Homeಮುಖಪುಟರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

ರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ಅವರು ಬಿಎಚ್‌ಯು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಪಿಗಳು ಯೋಗಿ ಆದಿತ್ಯನಾಥ್‌ ಜೊತೆಗಿರುವ ಫೋಟೋ ಹಂಚಿಕೊಂಡು ಅವರ ಆಸ್ತಿಗಳನ್ನು ಬುಲ್ಡೋಜರ್ ಚಲಾಯಿಸಿ ನೆಲಸಮಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಆದಿತ್ಯನಾಥ್ ಅವರು 2017ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಂದರ್ಶನವೊಂದರಲ್ಲಿ, ಯಾರಾದರೂ ಅಪರಾಧ ಮಾಡಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತದೆ (Agar aparadh karenge, toh thok diye jayenge). ಆ ಬಳಿಕ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಲವು ಅಪರಾಧಿಗಳ ಎನ್‌ಕೌಂಟರ್‌ಗಳು ನಡೆದಿದೆ.

ಉತ್ತರ ಪ್ರದೇಶದ ಐಐಟಿ-ಬಿಎಚ್‌ಯು ಕ್ಯಾಂಪಸ್‌ನಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾದ 2 ತಿಂಗಳ ನಂತರ, ಪೊಲೀಸರು ಭಾನುವಾರ ಮೂವರನ್ನು ಬಂಧಿಸಿದ್ದಾರೆ. ವಿರೋಧ ಪಕ್ಷಗಳು ಆರೋಪಿಗಳು ಬಿಜೆಪಿ ಪದಾಧಿಕಾರಿಗಳು ಎಂದು ಆರೋಪಿಸಿದ್ದು, ಮೂವರು ಆರೋಪಿಗಳು ತಾವು ಬಿಜೆಪಿಯ ಐಟಿ ಸೆಲ್ ಸದಸ್ಯರು ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಕೂಡ ಬಿಜೆಪಿಯನ್ನು ಈ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದು,  ಬಿಜೆಪಿ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ, ಅವರು ಮಹಿಳೆಯರಿಗೆ “ಬಲತ್ಕಾರಿ (ಅತ್ಯಾಚಾರಿ) ಜನತಾ ಪಕ್ಷ” ಆಗಿರುವುದು ಸತ್ಯ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ನ ಡಾಲಿ ಶರ್ಮಾ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರಪ್ರದೇಶದಲ್ಲಿ ದುರ್ಬೀನು ಹಿಡಿದು ಹುಡುಕಿದರೂ ಕ್ರಿಮಿನಲ್‌ಗಳು ಸಿಗುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದರು. ದುರ್ಬೀನುಗಳ ಅಗತ್ಯವಿಲ್ಲ ಏಕೆಂದರೆ ನಿಮ್ಮ ಪಕ್ಕದಲ್ಲಿ ಅಪರಾಧಿಗಳು ಕುಳಿತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಕ್ರಿಮಿನಲ್‌ಗಳ ಮನೆಗಳಿಗೆ ಬುಲ್ಡೋಜರ್‌ಗಳು ಹೋಗುತ್ತಿರುವುದು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ನ.1ರ ರಾತ್ರಿ ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಮತ್ತು ಸಕ್ಷಮ್ ಪಟೇಲ್ ಅವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದರು ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ತನ್ನ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸಂತ್ರಸ್ತೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿ ಫೋನ್‌ನ್ನು ಕಸಿದುಕೊಂಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 354, ಸಾಮೂಹಿಕ ಅತ್ಯಾಚಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...