Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...