Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...