Homeಮುಖಪುಟಫೈನಾನ್ಶಿಯಲ್ ಟೈಮ್ಸ್ ವರದಿ ನಿರಾಕರಿಸಿದ ಅದಾನಿ ಗ್ರೂಪ್ ವಿರುದ್ಧ ಟಿಎಂಸಿ ಸಂಸದೆ ಟೀಕೆ

ಫೈನಾನ್ಶಿಯಲ್ ಟೈಮ್ಸ್ ವರದಿ ನಿರಾಕರಿಸಿದ ಅದಾನಿ ಗ್ರೂಪ್ ವಿರುದ್ಧ ಟಿಎಂಸಿ ಸಂಸದೆ ಟೀಕೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ‘ಗೌತಮ್ ಅದಾನಿ ಗ್ರೂಪ್’ ಯುಕೆ ಮೂಲದ ಫೈನಾನ್ಶಿಯಲ್ ಟೈಮ್ಸ್ ಪತ್ರಿಕೆಯ ವರದಿಯನ್ನು ಸಂಘಟಿತ ಮತ್ತು ಸುಳ್ಳು ವರದಿ ಎಂದು ಹೇಳಿದ್ದಕ್ಕೆ ವಾಗ್ದಾಳಿ ನಡೆಸಿದ್ದಾರೆ.

ಮೊದಲು ಅವರು ಅದಾನಿ ಭಾರತ ಮತ್ತು ಯಾವುದೇ ಅದಾನಿ ವಿರೋಧಿ ಆರೋಪಗಳು ಭಾರತ ವಿರೋಧಿ ಎಂದು ಹೇಳುತ್ತಿದ್ದರು ಎಂದು ಮಹುವ ಮೊಯಿತ್ರಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈಗ ಅವರು ಫೈನಾನ್ಶಿಯಲ್ ಟೈಮ್ಸ್ ಪತ್ರಿಕೆಯನ್ನು ಸೊರೊಸ್ ಎಂದು ಹೇಳುತ್ತಾರೆ! ನಾವೆಲ್ಲರೂ ಸೊರೊಸ್ ಏಜೆಂಟ್‌ಗಳು, ಆದರೆ ಅದಾನಿ ಅವರ ಪಕ್ಷಕ್ಕೆ ಸಂಬಂಧಿಸಿದವರಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ದ ಟೀಕಿಸಿದ್ದಾರೆ.

ಅದಾನಿ ಗ್ರೂಪ್ ಸೋಮವಾರ ಮಾಧ್ಯಮ ಹೇಳಿಕೆಯನ್ನು ನೀಡಿದ್ದು, ಫೈನಾನ್ಶಿಯಲ್ ಟೈಮ್ಸ್ ಪತ್ರಕರ್ತರೊಬ್ಬರು ಒಸಿಸಿಆರ್‌ಪಿಯೊಂದಿಗೆ ಜಂಟಿಯಾಗಿ ಅದಾನಿ ಗ್ರೂಪ್‌ ವಿರುದ್ಧ ವರದಿ ಮಾಡಿದ್ದಾರೆ. ಇದು ‘ಸುಳ್ಳು ವರದಿ’ ಎಂದು ಹೇಳಿದೆ. ಈ ಲೇಖನಗಳು ಸಾರ್ವಜನಿಕ ಹಿತಾಸಕ್ತಿಯ ಸೋಗಿನಲ್ಲಿ ಪಟ್ಟಭದ್ರ ಹಿತಾಸಕ್ತಿಗಳನ್ನು ಮುನ್ನಡೆಸುವವರ ವಿಸ್ತೃತ ಅಭಿಯಾನದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಫೈನಾನ್ಷಿಯಲ್ ಟೈಮ್ಸ್‌ನ ಡಾನ್ ಮೆಕ್‌ಕ್ರಂ ಅವರು OCCRP ಯೊಂದಿಗೆ ಜಂಟಿಯಾಗಿ 31 ಆಗಸ್ಟ್ 2023 ರಂದು ಅದಾನಿ ಗ್ರೂಪ್ ವಿರುದ್ಧ ಸುಳ್ಳು ವರದಿಯನ್ನು ಮಾಡಿದ್ದಾರೆ.  OCCRPಗೆ ಜಾರ್ಜ್ ಸೊರೊಸ್ ಹಣ ನೀಡಿದ್ದಾರೆ. ಅದಾನಿ ಗ್ರೂಪ್ ವಿರುದ್ಧ ಅವರು ಹಗೆತನ ಸಾಧಿಸುತ್ತಿದ್ದಾರೆ ಎಂದು ಅದಾನಿ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ( Organised Crime and Corruption Reporting Project) (OCCRP) ಆಗಸ್ಟ್‌ನ ವರದಿಯಲ್ಲಿ ಅದಾನಿ ಕುಟುಂಬದೊಂದಿಗೆ ದೀರ್ಘಕಾಲದ ವ್ಯಾಪಾರ ಸಂಬಂಧ ಹೊಂದಿರುವ ಇಬ್ಬರು ವೈಯಕ್ತಿಕ ಹೂಡಿಕೆದಾರರು 2013 ಮತ್ತು 2018ರ ನಡುವೆ ಅದಾನಿ ಷೇರುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ವಿದೇಶಿ ವೇದಿಕೆಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದೆ. ಇದಲ್ಲದೆ ಇಬ್ಬರು ಹೂಡಿಕೆದಾರರು ಅದಾನಿ ಗ್ರೂಪ್‌ ಜೊತೆ ಮತ್ತು ಗೌತಮ್ ಅದಾನಿಯವರ ಸಹೋದರ ವಿನೋದ್ ಅದಾನಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಿತ್ತು.

ಇದನ್ನು ಓದಿ:ನ್ಯೂಸ್ ಕ್ಲಿಕ್‌ ವಿರುದ್ಧದ ಪ್ರಕರಣ: 25 ಪತ್ರಕರ್ತರನ್ನು 2ನೇ ಬಾರಿಗೆ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...