Homeಮುಖಪುಟಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

ಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

- Advertisement -
- Advertisement -

ಭಾರತ ಮತ್ತು ಬಾಂಗ್ಲಾದೇಶದ ಗಡಿ ಬಳಿ ಗೋಮಾಂಸ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಶಂತನು ಠಾಕೂರ್ ಪಾಸ್ (ಅಧಿಕೃತ ಸಾಗಣೆ ಪರವಾನಗಿ ಪತ್ರ) ವಿತರಿಸುತ್ತಿದ್ದಾರೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೋಮವಾರ ಆರೋಪಿಸಿದ್ದರು. ಆದರೆ, ಇದು ಸಾಮಾನ್ಯ ಪ್ರಕ್ರಿಯೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಿಳಿಸಿದೆ.

ಪಾಸ್‌ನ ಫೋಟೋ ಪೋಸ್ಟ್‌ ಮಾಡಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದ ಮಹುವಾ ಮೊಯಿತ್ರಾ “ಶಂತನು ಠಾಕೂರ್ ಮೂರು ಕೆಜಿ ಗೋಮಾಂಸ ಕಳ್ಳಸಾಗಣೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಪೋಸ್ಟ್ ಅನ್ನು ಬಿಎಸ್‌ಎಫ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ ಮಹುವಾ, ಗೋರಕ್ಷಕರು ಮತ್ತು ಗೋದಿ ಮಾಧ್ಯಮಗಳು ಎಲ್ಲಿವೆ” ಎಂದು ತಿವಿದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಬಿಎಸ್‌ಎಫ್‌ ಅಧಿಕಾರಿಗಳು “ಇದೊಂದು ಸಾಮಾನ್ಯ ಪ್ರಕ್ರಿಯೆ. ಜನ ಪ್ರತಿನಿಧಿಗಳು ಸ್ಥಳೀಯರಿಗೆ ಅಂತಹ ಪಾಸ್ ನೀಡುವ ಅಧಿಕಾರ ಹೊಂದಿದ್ದಾರೆ. ಅಲ್ಲದೆ ಗೋಮಾಂಸ ಸೇವನೆ ಪಶ್ಚಿಮ ಬಂಗಾಳದಲ್ಲಿ ಅಪರಾಧ ಅಲ್ಲ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಭಾರತ-ಬಾಂಗ್ಲಾ ಗಡಿಗೆ ಹೊಂದಿಕೊಂಡಿರುವ ಹಕೀಂಪುರ ಮತ್ತು ತರಲಿ ಪ್ರದೇಶಗಳ ಜನರಿಗೆ ಪಂಚಾಯತ್, ವಾರ್ಡ್‌ ಸದಸ್ಯರು, ಕೌನ್ಸಿಲರ್‌ಗಳು ಸೇರಿದಂತೆ ಜನ ಪ್ರತಿನಿಧಿಗಳು ಪಾಸ್ ಮತ್ತು ವ್ಯವಹಾರ ಪರವಾನಗಿ ನೀಡುವುದು ಸಾಮಾನ್ಯ ಪ್ರಕ್ರಿಯೆ. ಗಡಿಯಲ್ಲಿ ಬಾಂಗ್ಲಾ ದೇಶದಿಂದ ಜಾನುವಾರುಗಳ ಕಳ್ಳಸಾಗಣಿಕೆ ತಡೆಯಲು ನಿಯೋಜಿಸಿರುವ ಬಿಎಸ್‌ಎಫ್‌ ಯೋಧರು ಸ್ಥಳೀಯರನ್ನು ಪರಿಶೀಲನೆ ನಡೆಸಿದರೆ ಪಾಸ್‌, ಪರವಾನಿಗೆಗಳು ಅವರಿಗೆ ಸಹಾಯವಾಗುತ್ತದೆ. ಕಳೆದ ಎರಡು ದಶಕಗಳಿಂದ ಈ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಬಿಎಸ್‌ಎಫ್‌ನ ಹಿರಿಯ ಅಧಿಕಾರಿ ತಿಳಿಸಿದ್ದಾಗಿ ವರದಿ ಹೇಳಿದೆ

ಮಹುವಾ ಮೊಯಿತ್ರಾ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್‌ನಗರ ಪ್ರದೇಶದ ಹಕೀಂಪುರದ 8 ಟಿಎಂಸಿ ಕೌನ್ಸಿಲರ್‌ಗಳು ದಿನವೊಂದಕ್ಕೆ ಸುಮಾರು 80 ಪಾಸ್‌ಗಳನ್ನು ವಿತರಿಸುತ್ತಾರೆ. ಸ್ಥಳೀಯ ನಿವಾಸಿಗಳು ಗೋಮಾಂಸ ಸಾಗಣೆ ಮಾಡಲು ಬಿಎಸ್‌ಎಫ್‌ನಿಂದ ಅನುಮತಿ ಕೋರಿ ಪಾಸ್‌ ನೀಡಲಾಗುತ್ತದೆ. ಹಕೀಂಪುರ ಪ್ರದೇಶ ಸಚಿವ ಶಂತನು ಠಾಕೂರ್‌ ಪ್ರತಿನಿಧಿಸುವ ಬೋಂಗಾವ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದೆ ಎಂದು ವರದಿ ತಿಳಿಸಿದೆ.

ಪಾಸ್ ವಿತರಿಸುವ ವಿಚಾರ ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. 2013ರಲ್ಲಿ ಕೋರ್ಟ್‌ ಬಿಎಸ್‌ಎಫ್‌ ಪರ ತೀರ್ಪು ನೀಡಿತ್ತು. ಗಡಿ ಭದ್ರತೆಯ ನಿಟ್ಟಿನಲ್ಲಿ ಪಾಸ್ ವಿತರಿಸುವುದು ಅಗತ್ಯ ಎಂದು ಕೋರ್ಟ್ ಹೇಳಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...