Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...