Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...