Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಂಸದೆ ಮಹುವಾ ಮೊಯಿತ್ರಾ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯು ತನ್ನ ಸಭೆಯನ್ನು ನ.9ಕ್ಕೆ ಮರು ನಿಗದಿಪಡಿಸಿದ್ದು, ತೃಣಮೂಲ ಕಾಂಗ್ರೆಸ್‌ ಸಂಸದೆ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಕರಡು ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ.

ಆರಂಭದಲ್ಲಿ ಸಭೆಯನ್ನು ನ.7 ರಂದು ನಡೆಸಲು ನಿರ್ಧರಿಸಲಾಗಿತ್ತು. ನ.2ರಂದು ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಅವರ ಬಗ್ಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಮಹುವಾ ಮತ್ತು ಇತರ ವಿರೋಧ ಪಕ್ಷದ ಸಂಸದರು ಸಭೆಯಿಂದ ಹೊರಬಂದಿದ್ದರು.

ಈ ಬಳಿಕ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ ಕಾರಣವನ್ನು ಅಧಿಕೃತವಾಗಿ ಉಲ್ಲೇಖಿಸಲಾಗಿಲ್ಲ.

ಕರಡು ವರದಿಯ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಸಭೆಯನ್ನು ಕರೆಯಲಾಗಿದೆ. ಸಮಿತಿಯು ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ ಮತ್ತು ಈಗ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನ್ನ ಶಿಫಾರಸನ್ನು ನೀಡಲಿದೆ ಎನ್ನಲಾಗಿದೆ. ಸಮಿತಿಯು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಿರುವ ತನ್ನ ವರದಿಯಲ್ಲಿ ಮೊಯಿತ್ರಾ ವಿರುದ್ಧ ಶಿಫಾರಸುಗಳನ್ನು ಮಾಡುವ ಸಾಧ್ಯತೆಗಳಿವೆ.

15 ಸದಸ್ಯರ ಸಮಿತಿಯಲ್ಲಿ ಬಿಜೆಪಿ ಸಂಸದರು ಬಹುಮತವನ್ನು ಹೊಂದಿದ್ದು, ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪ್ರಶ್ನೆ ಕೇಳಲು ಹಣ ಪಡೆದಿರುವ ಕುರಿತಂತೆ ಜೈ ಅನಂತ್ ದೇಹದ್ರಾಯಿ ಅವರ ಆರೋಪಗಳನ್ನು ಉಲ್ಲೇಖಿಸಿ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದರು. ಉದ್ಯಮಿ ದರ್ಶನ್‌ ಹಿರಾನಂದಾನಿ ಅವರ ಆಣತಿಯಂತೆ, ಮೋಯಿತ್ರಾ ಅವರ ಸಂಸದೀಯ ಇ–ಮೇಲ್‌ ಖಾತೆ ಮೂಲಕ ಪ್ರಶ್ನೆಗಳನ್ನು ಟೈಪ್ ಮಾಡಲಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಮೊಯಿತ್ರಾ ಅವರಿಗೆ ಹಣ, ಉಡುಗೊರೆಗಳನ್ನು ನೀಡಲಾಗುತ್ತಿತ್ತು ಎಂದು ದುಬೆ ಆರೋಪಿಸಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಮಹುವಾ ಅವರ ಮಾಜಿ ಜೊತೆಗಾರ ಜೈ ಅನಂತ್ ದೆಹದ್ರಾಯ್ ಅವರು ಸಲ್ಲಿಸಿದ ದೂರಿಗೆ ಪ್ರತಿಯಾಗಿ ಮಹುವಾ ಅವರನ್ನು ಸಮಿತಿಯು ವಿಚಾರಣೆಗೆ ಹಾಜರಾಗಲು ಕರೆದಿತ್ತು. ಸಮಿತಿಯ ಮುಂದೆ ಹಾಜರಾದ ಮಹುವಾ ಅವರು, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ತಾವು ಹಣ, ಉಡುಗೊರೆ ಪಡೆದಿಲ್ಲ ಎಂದು ಹೇಳಿದರು. ದೆಹದ್ರಾಯ್ ಅವರ ಜೊತೆ ತಾವು ಸಂಬಂಧ ಕಡಿದುಕೊಂಡ ಕಾರಣ ದ್ವೇಷದಿಂದ ಈ ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...