Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಿದರು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಹಾಗಾಗಿ ಸ್ಪೀಕರ್ ಕಲಾಪವನ್ನು ಅಪರಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು.

2 ಗಂಟೆಗೆ ಕಲಾಪ ಪುನರಾರಂಭವಾದ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ನೈತಿಕ ಸಮಿತಿಯ ವರದಿಯನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದರು. ಬಳಿಕ ನೈತಿಕ ಸಮಿತಿಯ ವರದಿಯನ್ನು ಸಂಸತ್‌ನಲ್ಲಿ ಅಂಗೀಕರಿಸಲಾಯಿತು.

ಸದನದ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಂಡಿದೆ. ಹಾಗಾಗಿ, ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದರು. ಸಂಸತ್‌ ಕಲಾಪವನ್ನು ನವೆಂಬರ್‌ 11ವರೆಗೆ ಮುಂದೂಡಿಕೆ ಮಾಡಿದರು.

ಸಂಸತ್‌ನಿಂದ ಹೊರ ನಡೆದ ಪ್ರತಿಪಕ್ಷ ಸದಸ್ಯರು:

ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡುವ ನಿರ್ಧಾರವನ್ನು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌, ಟಿಎಸಿಂ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಂಸತ್‌ನಿಂದ ಹೊರ ನಡೆದರು. ಬಳಿಕ ಸಂಸತ್‌ ಭವನದ ಹೊರಗಿನ ಗಾಂಧಿ ಪ್ರತಿಮೆ ಬಳಿ ನಿಂತು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಿಯಮ ಉಲ್ಲಂಘಿಸಿ ಉಚ್ಚಾಟನೆ : ಮಹುವಾ ಆಕ್ರೋಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್‌ನಿಂದ ಉಚ್ಚಾಟನೆ ಮಾಡುವ ಘೋಷಣೆ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕರೊಂದಿಗೆ ಸಂಸತ್‌ನಿಂದ ಹೊರ ನಡೆದ ಮಹುವಾ ಮೊಯಿತ್ರಾ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟನೆ ಮಾಡಲಾಗಿದೆ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ” ಎಂದರು.

ಮಹುವಾಗೆ ಮಾತನಾಡಲು ಅವಕಾಶ ನಿರಾಕರಣೆ :

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಮಾತನಾಡಲು ಅವಕಾಶ ನೀಡುವಂತೆ ಮಹುವಾ ಮೊಯಿತ್ರಾ ಸ್ಪೀಕರ್‌ಗೆ ಮನವಿ ಮಾಡಿದರು. ಯಾವುದೇ ಆರೋಪದ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದು ಆರೋಪಿಯ ಮೂಲಭೂತ ಹಕ್ಕು ಎಂದರು. ಟಿಎಂಸಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವರು ಮಹುವಾ ಬೆಂಬಲಕ್ಕೆ ನಿಂತು, ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಆದರೆ, ಮಹುವಾಗೆ ಮಾತನಾಡಲು ಅವಕಾಶ ನಿರಾಕರಿಸಿದ ಸ್ಪೀಕರ್, ಅದಕ್ಕೆ ಕಾರಣಗಳನ್ನು ಕೊಟ್ಟರು. ಈ ಹಿಂದಿನ ಸ್ಪೀಕರ್‌ಗಳು ಇಂತಹ ಪ್ರಕರಣಗಳಲ್ಲಿ ಅನುಸರಿಸಿದ ಸಾಂಪ್ರದಾಯಿಕ ನಿಯಮವನ್ನು ನಾನೂ ಅನುಸರಿಸುತ್ತೇನೆ. ಈ ಹಿಂದೆ ಮಾಜಿ ಸ್ಪೀಕರ್‌ಗಳಾದ ಸೋಮನಾಥ್ ಚಟರ್ಜಿ ಮತ್ತು ಪ್ರಣಬ್ ಮುಖರ್ಜಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಸರ್ಕಾರದ ಪರವಾಗಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 2005 ರ ‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿಯವರ ನಡೆಯನ್ನುಉಲ್ಲೇಖಸಿದರು. ಬಿಜೆಪಿ ಆರು ಮತ್ತು ಕಾಂಗ್ರೆಸ್‌ನ ಒಬ್ಬರು ಸಂಸದರ ಮೇಲೆ ಮಹುವಾ ರೀತಿಯ ಆರೋಪ ಕೇಳಿ ಬಂದಾಗ ಅವರು ನೈತಿಕ ಸಮಿತಿಯ ಮುಂದೆ ಹೇಳಿಕೆ ದಾಖಲಿಸಿದ್ದರು. ಬಳಿಕ ಆರೋಪಿತ ಸಂಸದರಿಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ ಎಂದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...