Homeಮುಖಪುಟಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

ಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

- Advertisement -
- Advertisement -

ಭಾರತ ಮತ್ತು ಬಾಂಗ್ಲಾದೇಶದ ಗಡಿ ಬಳಿ ಗೋಮಾಂಸ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಶಂತನು ಠಾಕೂರ್ ಪಾಸ್ (ಅಧಿಕೃತ ಸಾಗಣೆ ಪರವಾನಗಿ ಪತ್ರ) ವಿತರಿಸುತ್ತಿದ್ದಾರೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೋಮವಾರ ಆರೋಪಿಸಿದ್ದರು. ಆದರೆ, ಇದು ಸಾಮಾನ್ಯ ಪ್ರಕ್ರಿಯೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಿಳಿಸಿದೆ.

ಪಾಸ್‌ನ ಫೋಟೋ ಪೋಸ್ಟ್‌ ಮಾಡಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದ ಮಹುವಾ ಮೊಯಿತ್ರಾ “ಶಂತನು ಠಾಕೂರ್ ಮೂರು ಕೆಜಿ ಗೋಮಾಂಸ ಕಳ್ಳಸಾಗಣೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಪೋಸ್ಟ್ ಅನ್ನು ಬಿಎಸ್‌ಎಫ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ ಮಹುವಾ, ಗೋರಕ್ಷಕರು ಮತ್ತು ಗೋದಿ ಮಾಧ್ಯಮಗಳು ಎಲ್ಲಿವೆ” ಎಂದು ತಿವಿದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಬಿಎಸ್‌ಎಫ್‌ ಅಧಿಕಾರಿಗಳು “ಇದೊಂದು ಸಾಮಾನ್ಯ ಪ್ರಕ್ರಿಯೆ. ಜನ ಪ್ರತಿನಿಧಿಗಳು ಸ್ಥಳೀಯರಿಗೆ ಅಂತಹ ಪಾಸ್ ನೀಡುವ ಅಧಿಕಾರ ಹೊಂದಿದ್ದಾರೆ. ಅಲ್ಲದೆ ಗೋಮಾಂಸ ಸೇವನೆ ಪಶ್ಚಿಮ ಬಂಗಾಳದಲ್ಲಿ ಅಪರಾಧ ಅಲ್ಲ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಭಾರತ-ಬಾಂಗ್ಲಾ ಗಡಿಗೆ ಹೊಂದಿಕೊಂಡಿರುವ ಹಕೀಂಪುರ ಮತ್ತು ತರಲಿ ಪ್ರದೇಶಗಳ ಜನರಿಗೆ ಪಂಚಾಯತ್, ವಾರ್ಡ್‌ ಸದಸ್ಯರು, ಕೌನ್ಸಿಲರ್‌ಗಳು ಸೇರಿದಂತೆ ಜನ ಪ್ರತಿನಿಧಿಗಳು ಪಾಸ್ ಮತ್ತು ವ್ಯವಹಾರ ಪರವಾನಗಿ ನೀಡುವುದು ಸಾಮಾನ್ಯ ಪ್ರಕ್ರಿಯೆ. ಗಡಿಯಲ್ಲಿ ಬಾಂಗ್ಲಾ ದೇಶದಿಂದ ಜಾನುವಾರುಗಳ ಕಳ್ಳಸಾಗಣಿಕೆ ತಡೆಯಲು ನಿಯೋಜಿಸಿರುವ ಬಿಎಸ್‌ಎಫ್‌ ಯೋಧರು ಸ್ಥಳೀಯರನ್ನು ಪರಿಶೀಲನೆ ನಡೆಸಿದರೆ ಪಾಸ್‌, ಪರವಾನಿಗೆಗಳು ಅವರಿಗೆ ಸಹಾಯವಾಗುತ್ತದೆ. ಕಳೆದ ಎರಡು ದಶಕಗಳಿಂದ ಈ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಬಿಎಸ್‌ಎಫ್‌ನ ಹಿರಿಯ ಅಧಿಕಾರಿ ತಿಳಿಸಿದ್ದಾಗಿ ವರದಿ ಹೇಳಿದೆ

ಮಹುವಾ ಮೊಯಿತ್ರಾ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್‌ನಗರ ಪ್ರದೇಶದ ಹಕೀಂಪುರದ 8 ಟಿಎಂಸಿ ಕೌನ್ಸಿಲರ್‌ಗಳು ದಿನವೊಂದಕ್ಕೆ ಸುಮಾರು 80 ಪಾಸ್‌ಗಳನ್ನು ವಿತರಿಸುತ್ತಾರೆ. ಸ್ಥಳೀಯ ನಿವಾಸಿಗಳು ಗೋಮಾಂಸ ಸಾಗಣೆ ಮಾಡಲು ಬಿಎಸ್‌ಎಫ್‌ನಿಂದ ಅನುಮತಿ ಕೋರಿ ಪಾಸ್‌ ನೀಡಲಾಗುತ್ತದೆ. ಹಕೀಂಪುರ ಪ್ರದೇಶ ಸಚಿವ ಶಂತನು ಠಾಕೂರ್‌ ಪ್ರತಿನಿಧಿಸುವ ಬೋಂಗಾವ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದೆ ಎಂದು ವರದಿ ತಿಳಿಸಿದೆ.

ಪಾಸ್ ವಿತರಿಸುವ ವಿಚಾರ ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. 2013ರಲ್ಲಿ ಕೋರ್ಟ್‌ ಬಿಎಸ್‌ಎಫ್‌ ಪರ ತೀರ್ಪು ನೀಡಿತ್ತು. ಗಡಿ ಭದ್ರತೆಯ ನಿಟ್ಟಿನಲ್ಲಿ ಪಾಸ್ ವಿತರಿಸುವುದು ಅಗತ್ಯ ಎಂದು ಕೋರ್ಟ್ ಹೇಳಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...