Homeಮುಖಪುಟಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

ಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ದುಬೆ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ನಗದು ಸ್ವೀಕರಿಸಿದ್ದಾರೆ ಎಂದು ಆರೋಪಿಸಿದ್ದರು ಮತ್ತು ತೃಣಮೂಲ ಸಂಸದರ ವಿರುದ್ಧ ತನಿಖೆಗೆ ಒತ್ತಾಯಿಸಿದ್ದರು. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು  ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ತನ್ನ ಪತ್ರದಲ್ಲಿ ಮಹುವಾ ಮೊಯಿತ್ರಾ  ಅವರು ಗಂಭೀರ ವಿಶೇಷಾಧಿಕಾರದ ಉಲ್ಲಂಘನೆ, ಸದನದ ಅವಹೇಳನ ಮಾಡಿದ್ದಾರೆ ಮತ್ತು ಐಪಿಸಿಯ ಸೆಕ್ಷನ್ 120A ಅಡಿಯಲ್ಲಿ ಕ್ರಿಮಿನಲ್ ಅಪರಾಧ ಎಸಗಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಅವರಿಗೆ ನಗದು ಮತ್ತು ಉಡುಗೊರೆಗಳನ್ನು ಲಂಚವಾಗಿ ನೀಡಲಾಗಿದೆ ಎಂದು ದುಬೆ ಭಾನುವಾರ ಲೋಕಸಭೆಯ ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ. ದೆಹದ್ರಾಯಿಯಿಂದ ಈ ಬಗ್ಗೆ ಮಾಹಿತಿ ಪಡೆದಿರುವುದಾಗಿ ಹೇಳಿಕೊಂಡಿದ್ದಾರೆ.

ದುಬೆ ಅವರ ಶೈಕ್ಷಣಿಕ ಅರ್ಹತೆಗಳ ಸತ್ಯಾಸತ್ಯತೆಯ ಬಗ್ಗೆ ಮೊಯಿತ್ರಾ ಅವರು ಇತ್ತೀಚೆಗೆ ಪ್ರಶ್ನೆಗಳನ್ನು ಕೇಳಿದ್ದರು ಮತ್ತು ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ. ಇದಕ್ಕೆ ಅವರು ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಮೊಯಿತ್ರಾ ಮತ್ತು ವಕೀಲ ದೇಹದ್ರಾಯ್ ನಿಕಟ ಸ್ನೇಹಿತರಾಗಿದ್ದರು, ಆದರೆ ಭಿನ್ನಾಭಿಪ್ರಾಯ ಹೊಂದಿದ್ದರು ಎಂದು ನೋಟಿಸ್ ಹೇಳುತ್ತದೆ. ಮೊಯಿತ್ರಾ ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಲು ಪತ್ರಕರ್ತರನ್ನು ಒತ್ತಾಯಿಸಲು ದೇಹದ್ರಾಯ್ ಪ್ರಯತ್ನಿಸಿದರು. ಆದರೆ ಪುರಾವೆಗಳ ಕೊರತೆಯಿಂದಾಗಿ ಯಾರಿಗೂ ಮನವರಿಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ನೊಟೀಸ್‌ನಲ್ಲಿ ಹೇಳಲಾಗಿದೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಮೊಯಿತ್ರಾ ಮತ್ತು ಇತರ ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೊಯಿತ್ರಾ ಅವರು ಸಂಪೂರ್ಣವಾಗಿ ಆಧಾರರಹಿತ ಆರೋಪ ಎಂದಿದ್ದು, ಆರೋಪವನ್ನು ತಿರಸ್ಕರಿಸಿದ್ದಾರೆ. ಮೊಯಿತ್ರಾ ಅವರು ಸಂಸತ್ತಿನ ಸದಸ್ಯರಾಗಿ ತನ್ನ ಕರ್ತವ್ಯಗಳ ನಿರ್ವಹಣೆಗೆ ಯಾವುದೇ ರೀತಿಯ ಸಂಭಾವನೆ ಅಥವಾ ನಗದು ಅಥವಾ ಉಡುಗೊರೆ ಅಥವಾ ಪ್ರಯೋಜನವನ್ನು ಪಡೆದಿಲ್ಲ ಎಂದು ಹೇಳಿದ್ದಾರೆ.

ಸ್ಪೀಕರ್‌ಗೆ ಬರೆದ ಪತ್ರ ಮತ್ತು ಎಲ್ಲಾ ಆರೋಪಗಳನ್ನು ಹಿಂತೆಗೆದುಕೊಳ್ಳುವಂತೆ ಮತ್ತು ಮೊಯಿತ್ರಾ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ನೋಟಿಸ್‌ನಲ್ಲಿ ದುಬೆ ಮತ್ತು ದೇಹಾದ್ರಾಯ್ ಅವರಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...