Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...