Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...