುಷ ಎಂದು ನಂಬಿಸುತ್ತಿದ್ದಾರೆ. ನಾವು ಬೌದ್ದರಾದರೆ ಸಾಕು. ಅದು ಬಿಟ್ಟು ಈ ಮಹಿಷನ ಕತೆ ಕಟ್ಟಿಕೊಂಡು ಏನಾಗಬೇಕಿದೆ? ಎಂದು ಜಾಲತಾಣದಲ್ಲಿ ವಾದಿಸುತ್ತಿದ್ದಾರೆ. ದಯಮಾಡಿ ಯಾರೂ ಗೊಂದಲಕ್ಕೊಳಗಾಗಬೇಡಿ. ಮಹಿಷಾಸುರ ಖಂಡಿತವಾಗಿ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ.

ಮಹಿಷನಾಡು, ಮಹಿಷೂರು ನಂತರ ಮೈಸೂರು ಆಗಿದೆ. ಮೈಸೂರಲ್ಲಿ ಮಹಿಷಾಸುರನ ಹಲವು ಪ್ರತಿಮೆಗಳಿವೆ. ಈಗಿನ ಚಾಮುಂಡಿ ಬೆಟ್ಟ ಹಿಂದೆ ಮಹಿಷಗಿರಿ ಎಂದು ಪ್ರಚಲಿತದಲ್ಲಿತ್ತು ಅದನ್ನು ಮಹಾಬಲ ಬೆಟ್ಟ ಎಂತಲೂ ಕರೆದಿದ್ದಾರೆ.

ಮಹಿಷ ಎಂದರೆ ಎಮ್ಮೆ. ಮೈಸೂರು ಪ್ರಾಂತ್ಯದಲ್ಲಿ ಎಲ್ಲಾ ತರದ ಕೃಷಿ ಚಟುವಟಿಕೆಗಳಿಗೂ ಎಮ್ಮೆಯನ್ನೇ ಬಳಸುತ್ತಿದ್ದರು… ಎಮ್ಮೆ ಈ ಜನರ ಹೆಮ್ಮೆ. ದನಗಳು ಆರ್ಯರ ಜಾನುವಾರುಗಳು.
ಆರ್ಯರು ಎಮ್ಮೆಗಳನ್ನು ಕೀಳು ಮಾಡಿ ತಮ್ಮ ದನಗಳನ್ನು ಶ್ರೇಷ್ಟಗೊಳಿಸಿದರು.

ಮಹಿಷ ಮಂಡಲ ಕೇರಳದ ವೈನಾಡು, ತಮಿಳುನಾಡಿನ ನೀಲಗಿರಿ ಪ್ರಾಂತ್ಯವನ್ನು ಒಳಗೊಂಡಿತ್ತು. ನೀಲಗಿರಿಯಲ್ಲಿ ಇಂದಿಗೂ ವಾಸವಾಗಿರುವ ತೋಡ ಎಂಬ ಗಿರಿಜನ ಮಹಿಷನ ವಂಶಸಂಸ್ಥರು ಎನ್ನಲಾಗಿದೆ. ಅವರು ಈಗಲೂ ಮಹಿಷನನ್ನು ಆರಾಧಿಸುತ್ತಾರೆ.
ನೀಲಗಿರಿ, ವೈನಾಡ್ ಜಿಲ್ಲೆಗಳಲ್ಲಿ ಇಂದಿಗೂ ಎಮ್ಮೆಗಳಿಂದಲೇ ಉಳುಮೆ ಮಾಡುತ್ತಾರೆ.

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

ಮಹಿಷ ಮಂಡಲವು ಮೈಸೂರು, ನೀಲಗಿರಿ, ವೈನಾಡು ಇಷ್ಟು ಭೂಪ್ರದೇಶವನ್ನು ಹೊಂದಿತ್ತು. ಇದನ್ನು “ಎರುಮೈನಾಡು” ಎಂದು ಕರೆದಿರುವುದು ಅನೇಕ ಇತಿಹಾಸದ ಸಂಶೋಧನೆಗಳಿಂದ ದೃಢಪಟ್ಟಿದೆ ಮತ್ತು ದಾಖಲಾಗಿದೆ. “ಎರುಮೈ” ಎಂದರೆ ಎಮ್ಮೆ ಎಂದರ್ಥ.

ಆದ್ದರಿಂದ ಮಹಿಷನ ಕುರಿತು ಯಾವುದೇ ಕೀಳರಿಮೆ, ಗೊಂದಲಗಳನ್ನು ನಮ್ಮ ಜನರು ಇಟ್ಟುಕೊಳ್ಳುವ ಅಗತ್ಯವಿಲ್ಲ. ಮಹಿಷ ನಿಶ್ಚಿತವಾಗಿ ದ್ರಾವಿಡ ದೊರೆ, ನಾಗವಂಶದ ರಾಜ ಮತ್ತು ಬೌದ್ದಾನುಯಾಯಿಯಾಗಿದ್ದ ಎಂಬುದಕ್ಕೆ ಅನೇಕ ದಾಖಲೆಗಳು ಲಭ್ಯವಿವೆ.

ಇತ್ತೀಚಗೆ ಗುಲ್ಬರ್ಗದ ಬಳಿ ನಡೆಸಿದ ಐತಿಹಾಸಿಕ ಉತ್ಖನನದಲ್ಲಿ ಮಹಿಷ ನಾಡಿನ ತೋಡರು ಬೌದ್ದವಿಹಾರಗಳಿಗೆ ಹಲವು ಕೊಡುಗೆಗಳನ್ನು ಕೊಟ್ಟಿರುವ ಬೌದ್ಧಶಾಸನಗಳು ದೊರೆತಿವೆ. ಈ ಕುರಿತು ಕಳೆದ ಭಾನುವಾರದ (೩.೧೦.೨೧) ಪ್ರಜಾವಾಣಿಯ ವಾರದ ಪುರವಣಿಯಲ್ಲಿ ಇತಿಹಾಸ ಸಂಶೋಧಕ ಷ.ಶಟರ್ ಅವರು ಬರೆದಿರುವ ಲೇಖನ ಹೆಚ್ಚು ಬೆಳಕು ಚಲ್ಲಿದೆ.

ಹಿಂದೆ ನಮ್ಮ ಸಮಾಜ ಪರಿವರ್ತನ ಪತ್ರಿಕೆಯಲ್ಲಿ ಸಹ ಈ ಕುರಿತು ಅನೇಕ ಲೇಖಕರು ಸರಣಿ ಬರಹಗಳನ್ನು ಬರೆದಿದ್ದಾರೆ. ಮೈಸೂರಿನ ನಮ್ಮ ಲೇಖಕ ಸ್ನೇಹಿತರಾದ ಸಿದ್ದಸ್ವಾಮಿಯವರು “ಮಹಿಷ ಮಂಡಲ” ಎಂಬ ತಮ್ಮ ಸಂಶೋಧಿತ ಕೃತಿಯಲ್ಲಿ ಐತಿಹಾಸಿಕ ವಿಚಾರಗಳೊಡನೆ ವರ್ತಮಾನದ ದಾಖಲೆಗಳನ್ನಿಟ್ಟು ಚರ್ಚಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿಯೇ ನಾವಿಂದು ಎಲ್ಲರೂ ಸೇರಿ ಮಹಿಷ ದಸರ ಆಚರಿಸಿಕೊಂಡು ಚಾರಿತ್ರಿಕ ಅನ್ಯಾಯವನ್ನು ಎತ್ತಿ ಹಿಡಿತುತ್ತಾ ನಮ್ಮ ಅಸ್ಮಿತೆಯನ್ನು ಉಳಿಸಲು ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದ್ದೇವೆ. ಇದರ ಸತ್ಯವು ಗೊತ್ತಿದ್ದೇ ಮನುವಾದಿಗಳು ಬೆಚ್ಚಿದ್ದಾರೆ. ಅವರು ಬೆಚ್ಚಿದ್ದಾರೆ ಎಂದರೆ ವಿಷಯವು ಸ್ಪಷ್ಟವಿದೆ ಎಂದರ್ಥ. ಅವರು ಅದನ್ನು ತಮ್ಮ ಅಧಿಕಾರ ಬಳಸಿ ತಡೆಯಲು ಯತ್ನಿಸುತ್ತಲೇ ಇದ್ದಾರೆ ಎಂದರೆ ಅದು ಸ್ಪಷ್ಟವಾಗಿ ನಮ್ಮ ಸ್ವಾಭೀಮಾನದ ಇತಿಹಾಸ ಎಂಬುದು ಖಚಿತವಾಗುತ್ತದೆ.

ಆದ್ದರಿಂದ ನಮ್ಮೊಳಗೆ ಅವರು ಗೊಂದಲ ಸೃಷ್ಟಿಸಲು ಆರಂಭಿಸಿದ್ದಾರೆ. ನಮ್ಮ ಜನರು ಗೊಂದಲಕ್ಕೊಳಗಾಗಬೇಡಿ. ಸತ್ಯವನ್ನು ಅರಿಯೋಣ. ಸತ್ಯವನ್ನು ಸಾರೋಣ. ಸತ್ಯವನ್ನು ಉಳಿಸೋಣ.

ಬಾಬಾಸಾಹೇಬರ ಬರಹಗಳಲ್ಲೂ ಅಸುರರು, ದಾಸರು, ದಸ್ಯುಗಳ ಕುರಿತ ದಾಖಲೆಗಳಿವೆ. ಮನುವಾದಿಗಳ ಕುತಂತ್ರಕ್ಕೆ ಬಲಿಯಾದ ನಮ್ಮ ವೀರರು ಮತ್ತು ಶೂರರು ಇತಿಹಾಸದಲ್ಲಿ ಅಸುರರೆಂದು, ರಾಕ್ಷಸರೆಂದು ಬಿಂಬಿಸಲ್ಪಟ್ಟಿದ್ದಾರೆ.

ಈ ರೀತಿ ಮಾಡುವ ಮೂಲಕ ನಮ್ಮಿಂದ ನಮ್ಮ ಪೂರ್ವಿಕರನ್ನು ದೂರಮಾಡುವ ಹುನ್ನಾರವೇ ಮನುವಾದಿಗಳದ್ದಾಗಿದೆ. ಆದ್ದರಿಂದಲೇ ನಮ್ಮ ಜನರು ನಮ್ಮ ಪೂರ್ವಿಕರ ಶೌರ್ಯದ ಇತಿಹಾಸ ಮರೆತು ಇದೇ ಮನುವಾದಿಗಳು ಸೃಷ್ಟಿಸಿರುವ ಕಾಲ್ಪನಿಕ ದೇವರುಗಳನ್ನು ನಂಬಿ ಆರಾಧಿಸುತ್ತಾ ಮನುವಾದಿಗಳಿಗೆ ಲಾಭ ಮಾಡುತ್ತಾ ತಮ್ಮ ನೈಜ ಸಂಸ್ಕೃತಿಯನ್ನು ಮರೆತು ಮನುವಾದಿಗಳ ಗುಲಾಮರಾಗಿದ್ದಾರೆ.

ಬಲಿ ಚಕ್ರವರ್ತಿ ಮತ್ತು ನರಕಾಸುರ ಎಂಬ ನಮ್ಮ ಪೂರ್ವಿಕರನ್ನು ಮನುವಾದಿಗಳು ಮೋಸದಿಂದ ಕೊಂದು ರಾಜ್ಯ ಕಬಳಿಸಿ ಅವರನ್ನು ದುಷ್ಟರೆಂದು ಚಿತ್ರಿಸಿ ಪಟಾಕಿ ಸಿಡಿಸಿ ನಮ್ಮಿಂದಲೇ ನಮ್ಮವರ ಸಾವನ್ನು ಸಂಭ್ರಮಿಸುವಂತೆ ಮಾಡಿದ್ದಾರೆ. ಹೀಗೆ ಇತಿಹಾಸದ ಉದ್ದಕ್ಕೂ ನಮ್ಮ ಪರಂಪರೆಯನ್ನು ನಾಶಗೊಳಿಸಿ ನಮ್ಮನ್ನು ದಿಕ್ಕುತಪ್ಪಿಸಿರುವ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನಾವು ಮಾನಸಿಕವಾಗಿ ಬಿಡುಗಡೆ ಹೊಂದಿದಾಗ ಮಾತ್ರವೇ ಕಳೆದುಕೊಂಡಿರು ಅಧಿಕಾರವನ್ನು ಮರಳಿ ಪಡೆಯಬೇಕಿದೆ. ಇದೇ ನಮ್ಮ ಪರಂಪರೆಯಾಗಿದೆ. ಒಂದು ಸಮುದಾಯವನ್ನು ನಾಶ ಪಡಿಸಬೇಕಿದ್ದರೆ ಅದರ ಪರಂಪರೆಯನ್ನು ನಾಶ ಪಡಿಸಬೇಕು ಎಂಬುದು ಮನುವಾದಿಗಳ ಕುತಂತ್ರವಾಗಿದೆ ಎಂದು ಬಾಬಾಸಾಹೇಬರು ಹೇಳುತ್ತಾರೆ. ನಮ್ಮ ಪರಂಪರೆಯನ್ನು ಹುಡುಕಿ ಮರಳಿ ಪಡೆದರೆ ಮಾತ್ರ ಮನುವಾದಿಗಳ ಪರಂಪರೆಯಿಂದ ಹೊರಬಂದರೆ ಮಾತ್ರ ನಮಗೆ ಅಧಿಕಾರವು ದಕ್ಕಲಿದೆ. ಅಧಿಕಾರದಿಂದ ಮಾತ್ರ ನಮ್ಮ ಹಕ್ಕುಗಳು ದೊರೆಯಲಿವೆ. ಇದೆಲ್ಲವೂ ಬೌದ್ದೀಯತೆಯೇ ಆಗಿದೆ ಎಂಬುದನ್ನು ನೆನಪಿಡಿ.

  • ಡಾ.ಕೃಷ್ಣಮೂರ್ತಿ ಚಮರಂ

(ಡಾ.ಕೃಷ್ಣಮೂರ್ತಿ ಚಮರಂರವರು ಸಾಮಾಜಿಕ ಕಾರ್ಯಕರ್ತರು ಮತ್ತು ಬರಹಗಾರರು. ಲೇಖನದಲ್ಲಿನ ಅಭಿಪ್ರಾಯಗಳು ವೈಯಕ್ತಿಕವಾದವು. ಈ ಕುರಿತು ಚರ್ಚೆಗೆ ಆಹ್ವಾನವಿದೆ. ಮಹಿಷಾಸುರ ಸಂಬಂಧಿತ ಲೇಖನಗಳನ್ನು [email protected] ಗೆ ಕಳಿಸಬಹುದು)


ಇದನ್ನೂ ಓದಿ: ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....