Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...