Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...