Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಿದರು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಹಾಗಾಗಿ ಸ್ಪೀಕರ್ ಕಲಾಪವನ್ನು ಅಪರಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು.

2 ಗಂಟೆಗೆ ಕಲಾಪ ಪುನರಾರಂಭವಾದ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ನೈತಿಕ ಸಮಿತಿಯ ವರದಿಯನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದರು. ಬಳಿಕ ನೈತಿಕ ಸಮಿತಿಯ ವರದಿಯನ್ನು ಸಂಸತ್‌ನಲ್ಲಿ ಅಂಗೀಕರಿಸಲಾಯಿತು.

ಸದನದ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಂಡಿದೆ. ಹಾಗಾಗಿ, ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದರು. ಸಂಸತ್‌ ಕಲಾಪವನ್ನು ನವೆಂಬರ್‌ 11ವರೆಗೆ ಮುಂದೂಡಿಕೆ ಮಾಡಿದರು.

ಸಂಸತ್‌ನಿಂದ ಹೊರ ನಡೆದ ಪ್ರತಿಪಕ್ಷ ಸದಸ್ಯರು:

ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡುವ ನಿರ್ಧಾರವನ್ನು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌, ಟಿಎಸಿಂ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಂಸತ್‌ನಿಂದ ಹೊರ ನಡೆದರು. ಬಳಿಕ ಸಂಸತ್‌ ಭವನದ ಹೊರಗಿನ ಗಾಂಧಿ ಪ್ರತಿಮೆ ಬಳಿ ನಿಂತು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಿಯಮ ಉಲ್ಲಂಘಿಸಿ ಉಚ್ಚಾಟನೆ : ಮಹುವಾ ಆಕ್ರೋಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್‌ನಿಂದ ಉಚ್ಚಾಟನೆ ಮಾಡುವ ಘೋಷಣೆ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕರೊಂದಿಗೆ ಸಂಸತ್‌ನಿಂದ ಹೊರ ನಡೆದ ಮಹುವಾ ಮೊಯಿತ್ರಾ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟನೆ ಮಾಡಲಾಗಿದೆ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ” ಎಂದರು.

ಮಹುವಾಗೆ ಮಾತನಾಡಲು ಅವಕಾಶ ನಿರಾಕರಣೆ :

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಮಾತನಾಡಲು ಅವಕಾಶ ನೀಡುವಂತೆ ಮಹುವಾ ಮೊಯಿತ್ರಾ ಸ್ಪೀಕರ್‌ಗೆ ಮನವಿ ಮಾಡಿದರು. ಯಾವುದೇ ಆರೋಪದ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದು ಆರೋಪಿಯ ಮೂಲಭೂತ ಹಕ್ಕು ಎಂದರು. ಟಿಎಂಸಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವರು ಮಹುವಾ ಬೆಂಬಲಕ್ಕೆ ನಿಂತು, ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಆದರೆ, ಮಹುವಾಗೆ ಮಾತನಾಡಲು ಅವಕಾಶ ನಿರಾಕರಿಸಿದ ಸ್ಪೀಕರ್, ಅದಕ್ಕೆ ಕಾರಣಗಳನ್ನು ಕೊಟ್ಟರು. ಈ ಹಿಂದಿನ ಸ್ಪೀಕರ್‌ಗಳು ಇಂತಹ ಪ್ರಕರಣಗಳಲ್ಲಿ ಅನುಸರಿಸಿದ ಸಾಂಪ್ರದಾಯಿಕ ನಿಯಮವನ್ನು ನಾನೂ ಅನುಸರಿಸುತ್ತೇನೆ. ಈ ಹಿಂದೆ ಮಾಜಿ ಸ್ಪೀಕರ್‌ಗಳಾದ ಸೋಮನಾಥ್ ಚಟರ್ಜಿ ಮತ್ತು ಪ್ರಣಬ್ ಮುಖರ್ಜಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಸರ್ಕಾರದ ಪರವಾಗಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 2005 ರ ‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿಯವರ ನಡೆಯನ್ನುಉಲ್ಲೇಖಸಿದರು. ಬಿಜೆಪಿ ಆರು ಮತ್ತು ಕಾಂಗ್ರೆಸ್‌ನ ಒಬ್ಬರು ಸಂಸದರ ಮೇಲೆ ಮಹುವಾ ರೀತಿಯ ಆರೋಪ ಕೇಳಿ ಬಂದಾಗ ಅವರು ನೈತಿಕ ಸಮಿತಿಯ ಮುಂದೆ ಹೇಳಿಕೆ ದಾಖಲಿಸಿದ್ದರು. ಬಳಿಕ ಆರೋಪಿತ ಸಂಸದರಿಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ ಎಂದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...