Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಂಸದೆ ಮಹುವಾ ಮೊಯಿತ್ರಾ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯು ತನ್ನ ಸಭೆಯನ್ನು ನ.9ಕ್ಕೆ ಮರು ನಿಗದಿಪಡಿಸಿದ್ದು, ತೃಣಮೂಲ ಕಾಂಗ್ರೆಸ್‌ ಸಂಸದೆ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಕರಡು ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ.

ಆರಂಭದಲ್ಲಿ ಸಭೆಯನ್ನು ನ.7 ರಂದು ನಡೆಸಲು ನಿರ್ಧರಿಸಲಾಗಿತ್ತು. ನ.2ರಂದು ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಅವರ ಬಗ್ಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಮಹುವಾ ಮತ್ತು ಇತರ ವಿರೋಧ ಪಕ್ಷದ ಸಂಸದರು ಸಭೆಯಿಂದ ಹೊರಬಂದಿದ್ದರು.

ಈ ಬಳಿಕ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ ಕಾರಣವನ್ನು ಅಧಿಕೃತವಾಗಿ ಉಲ್ಲೇಖಿಸಲಾಗಿಲ್ಲ.

ಕರಡು ವರದಿಯ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಸಭೆಯನ್ನು ಕರೆಯಲಾಗಿದೆ. ಸಮಿತಿಯು ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ ಮತ್ತು ಈಗ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನ್ನ ಶಿಫಾರಸನ್ನು ನೀಡಲಿದೆ ಎನ್ನಲಾಗಿದೆ. ಸಮಿತಿಯು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಿರುವ ತನ್ನ ವರದಿಯಲ್ಲಿ ಮೊಯಿತ್ರಾ ವಿರುದ್ಧ ಶಿಫಾರಸುಗಳನ್ನು ಮಾಡುವ ಸಾಧ್ಯತೆಗಳಿವೆ.

15 ಸದಸ್ಯರ ಸಮಿತಿಯಲ್ಲಿ ಬಿಜೆಪಿ ಸಂಸದರು ಬಹುಮತವನ್ನು ಹೊಂದಿದ್ದು, ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪ್ರಶ್ನೆ ಕೇಳಲು ಹಣ ಪಡೆದಿರುವ ಕುರಿತಂತೆ ಜೈ ಅನಂತ್ ದೇಹದ್ರಾಯಿ ಅವರ ಆರೋಪಗಳನ್ನು ಉಲ್ಲೇಖಿಸಿ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದರು. ಉದ್ಯಮಿ ದರ್ಶನ್‌ ಹಿರಾನಂದಾನಿ ಅವರ ಆಣತಿಯಂತೆ, ಮೋಯಿತ್ರಾ ಅವರ ಸಂಸದೀಯ ಇ–ಮೇಲ್‌ ಖಾತೆ ಮೂಲಕ ಪ್ರಶ್ನೆಗಳನ್ನು ಟೈಪ್ ಮಾಡಲಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಮೊಯಿತ್ರಾ ಅವರಿಗೆ ಹಣ, ಉಡುಗೊರೆಗಳನ್ನು ನೀಡಲಾಗುತ್ತಿತ್ತು ಎಂದು ದುಬೆ ಆರೋಪಿಸಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಮಹುವಾ ಅವರ ಮಾಜಿ ಜೊತೆಗಾರ ಜೈ ಅನಂತ್ ದೆಹದ್ರಾಯ್ ಅವರು ಸಲ್ಲಿಸಿದ ದೂರಿಗೆ ಪ್ರತಿಯಾಗಿ ಮಹುವಾ ಅವರನ್ನು ಸಮಿತಿಯು ವಿಚಾರಣೆಗೆ ಹಾಜರಾಗಲು ಕರೆದಿತ್ತು. ಸಮಿತಿಯ ಮುಂದೆ ಹಾಜರಾದ ಮಹುವಾ ಅವರು, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ತಾವು ಹಣ, ಉಡುಗೊರೆ ಪಡೆದಿಲ್ಲ ಎಂದು ಹೇಳಿದರು. ದೆಹದ್ರಾಯ್ ಅವರ ಜೊತೆ ತಾವು ಸಂಬಂಧ ಕಡಿದುಕೊಂಡ ಕಾರಣ ದ್ವೇಷದಿಂದ ಈ ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...