Homeಮುಖಪುಟಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಮ್ಮ ಸಂವಿಧಾನದ ಮೂಲತತ್ವಗಳನ್ನು ರಕ್ಷಿಸಲು ನ್ಯಾಯಾಂಗ ಯಾವಾಗ ವಿಫಲವಾಯಿತೋ ಅಂದೇ ಅದು ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿತು ಎಂದು ಮಹುವಾ ಗುಡುಗಿದ್ದರು.

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಾಧೀಶರ ಕುರಿತು ಸಂಸತ್ತಿನಲ್ಲಿ ಟೀಕೆ ಮಾಡಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರ ವಿರುದ್ಧ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದೆ.

ಸಂಸತ್ತಿನಲ್ಲಿ ಆಕ್ರೋಶದ ಮಾತುಗಳ ಮೂಲಕ ಗಮನ ಸೆಳೆದ ಮೊಹುವಾ ಮೊಯಿತ್ರ “ಭಾರತದ ಮಾಜಿ ಮುಖ್ಯ ನ್ಯಾಯಾಧೀಶರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗುತ್ತದೆ. ಅದನ್ನು ಅವರೇ ವಿಚಾರಣೆ ನಡೆಸಿ ಕ್ಲಿನ್‌ಚಿಟ್ ಕೊಟ್ಟುಕೊಳ್ಳುತ್ತಾರೆ. ಅವರು ನಿವೃತ್ತರಾದ ಮೂರೇ ತಿಂಗಳಿಗೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿ, ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗುತ್ತದೆ. ಅಂದೇ ನ್ಯಾಯಾಂಗ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿತು” ಎಂದು ಆರೋಪಿಸಿದ್ದರು.

ನಮ್ಮ ಸಂವಿಧಾನದ ಮೂಲತತ್ವಗಳನ್ನು ರಕ್ಷಿಸಲು ನ್ಯಾಯಾಂಗ ಯಾವಾಗ ವಿಫಲವಾಯಿತೋ ಅಂದೇ ಅದು ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿತು ಎಂದು ಮಹುವಾ ಗುಡುಗಿದ್ದರು.

ನರೇಂದ್ರ ಮೋದಿ ಸರ್ಕಾರವು ದ್ವೇಷ, ಸಣ್ಣತನ ಮತ್ತು ಧರ್ಮಾಂಧತೆಯನ್ನು ಅಪ್ಪಟ ಫ್ಯಾಸಿಸ್ಟ್ ಮಾದರಿಯಲ್ಲಿ ಅನುಸರಿಸುತ್ತಿದೆ. ಸುಳ್ಳು ಮತ್ತು ಅಪಪ್ರಚಾರವನ್ನೇ ತನ್ನ ಕಾಯಕವಾಗಿಸಿಕೊಂಡು ಹೇಡಿತನವನ್ನೇ ಧೈರ್ಯವೆಂಬಂತೆ ತೋರಿಸಲು ಯತ್ನಿಸುತ್ತಿದೆ ಎಂದು ಅವರು ಕಿಡಿಕಾರಿದ್ದರು.

ಸದನದ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಹುವಾ ಮೊಯಿತ್ರ ವಿರುದ್ಧ ಹಕ್ಕು ಚ್ಯುತಿ ಮಂಡಿಸುವುದಾಗಿ ಹೇಳಿದ್ದರು. ಅಯೋಧ್ಯೆ ತೀರ್ಪು ಮತ್ತು ರಾಮಮಂದಿರದ ಕುರಿತಾಗಿ ಮಹುವಾ ಮಾತನಾಡಿರುವುದು ಗಂಭೀರ ವಿಷಯ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.

ತದನಂತರ “ಭಾರತದ ಕರಾಳ ಸಮಯದಲ್ಲಿ ಸತ್ಯವನ್ನು ಮಾತನಾಡಿದ್ದಕ್ಕಾಗಿ ನನ್ನ ವಿರುದ್ಧ ಹಕ್ಕು ಚ್ಯುತಿ ಉಲ್ಲಂಘನೆಯನ್ನು ಪ್ರಾರಂಭಿಸಿದರೆ ಅದು ನಿಜಕ್ಕೂ ಒಂದು ಹಕ್ಕು” ಎಂದು ಮಹುವಾ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದರು.

ಆದರೆ ಕಾನೂನು ಅಭಿಪ್ರಾಯಗಳು ಮಹುವಾ ಮೊಯಿತ್ರ ಪರವಾಗಿದ್ದು, ಅವರು ಮಾಜಿ ಮುಖ್ಯ ನ್ಯಾಯಮೂರ್ತಿಯ ವಿರುದ್ಧ ಮಾತನಾಡಿದ್ದಾರೆಯೇ ಹೊರತು ಹಾಲಿ ನ್ಯಾಯಮೂರ್ತಿಗಳ ವಿರುದ್ಧವಲ್ಲ. ಹಾಗಾಗಿ ಮಾಜಿ ಸಿಜೆಐ ಅನ್ನು ಉನ್ನತ ಸ್ಥಾನದಲ್ಲಿ ಇಂದು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲವಾದ್ದರಿಂದ ಮಹುವಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲಿನ ಕೇಂದ್ರ ಸರ್ಕಾರದ ದಬ್ಬಾಳಿಕೆಯನ್ನು ಖಂಡಿಸಿದ್ದ ತಮ್ಮ ಭಾಷಣದಲ್ಲಿ ಖಂಡಿಸಿದ್ದ ಮಹುವಾ, “ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಸುಳ್ಳುಗಳು ಮತ್ತು ಅಪಪ್ರಚಾರವನ್ನು ಸರ್ಕಾರ ತನ್ನ ಪ್ರೊಪಗಂಡಾವನ್ನಾಗಿ ಮಾಡಿಕೊಂಡಿದೆ. ಯಾವುದೇ ಚರ್ಚೆಯಿಲ್ಲದೆ ಕೃಷಿ ಕಾಯ್ದೆಗಳನ್ನು ಹೇರಲಾಗಿದೆ” ಎಂದು ಟೀಕಿಸಿದ್ದರು.

ತಮ್ಮ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬುದನ್ನು ಸಹ ಮಹುವಾ ಮೊಯಿತ್ರ ವ್ಯಂಗ್ಯವಾಡಿದ್ದಾರೆ. “ಏನು? ಯಾವುದೇ ಕ್ರಮವಿಲ್ಲವೇ? ಒಳ್ಳೆಯ ಹೋರಾಟವನ್ನು ಮಾಡಲು ನಾನು ಸಜ್ಜಾಗುತ್ತಿದ್ದಾಗ!” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...