Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಂಸದೆ ಮಹುವಾ ಮೊಯಿತ್ರಾ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯು ತನ್ನ ಸಭೆಯನ್ನು ನ.9ಕ್ಕೆ ಮರು ನಿಗದಿಪಡಿಸಿದ್ದು, ತೃಣಮೂಲ ಕಾಂಗ್ರೆಸ್‌ ಸಂಸದೆ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಕರಡು ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ.

ಆರಂಭದಲ್ಲಿ ಸಭೆಯನ್ನು ನ.7 ರಂದು ನಡೆಸಲು ನಿರ್ಧರಿಸಲಾಗಿತ್ತು. ನ.2ರಂದು ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಅವರ ಬಗ್ಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಮಹುವಾ ಮತ್ತು ಇತರ ವಿರೋಧ ಪಕ್ಷದ ಸಂಸದರು ಸಭೆಯಿಂದ ಹೊರಬಂದಿದ್ದರು.

ಈ ಬಳಿಕ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ ಕಾರಣವನ್ನು ಅಧಿಕೃತವಾಗಿ ಉಲ್ಲೇಖಿಸಲಾಗಿಲ್ಲ.

ಕರಡು ವರದಿಯ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಸಭೆಯನ್ನು ಕರೆಯಲಾಗಿದೆ. ಸಮಿತಿಯು ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ ಮತ್ತು ಈಗ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನ್ನ ಶಿಫಾರಸನ್ನು ನೀಡಲಿದೆ ಎನ್ನಲಾಗಿದೆ. ಸಮಿತಿಯು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಿರುವ ತನ್ನ ವರದಿಯಲ್ಲಿ ಮೊಯಿತ್ರಾ ವಿರುದ್ಧ ಶಿಫಾರಸುಗಳನ್ನು ಮಾಡುವ ಸಾಧ್ಯತೆಗಳಿವೆ.

15 ಸದಸ್ಯರ ಸಮಿತಿಯಲ್ಲಿ ಬಿಜೆಪಿ ಸಂಸದರು ಬಹುಮತವನ್ನು ಹೊಂದಿದ್ದು, ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪ್ರಶ್ನೆ ಕೇಳಲು ಹಣ ಪಡೆದಿರುವ ಕುರಿತಂತೆ ಜೈ ಅನಂತ್ ದೇಹದ್ರಾಯಿ ಅವರ ಆರೋಪಗಳನ್ನು ಉಲ್ಲೇಖಿಸಿ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದರು. ಉದ್ಯಮಿ ದರ್ಶನ್‌ ಹಿರಾನಂದಾನಿ ಅವರ ಆಣತಿಯಂತೆ, ಮೋಯಿತ್ರಾ ಅವರ ಸಂಸದೀಯ ಇ–ಮೇಲ್‌ ಖಾತೆ ಮೂಲಕ ಪ್ರಶ್ನೆಗಳನ್ನು ಟೈಪ್ ಮಾಡಲಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಮೊಯಿತ್ರಾ ಅವರಿಗೆ ಹಣ, ಉಡುಗೊರೆಗಳನ್ನು ನೀಡಲಾಗುತ್ತಿತ್ತು ಎಂದು ದುಬೆ ಆರೋಪಿಸಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಮಹುವಾ ಅವರ ಮಾಜಿ ಜೊತೆಗಾರ ಜೈ ಅನಂತ್ ದೆಹದ್ರಾಯ್ ಅವರು ಸಲ್ಲಿಸಿದ ದೂರಿಗೆ ಪ್ರತಿಯಾಗಿ ಮಹುವಾ ಅವರನ್ನು ಸಮಿತಿಯು ವಿಚಾರಣೆಗೆ ಹಾಜರಾಗಲು ಕರೆದಿತ್ತು. ಸಮಿತಿಯ ಮುಂದೆ ಹಾಜರಾದ ಮಹುವಾ ಅವರು, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ತಾವು ಹಣ, ಉಡುಗೊರೆ ಪಡೆದಿಲ್ಲ ಎಂದು ಹೇಳಿದರು. ದೆಹದ್ರಾಯ್ ಅವರ ಜೊತೆ ತಾವು ಸಂಬಂಧ ಕಡಿದುಕೊಂಡ ಕಾರಣ ದ್ವೇಷದಿಂದ ಈ ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...