Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಿದರು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಹಾಗಾಗಿ ಸ್ಪೀಕರ್ ಕಲಾಪವನ್ನು ಅಪರಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು.

2 ಗಂಟೆಗೆ ಕಲಾಪ ಪುನರಾರಂಭವಾದ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ನೈತಿಕ ಸಮಿತಿಯ ವರದಿಯನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದರು. ಬಳಿಕ ನೈತಿಕ ಸಮಿತಿಯ ವರದಿಯನ್ನು ಸಂಸತ್‌ನಲ್ಲಿ ಅಂಗೀಕರಿಸಲಾಯಿತು.

ಸದನದ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಂಡಿದೆ. ಹಾಗಾಗಿ, ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದರು. ಸಂಸತ್‌ ಕಲಾಪವನ್ನು ನವೆಂಬರ್‌ 11ವರೆಗೆ ಮುಂದೂಡಿಕೆ ಮಾಡಿದರು.

ಸಂಸತ್‌ನಿಂದ ಹೊರ ನಡೆದ ಪ್ರತಿಪಕ್ಷ ಸದಸ್ಯರು:

ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡುವ ನಿರ್ಧಾರವನ್ನು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌, ಟಿಎಸಿಂ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಂಸತ್‌ನಿಂದ ಹೊರ ನಡೆದರು. ಬಳಿಕ ಸಂಸತ್‌ ಭವನದ ಹೊರಗಿನ ಗಾಂಧಿ ಪ್ರತಿಮೆ ಬಳಿ ನಿಂತು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಿಯಮ ಉಲ್ಲಂಘಿಸಿ ಉಚ್ಚಾಟನೆ : ಮಹುವಾ ಆಕ್ರೋಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್‌ನಿಂದ ಉಚ್ಚಾಟನೆ ಮಾಡುವ ಘೋಷಣೆ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕರೊಂದಿಗೆ ಸಂಸತ್‌ನಿಂದ ಹೊರ ನಡೆದ ಮಹುವಾ ಮೊಯಿತ್ರಾ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟನೆ ಮಾಡಲಾಗಿದೆ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ” ಎಂದರು.

ಮಹುವಾಗೆ ಮಾತನಾಡಲು ಅವಕಾಶ ನಿರಾಕರಣೆ :

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಮಾತನಾಡಲು ಅವಕಾಶ ನೀಡುವಂತೆ ಮಹುವಾ ಮೊಯಿತ್ರಾ ಸ್ಪೀಕರ್‌ಗೆ ಮನವಿ ಮಾಡಿದರು. ಯಾವುದೇ ಆರೋಪದ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದು ಆರೋಪಿಯ ಮೂಲಭೂತ ಹಕ್ಕು ಎಂದರು. ಟಿಎಂಸಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವರು ಮಹುವಾ ಬೆಂಬಲಕ್ಕೆ ನಿಂತು, ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಆದರೆ, ಮಹುವಾಗೆ ಮಾತನಾಡಲು ಅವಕಾಶ ನಿರಾಕರಿಸಿದ ಸ್ಪೀಕರ್, ಅದಕ್ಕೆ ಕಾರಣಗಳನ್ನು ಕೊಟ್ಟರು. ಈ ಹಿಂದಿನ ಸ್ಪೀಕರ್‌ಗಳು ಇಂತಹ ಪ್ರಕರಣಗಳಲ್ಲಿ ಅನುಸರಿಸಿದ ಸಾಂಪ್ರದಾಯಿಕ ನಿಯಮವನ್ನು ನಾನೂ ಅನುಸರಿಸುತ್ತೇನೆ. ಈ ಹಿಂದೆ ಮಾಜಿ ಸ್ಪೀಕರ್‌ಗಳಾದ ಸೋಮನಾಥ್ ಚಟರ್ಜಿ ಮತ್ತು ಪ್ರಣಬ್ ಮುಖರ್ಜಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಸರ್ಕಾರದ ಪರವಾಗಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 2005 ರ ‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿಯವರ ನಡೆಯನ್ನುಉಲ್ಲೇಖಸಿದರು. ಬಿಜೆಪಿ ಆರು ಮತ್ತು ಕಾಂಗ್ರೆಸ್‌ನ ಒಬ್ಬರು ಸಂಸದರ ಮೇಲೆ ಮಹುವಾ ರೀತಿಯ ಆರೋಪ ಕೇಳಿ ಬಂದಾಗ ಅವರು ನೈತಿಕ ಸಮಿತಿಯ ಮುಂದೆ ಹೇಳಿಕೆ ದಾಖಲಿಸಿದ್ದರು. ಬಳಿಕ ಆರೋಪಿತ ಸಂಸದರಿಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ ಎಂದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...