Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಂಸದೆ ಮಹುವಾ ಮೊಯಿತ್ರಾ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯು ತನ್ನ ಸಭೆಯನ್ನು ನ.9ಕ್ಕೆ ಮರು ನಿಗದಿಪಡಿಸಿದ್ದು, ತೃಣಮೂಲ ಕಾಂಗ್ರೆಸ್‌ ಸಂಸದೆ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಕರಡು ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ.

ಆರಂಭದಲ್ಲಿ ಸಭೆಯನ್ನು ನ.7 ರಂದು ನಡೆಸಲು ನಿರ್ಧರಿಸಲಾಗಿತ್ತು. ನ.2ರಂದು ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಅವರ ಬಗ್ಗೆ ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಮಹುವಾ ಮತ್ತು ಇತರ ವಿರೋಧ ಪಕ್ಷದ ಸಂಸದರು ಸಭೆಯಿಂದ ಹೊರಬಂದಿದ್ದರು.

ಈ ಬಳಿಕ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ ಕಾರಣವನ್ನು ಅಧಿಕೃತವಾಗಿ ಉಲ್ಲೇಖಿಸಲಾಗಿಲ್ಲ.

ಕರಡು ವರದಿಯ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಸಭೆಯನ್ನು ಕರೆಯಲಾಗಿದೆ. ಸಮಿತಿಯು ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ ಮತ್ತು ಈಗ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನ್ನ ಶಿಫಾರಸನ್ನು ನೀಡಲಿದೆ ಎನ್ನಲಾಗಿದೆ. ಸಮಿತಿಯು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಿರುವ ತನ್ನ ವರದಿಯಲ್ಲಿ ಮೊಯಿತ್ರಾ ವಿರುದ್ಧ ಶಿಫಾರಸುಗಳನ್ನು ಮಾಡುವ ಸಾಧ್ಯತೆಗಳಿವೆ.

15 ಸದಸ್ಯರ ಸಮಿತಿಯಲ್ಲಿ ಬಿಜೆಪಿ ಸಂಸದರು ಬಹುಮತವನ್ನು ಹೊಂದಿದ್ದು, ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪ್ರಶ್ನೆ ಕೇಳಲು ಹಣ ಪಡೆದಿರುವ ಕುರಿತಂತೆ ಜೈ ಅನಂತ್ ದೇಹದ್ರಾಯಿ ಅವರ ಆರೋಪಗಳನ್ನು ಉಲ್ಲೇಖಿಸಿ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದರು. ಉದ್ಯಮಿ ದರ್ಶನ್‌ ಹಿರಾನಂದಾನಿ ಅವರ ಆಣತಿಯಂತೆ, ಮೋಯಿತ್ರಾ ಅವರ ಸಂಸದೀಯ ಇ–ಮೇಲ್‌ ಖಾತೆ ಮೂಲಕ ಪ್ರಶ್ನೆಗಳನ್ನು ಟೈಪ್ ಮಾಡಲಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಮೊಯಿತ್ರಾ ಅವರಿಗೆ ಹಣ, ಉಡುಗೊರೆಗಳನ್ನು ನೀಡಲಾಗುತ್ತಿತ್ತು ಎಂದು ದುಬೆ ಆರೋಪಿಸಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಮಹುವಾ ಅವರ ಮಾಜಿ ಜೊತೆಗಾರ ಜೈ ಅನಂತ್ ದೆಹದ್ರಾಯ್ ಅವರು ಸಲ್ಲಿಸಿದ ದೂರಿಗೆ ಪ್ರತಿಯಾಗಿ ಮಹುವಾ ಅವರನ್ನು ಸಮಿತಿಯು ವಿಚಾರಣೆಗೆ ಹಾಜರಾಗಲು ಕರೆದಿತ್ತು. ಸಮಿತಿಯ ಮುಂದೆ ಹಾಜರಾದ ಮಹುವಾ ಅವರು, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ತಾವು ಹಣ, ಉಡುಗೊರೆ ಪಡೆದಿಲ್ಲ ಎಂದು ಹೇಳಿದರು. ದೆಹದ್ರಾಯ್ ಅವರ ಜೊತೆ ತಾವು ಸಂಬಂಧ ಕಡಿದುಕೊಂಡ ಕಾರಣ ದ್ವೇಷದಿಂದ ಈ ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...